Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ನೋಡಿಕೊಳ್ಳಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಗ್ರಹ
ತಾಜಾ ಸುದ್ದಿ

ಸಮೀಕ್ಷೆಯಿಂದ ಯಾರು ಹೊರಗೆ ಉಳಿಯದಂತೆ ನೋಡಿಕೊಳ್ಳಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಗ್ರಹ

Dinamaana Kannada News
Last updated: September 21, 2025 1:01 pm
Dinamaana Kannada News
Share
Siddarameshwara Swamiji
SHARE
ಚಿತ್ರದುರ್ಗ ಸೆ. 21 ರಾಜ್ಯ ಸರ್ಕಾರ ಇಂದಿನಿಂದ ನಡೆಸಲು ಉದ್ದೇಶಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ಸಹಾ ನಡೆಸಬೇಕು, ಇದಕ್ಕೆ ಯಾವುದೇ ರೀತಿಯಲ್ಲಿ ಕಾಲಮಿತಿಯನ್ನು ಹಾಕುವುದು ಬೇಡ ಈ ಸಮೀಕ್ಷೆಯಿಂದ ಯಾರೂ ಸಹಾ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಚಿತ್ರದುರ್ಗ ನಗರದ ಹೊರವಲಯದ ಭೋವಿ ಗುರುಪೀಠದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಗಣತಿಯನ್ನು ರಾಜ್ಯದಲ್ಲಿ ನಡೆಸುತ್ತಿರುವುದಕ್ಕೆ ಸ್ವಾಗತ, ಈ ಸಮೀಕ್ಷೆ ರಾಜ್ಯದಲ್ಲಿ ವಿವಿಧ ಜಾತಿಗಳ ಪ್ರಗತಿಗೆ ಕಾರಣವಾಗಿದೆ. ಈ ಸಮೀಕ್ಷೆಯನ್ನು ಯಾರೂ ಸಹಾ ನಿರ್ಲಕ್ಷ್ಯ ಮಾಡಬಾರದು, ಎಲ್ಲಾರು ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡುವುದರ ಮೂಲಕ ನಿಮ್ಮ ನಿಮ್ಮ ಜಾತಿಯನ್ನು ಗುರುತಿಸಿಕೊಳ್ಳಬೇಕಿದೆ, ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೆಲಸಕ್ಕಾಗಿ ನಮ್ಮ ರಾಜ್ಯವನ್ನು ಬಿಟ್ಟು ಬೇರೆ ಕಡೆಗಳಲ್ಲಿ ಹಲವಾರು ಜನತೆ ವಲಸೆ ಹೋಗಿದ್ದಾರೆ. ಇಂತಹವರನ್ನು ಸಹಾ ಈ ಗಣತಿಯಲ್ಲಿ ಒಳಪಡಿಸಬೇಕಿದೆ. ಕಟ್ಟಡ ಕೆಲಸಕ್ಕಾಗಿ ಬೆಂಗಳೂರು ಸೇರಿದಂತೆ ಮಹಾನಗರಗಳಿಗೆ ಹೋಗಿದ್ದಾರೆ. ಉತ್ತರ ಕರ್ನಾಟಕದಿಂದ ಕಾಫೀ ತೋಟಗಳಲ್ಲಿ ಕೆಲಸ ಮಾಡಲು ಹೋಗಿದ್ದಾರೆ  ಕೊಪ್ಪಳ, ಬಳ್ಳಾರಿ ಸೇರಿದಂತೆ ನಾನಾ ಜಿಲ್ಲೆಗಳಿಂದ ಜಿಲ್ಲೆಯನ್ನು ಬಿಟ್ಟು ಹೊರಗಡೆ ಹೋಗಿರುತ್ತಾರೆ ಇಂತಹರನ್ನು ಸಹಾ ಸಮೀಕ್ಷೆ ಮಾಡಲು ಪ್ರತ್ಯೇಕವಾದ ತಂಡವನ್ನು ನೇಮಕ ಮಾಡುವಂತೆ ಸರ್ಕಾರವನ್ನು ಶ್ರೀಗಳು ಆಗ್ರಹಿಸಿದರು.
