Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

Dinamaana Kannada News
Last updated: June 14, 2025 12:44 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗ ಗಳವರೆಗೂ ಹೀಗೆಯೂ ಉಳಿಯಬೇಕಿದೆ ಎಂದು ಮುಖ್ಯ ಶಿಕ್ಷಕ ಆರ್.ಪ್ರಭು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಹೊಂಡದ ರಸ್ತೆಯಲ್ಲಿರುವ ಶ್ರೀ ದುರ್ಗಾಂಬಿಕಾ ಸಂಯುಕ್ತ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಶನಿವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ಅವರು ಮಾತನಾಡಿದರು.
ಬೇಸರವೆಂದರೆ ನಾವು ಮಾಡುತ್ತಿರುವ ಅರಣ್ಯನಾಶ, ಗಣಿಗಾರಿಕೆ, ಕೈಗಾರಿಕೀಕರಣ ಸೇರಿದಂತೆ ಹಲವಾರು ಮಾನವ ಚಟುವಟಿಕೆಗಳಿಂದ ಪರಿಸರವು ಇಂದು ಬಹಳ ಹಾನಿಗೊಳಗಾಗುತ್ತಿದೆ. ಪರಿಸರದೊಂದಿಗೆ ಮಾನವನ ಹಸ್ತಕ್ಷೇಪದಿಂದಾಗಿ ಈ ಹಾನಿಯನ್ನು ಕಡಿಮೆ ಮಾಡುವುದು ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ವಿಶ್ವ ಪರಿಸರ ದಿನವನ್ನು ಆಚರಿಸುವ ಯೋಚನೆಯೊಂದಿಗೆ ಬಂದಿತು ಎಂದರು.
Read also : ಶಾಮನೂರು ಎಂಬುದು ಜಾತಿ ನಿರಸನದ ‘ಮೋಸ್ಟ್ ಸೆಕ್ಯುಲರ್’ ಬ್ರಾಂಡ್ ನೇಮ್
ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಿತ್ರಕಲೆ ಸ್ಪರ್ಧೆಗಳು, ರಸಪ್ರಶ್ನೆ ಸ್ಪರ್ಧೆಗಳು, ಕಲಾ ಪ್ರದರ್ಶನಗಳು, ಪ್ರಬಂಧ ಬರವಣಿಗೆ, ಭಾಷಣ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ಪ್ರತಿ ವರ್ಷ  ವಿಶ್ವ ಪರಿಸರ ದಿನವನ್ನು ನಿರ್ಧಿಷ್ಟ ಥೀಮ್ ನೊಂದಿಗೆ ಆಚರಿಸುತ್ತಾ ಬರಲಾಗಿದೆ ಎಂದರು.
ವಿಶ್ವ ಪರಿಸರ ದಿನದ ಉದ್ದೇಶ ಪ್ಲಾಸ್ಟಿಕ್ ಅನ್ನು ನಿಷೇಧಿಸುವುದು, ಹೆಚ್ಚು ಮರ ಗಿಡಗಳನ್ನು ನೆಡುವುದು, ನೀರನ್ನು ಉಳಿಸುವುದು, ಮರುಬಳಕೆ ಮಾಡುವುದು, ವನ್ಯಜೀವಿಗಳು ಮತ್ತು ಪ್ರಾಣಿಗಳನ್ನು ಉಳಿಸುವುದು, ಇವು ಉತ್ತಮ ಪರಿಸರಕ್ಕೆ ಕಾರಣವಾಗಿದೆ. ನಾವು ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ತಮ್ಮ ಚಟುವಟಿಕೆಗಳ ಬಗ್ಗೆ ಜಾಗೃತರಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
 ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಜಾನ್ಸಿ ಲಕ್ಷ್ಮೀ ಮಾತನಾಡಿ, ಮನುಷ್ಯನಿಂದಲ್ಲೇ ಪರಿಸರ ನಾಶವಾಗುತ್ತಿದೆ. ನಮ್ಮ ಪರಿಸರದ ಸುತ್ತಮುತ್ತ ಗಿಡ ಮರಗಳನ್ನು ಬೆಳೆಸು ವುದರ ಮೂಲಕ ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡಬೇಕು. ಪ್ರಸ್ತುತ ದಿನದಲ್ಲಿ ಮನುಷ್ಯ ಸ್ವಾರ್ಥಿಯಾಗಿ ಮರಗಳನ್ನು ಕಡಿದು ಮರುಭೂಮಿ ಮಾಡಲು ಹೊರಟ್ಟಿದ್ದಾನೆ. ಪರಿಸರ ನಾಶದಿಂದ ಪ್ರತಿಯೊಬ್ಬರು ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯುವ ಜನಾಂಗ ಗಿಡನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗ ಬೇಕು. ಗ್ರಾಮದಲ್ಲಿ ಶಿಬಿರಾರ್ಥಿಗಳು ಗಿಡಗಳನ್ನು ನೆಟ್ಟಿದ್ದಾರೆ. ಅದನ್ನು ಪೋಷಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎಚ್.ಎಸ್. ಶೃತಿ,  ಸುದಿನ, ಶಿವಯ್ಯ, ಬಿ.ಎಸ್.ವಿದ್ಯಾ, ಬಿ.ಟಿ.ಮಮತಾ, ಮನು, ಹರೀಶ್, ಪವಿತ್ರ, ಕಲಾವತಿ, ಚೇತನ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
TAGGED:Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Shamanur Shivashankarappa ಶಾಮನೂರು ಎಂಬುದು ಜಾತಿ ನಿರಸನದ ‘ಮೋಸ್ಟ್ ಸೆಕ್ಯುಲರ್’ ಬ್ರಾಂಡ್ ನೇಮ್
Next Article District Collector G.M. Gangadharaswamy ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 62 :  ಪಯಣದಲಿ….

Kannada News | Sanduru Stories | Dinamaana.com | 22-06-2024 ದುಷ್ಟತನ ಗಳಿಗೆ ಬಲಿಯಾದ ಸಮಾಜ  (Sanduru Stories)…

By Dinamaana Kannada News

ಜುಲೈ 6 ರಂದು ಉದ್ಯೋಗ ಮೇಳ

ದಾವಣಗೆರೆ ಜು.03 :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6…

By Dinamaana Kannada News

ಯೋಗ ಗುರು ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere): ನಗರದ ಪ್ರತಿಷ್ಠಿತ ಯೋಗ ಕೇಂದ್ರವಾದ ಎಸ್‍ಎಎಸ್‍ಎಸ್ ಯೋಗ ಫೆಡರೇಷನ್ ಸಂಸ್ಥಾಪಕ ಅಧ್ಯಕ್ಷರು ಹಾಗೂ ಅಂತಾರಾಷ್ಟ್ರೀಯ ಯೋಗ ಪಟು,…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?