Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್
ತಾಜಾ ಸುದ್ದಿ

ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್

Dinamaana Kannada News
Last updated: November 7, 2025 4:44 pm
Dinamaana Kannada News
Share
Davanagere
SHARE

ದಾವಣಗೆರೆ .07: ದೇಶದಾದ್ಯಂತ ಇದೇ ನವೆಂಬರ್ 9 ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಗುತ್ತಿದೆ. ಈ ದಿನದ ಅಂಗವಾಗಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ನ್ಯಾಯ, ಕಾನೂನಿನ ಅರಿವು, ನೆರವು ಒದಗಿಸುವುದು ಇದರ ಪ್ರಮುಖ ಉದ್ದೇಶವವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದರು.

ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬಡವರು, ಮಹಿಳೆಯರು, ಮಕ್ಕಳು, ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ, ಹಿರಿಯ ನಾಗರಿಕರಿಗೆ, ಮಕ್ಕಳ ರಕ್ಷಣೆ ಹಾಗೂ ವಿವಿಧ ರೀತಿಯಲ್ಲಿ ದೌರ್ಜನ್ಯಕ್ಕೊಳಗಾದ ಸಂತ್ರಸ್ಥರಿಗೆ, ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದವರಿಗೆ, ದೌರ್ಜನ್ಯಕ್ಕೆ ಒಳಗಾಗಿ ಮರಣ ಹೊಂದಿದ ಕುಟುಂಬದ ಸಂತ್ರಸ್ಥರಿಗೆ, ಅಂಗವಿಕಲರಿಗೆ, ವಿಶೇಷವಾಗಿ ಕಾರಾಗೃಹದಲ್ಲಿರುವ ಕೈದಿಗಳಿಗೂ ಸಹ ಉಚಿತ ಕಾನೂನಿನ ನೆರವು ನೀಡಲಾಗುತ್ತದೆ. ಹಾಗೆಯೇ ಜನ ಸಾಮಾನ್ಯರಿಗೆ ದಿನನಿತ್ಯದ ಅವಶ್ಯಕತೆಗೆ ಬೇಕಾದ ಕಾನೂನಿನ ಅರಿವು, ಜಾಗೃತಿ ಶಿಬಿರದ ಮೂಲಕ ಕಾನೂನು ನೆರವು ನೀಡಲಾಗುವುದು. ಲೋಕಾ ಅದಾಲತ್ ಮತ್ತು ಮಧ್ಯಸ್ಥಗಾರ ಕೇಂದ್ರ ಸ್ಥಾಪಿಸಿ ವ್ಯಾಜ್ಯ ಪೂರ್ವ ಮತ್ತು ನಂತರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುತ್ತಿದೆ.

Read also : ದಾವಣಗೆರೆ:ಗೋವುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗ

ಅದಷ್ಟೇ ಅಲ್ಲದೇ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರಿಗೆ ಹಾಗೂ ಬುಡಕಟ್ಟು ಸಮುದಾಯದವರಿಗೂ, ಪ್ರಕೃತಿ ವಿಕೋಪಕ್ಕೆ ಒಳಗಾ ದಂತಹವರಿಗೂ ಸಂವಿಧಾನದ ಆಶಯದಂತೆ ಸಮಾನ ಅವಕಾಶ ಮತ್ತು ಕಾನೂನು ಅರಿವು ನೆರವು ನೀಡುವಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕಾನೂನು ಸೇವೆಗಳ ಪ್ರಾಧಿಕಾರ ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾನೂನಿನ ಸಂಘರ್ಷಕ್ಕೆ ಒಳಗಾದ ಮತ್ತು 3 ಲಕ್ಷ ಆದಾಯ ಮಿತಿ ಹೊಂದಿ ದ ಇತರೆ ವರ್ಗದವರಿಗೂ ಎಲ್ಲಾ ರೀತಿಯ ಸಮಸ್ಯೆಗಳನ್ನ ಪರಿಗಣನೆಗೆ ತೆಗೆದುಕೊಂಡು ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಸಮಾಜದಲ್ಲಿ ಎಲ್ಲರೂ ಕಾನೂನು ತಜ್ಞರಾಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕನಿಷ್ಠ ಕಾನೂನು ಅರಿವು ಮೂಡಿಸುವುದರ ಜೊತೆಗೆ ಉಚಿತ ಕಾನೂನು ನೆರವು ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಅಂದರೆ ತಮ್ಮ ವಿರುದ್ಧ ಆರೋಪ ಬಂದಾಗ ಸಿವಿಲ್ ದಾವೆ ಹೂಡಲು, ಅಥವಾ ನ್ಯಾಯಾಂಗ ಬಂಧನದಲ್ಲಿ ಇರುವಂತಹ ಆರೋಪಿಯು ತನ್ನ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ಶಕ್ತರಿರುವುದಿಲ್ಲವೋ ಅವರಿಗೆ ಸರ್ಕಾರಿ ಕಾನೂನು ಅಭಿರಕ್ಷಕರಿಂದ ಉಚಿತ ಕಾನೂನು ನೆರವು ಒದಗಿಸಲಾಗುತ್ತದೆ.

ಈ ನಿಟ್ಟಿನಿಲ್ಲಿ ಈಗಾಗಲೇ ಕಳೆದ ಒಂದು ವಾರದಿಂದ ವಿವಿಧ ಶಾಲಾ – ಕಾಲೇಜ್, ಹಾಸ್ಟೆಲ್‌ಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕಾಗಿ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ 25 ಪ್ಯಾನಲ್ ವಕೀಲರು, 37 ಮಧ್ಯಸ್ಥಗಾರ, 100 ಪ್ಯಾನಲ್ ಸ್ವಯಂ ಸೇವಕರು, 08 ಕಾನೂನು ನೆರವು ಅಭಿರಕ್ಷಕರನ್ನು ನೇಮಿಸಲಾಗಿದೆ.