ಮೈಸೂರಿನ ದಸರಾ ಹಬ್ಬ ನಾಡಹಬ್ಬವಾಗಿ ಪರಿಣಿಮಿಸಿದೆ. ಈ ಸಮಯದಲ್ಲಿ ಊರಿನಿಂದ ಹೊರಗೆ ಹೋದವರು ಸಹಾ ವಾಪಾಸ್ಸು ಬರುತ್ತಾರೆ. ಇದೇ ಉತ್ತರ ಕರ್ನಾಟಕದಲ್ಲಿ ದೀಪಾವಳಿ ಹಬ್ಬ ನಾಡಹಬ್ಬವಾಗಿದೆ. ಈ ಸಮಯದಲ್ಲಿ ಸಹಾ ಊರಿನಿಂದ ಹೋರಗಡೆ ಹೋದವರು ವಾಪಾಸ್ಸು ಬರುತ್ತಾರೆ ಇಂತಹ ಸಮಯದಲ್ಲಿ ಸರ್ಕಾರ ಮಾಡುವ ಸಮೀಕ್ಷೆ ಸರಿಯಿದೆ. ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಸಮೀಕ್ಷೆಯನ್ನು ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಸಮೀಕ್ಷೆಯನ್ನು ಮಾಡುವವರಿಗೆ ಕಾಲ ಮಿತಿಯನ್ನು ಹಾಕದೇ ಗಣತಿಯಲ್ಲಿ ರಾಜ್ಯದ 7 ಕೋಟಿ ಜನ  ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಕಾಲವನ್ನು ನೀಡಬೇಕಿದೆ. ರಾಜ್ಯದ ಎಲ್ಲಾ ಜನತೆ ಈ ಸಮಿಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಖಾತರಿಯಾದ ಮೇಲೆ ಸಮೀಕ್ಷೆಯನ್ನು ಪೂರ್ಣ ಮಾಡುವಂತೆ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Read also : ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ
2011ರ ಗಣತಿಯಲ್ಲಿ  ಪ. ಜಾತಿ ಸಮಾಜದ ಜನಸಂಖ್ಯೆ 1.08 ಕೋಟಿ ಇತ್ತು ಆದರೆ ನಾಗ ಮೋಹನ್ ದಾಸ್ ಆಯೋಗದ ವರದಿಯಲ್ಲಿ ಪರಿಶಿಷ್ಟ ಜಾತಿಯವರ ಸಮೀಕ್ಷೆಯನ್ನು ಮಾಡುವಾಗ 1.05 ಕೋಟಿ ಎಂದು ತೋರಿಸಿದ್ದಾರೆ, ಇದು ಸರಿಯಾದ ಸಮೀಕ್ಷೆಯಲ್ಲ ಹತ್ತು ವರ್ಷದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಕನಿಷ್ಠ 25ಲಕ್ಷ ಹಾಗೂ ಭೋವಿ ಸಮುದಾಯ ಕನಿಷ್ಠ 3 ಲಕ್ಷದಿಂದ ರಿಂದ 5 ಲಕ್ಷದವರೆಗೆ ಜನಸಂಖ್ಯೆಯಷ್ಟದಾರೂ ಏರಿಕೆಯಾಗಿರುತ್ತದೆ. ಆದರೆ, ಆಯೋಗವೂ ಕಡಿಮೆ ಜನಸಂಖ್ಯೆಯನ್ನು ತೋರಿಸಿದೆ. ಆದರೆ, ಈ ಬಾರಿಯ ಸಮೀಕ್ಷೆಯಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕಿದೆ. ನಮ್ಮ ಸಮುದಾಯದವರೆಲ್ಲರೂ ಸಹ ಜಾತಿ ಭೋವಿ ಅಥವಾ ವಡ್ಡರ ಎಂದು ಬರೆಸುವುದರ ಮೂಲಕ ನಮ್ಮ ಸಂಘಟನೆಯನ್ನು ಪ್ರದರ್ಶನ ಮಾಡಬೇಕಿದೆ, ನಮ್ಮ ಸಮುದಾಯ ಅರೆಅಲೆಮಾರಿಯಾಗಿದ್ದು ಕೆಲಸದ ನಿಮ್ಮಿತ್ತ ಊರನ್ನು ಬಿಟ್ಟು ಹೋಗಿರುತ್ತಾರೆ. ಈ ಸಮಯದಲ್ಲಿ ಊರಿನಲ್ಲಿ ಇರುವುದರ ಮೂಲಕ ಗಣತಿದಾರರು ಬಂದಾಗ ಸರಿಯಾದ ರೀತಿಯಲ್ಲಿ ಮಾಹಿತಿಯನ್ನು ನೀಡುವುದರ ಮೂಲಕ ಭೋವಿ ಸಮುದಾಯದ ಸರಿಯಾದ ರೀತಿಯಲ್ಲಿ ಸಂಖ್ಯೆಯನ್ನು ನಮೂದಿಸಬೇಕಿದೆ ಎಂದು ಶ್ರೀಗಳು ಸಮುದಾಯವರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಭೋವಿ ಗುರುಪೀಠದ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಗೌನಹಳ್ಳಿ ಗೋವಿಂದಪ್ಪ ಹಾಜರಿದ್ದರು.

48 ಕ್ರೈಸ್ತ ಜಾತಿಗಳಲ್ಲಿ 33 ಜಾತಿಗಳನ್ನು ಕೈ ಬಿಡಲು ಆಯೋಗದ ನಿರ್ಧಾರವಾಗಿದೆ.  ವೊಡ್ಡ ಕ್ರಿಶ್ಚಿಯನ್ ಹಾಗೂ ಪರಿಶಿಷ್ಟ ಜಾತಿಗಳನ್ನು ಕ್ರೈಸ್ತ ಪಟ್ಟಿಯಿಂದ ಕೈಬಿಡಲು ಶ್ರೀಗಳ ಅಗ್ರಹ.

ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ಹಿಂದೂ ಬಿಲ್ ಕೋಡ್ ನಲ್ಲಿ  ಬರುವ  ಭೋವಿ ಜನಾಂಗವನ್ನು ಧರ್ಮ-ಹಿಂದೂ, ಜಾತಿ- ಭೋವಿ, ಉಪಜಾತಿ-ವಡ್ಡರ ಎಂದು ಬರೆಯಿಸಿ, ಜಾತಿಯ ಪರ್ಯಾಯ ಪದಗಳನ್ನು ಕೋಡ್ ನಂ ಬಿ.23.2 ರಿಂದ ಬಿ.23.10 ರವರಿಗೆ ನಮೂದಿಸಬೇಕು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dairy farming training ದಾವಣಗೆರೆ|ಸೆ.22,23 ರಂದು ಆಧುನಿಕ ಹೈನುಗಾರಿಕೆ ತರಬೇತಿ
Next Article Davanagere ದಾವಣಗೆರೆ : ಸಮೀಕ್ಷೆಯಲ್ಲಿ “ಮಾದಿಗ” ಎಂದೇ ನಮೂದಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿನಮಾನ ಹೆಮ್ಮೆ : ಭಾವೈಕ್ಯದ ಅನನ್ಯ ಬಂಧು- ಎಲ್.ಖಾದರ್ ಬಾಷಾ

Kannada News | Dinamaanada Hemme  | Dinamaana.com | 14-07-2024 ಪಿಂಜಾರ ಬೀದಿಯ ಪೀರ್ ಬಾಷಾ ಮತ್ತು ಬಿಚ್ಚುಗತ್ತಿ…

By Dinamaana Kannada News

ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   

ದಾವಣಗೆರೆ: ಅಂತಾರಾಷ್ಟ್ರೀಯ ಮಾನದಂಡಗಳನ್ನು ಹೊಂದಿರುವ ಭಾರತದ ಅತಿದೊಡ್ಡ ಫರ್ಟಿಲಿಟಿಚೈನ್‍ಗಳಲ್ಲಿ ಒಂದಾದ ನೋವಾ ಐವಿಎಫ್ ಫರ್ಟಿಲಿಟಿ ದಾವಣಗೆರೆಯಲ್ಲಿ ತೆರೆದಿದೆ. ಜೀವನಶೈಲಿಯ ಬದಲಾವಣೆಗಳು…

By Dinamaana Kannada News

Davanagere : ಭದ್ರಾ ಕಾಲುವೆ- ಮಳೆ ನೀರು ಹರಿದು ನೆರೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ

ದಾವಣಗೆರೆ  (Davanagere) : ಮಾಯಕೊಂಡ ಕ್ಷೇತ್ರದ  ವ್ಯಾಪ್ತಿಯ ಭದ್ರಾ ಕಾಲುವೆಯಲ್ಲಿ ನೀರು ತುಂಬಿ ಹರಿದು ನೆರೆ ಹಾನಿಯಾದ ಪ್ರದೇಶಗಳಿಗೆ ಬುಧವಾರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?