ಹರಿಹರ, ಹೊನ್ನಾಳಿ, ಜಗಳೂರು ಹಾಗೂ ಚನ್ನಗಿರಿಯಲ್ಲಿ ತಾಲ್ಲೂಕುವಾರು ತಲಾ 25 ಕಾನೂನು ಸ್ವಯಂ ಸೇವಕ ಮತ್ತು 10 ಪ್ಯಾನಲ್ ವಕೀಲರು ಸೇರಿ ಒಟ್ಟು 204 ಕಾನೂನು ಅರಿವು, ನೆರವು ನೀಡಲು ನೇಮಿಸಲಾಗಿದೆ. ಅಲ್ಲದೇ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಒಬ್ಬ ಉಚಿತ ಕಾನೂನು ಸಲಹೆಗಾರರನ್ನು ನೇಮಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕೆಂದರು.

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಶಾಲಾ, ಕಾಲೇಜು, ಹಾಸ್ಟೆಲ್, ಗ್ರಾಮ ಪಂಚಾಯಿತಿ ಹಾಗೂ ಹಾಸ್ಪಿಟಲ್‌ಗಳು ಸೇರಿ ಒಟ್ಟು 34 ಸ್ಥಳಗಳಲ್ಲಿ ಕಾನೂನು ಅರಿವು ಕುರಿತು ಜಾಗೃತಿ ಕಾರ್ಯಗಾರ ನಡೆಸಲಾಗಿದೆ.

ಇದೇ ನವೆಂಬರ್ 11 ರಂದು ರಾಮ್ ಅಂಡ್-ಕೊ ವೃತ್ತದಲ್ಲಿ ಆರ್‌ಎಲ್ ಕಾನೂನು ಕಾಲೇಜು ವತಿಯಿಂದ ಈ ಕುರಿತು ಜಾಗೃತಿ ಮೂಡಿಸಲು ಕಿರು ಬೀದಿ ನಾಟಕ ಹಮ್ಮಿಕೊಳ್ಳಲಾಗಿದೆ.

ನ.15ರಂದು ಆರ್‌ಎಲ್ ಕಾನೂನು ವಿದ್ಯಾಲಯದಲ್ಲಿ ಜಾಗೃತಿ ಕಾರ್ಯಗಾರ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ ಅವರು. ದೇಶದ ಒಟ್ಟಾರೆ ಜನಸಂಖ್ಯೆಯ ಪೈಕಿ ಶೇ.10 ರಷ್ಟು ಜನರು ತೊಂದರೆ, ಖಾಯಿಲೆ ಹಾಗೂ ಮಾನಸಿಕ ಅಸ್ಥಿರತೆಯಿಂದ ಬಳಲುತ್ತಿದ್ದಾರೆ. ಸಾಮಾಜಿಕ ಕಳಕಳಿಯಿಂದ ಪ್ರತಿದಿನವೂ ಇದೇ ರೀತಿ ಕಾನೂನು ಸೇವಾ ಮಹತ್ವದ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುವುದು ಎಂದರು.

ಉಚಿತ ಸಹಾಯವಾಣಿ ಸಂಖ್ಯೆ:
ಸಮಾಜದಲ್ಲಿ ಇಂದಿಗೂ ಕೆಲವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಹೀಗೆ ಯಾವ ಇಲಾಖೆಗಳಲ್ಲಿ ಯಾವ ರೀತಿಯ ಸೇವೆಗಳನ್ನು ಪಡೆಯಬಹುದು ಎಂಬ ಪರಿವೇ ಇಲ್ಲ. ಸಾರ್ವಜನಿಕರ ಮತ್ತು ಸಂಬಂಧಪಟ್ಟ ಇಲಾಖೆಗಳ ನಡುವೆ ನ್ಯಾಯಾಲಯ ಸೇತುಬಂದವಾಗಿ ಕಾರ್ಯನಿರ್ವಹಿಸಲಿದೆ. ಯಾವುದೇ ಒಬ್ಬ ವ್ಯಕ್ತಿಗೆ ಕಾನೂನು ಸಂಘರ್ಷದಲ್ಲಿ ಸಿಲುಕಿಕೊಂಡವರು ಅಥವಾ ಕಾನೂನು ಬಗ್ಗೆ ಅರಿವಿಲ್ಲದೇ ಇರುವ ಯಾರೇ ಆಗಲಿ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯಾಣಿ ಸಂಖ್ಯೆ 15100 ಕರೆ ಮಾಡಿ ಮಾಹಿತಿ ಪಡೆಯಬಹುದು.

ಈ ವೇಳೆ ಮುಖ್ಯ ಕಾನೂನು ಅಭಿರಕ್ಷಕ ಕೆ.ಕೆಂಚಪ್ಪ ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ:ಗೋವುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗ
Next Article Devotee Kanakadasa ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis | ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.ಈ ಸಂದರ್ಭದಲ್ಲಿ…

By Dinamaana Kannada News

ಆಹಾರ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ಆರೋಪ: ತನಿಖೆ ನಡೆಸಿ ವರದಿ ನೀಡುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ

ದಾವಣಗೆರೆ: ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಟೆಂಡರ್ ಪಡೆದ ಗುತ್ತಿಗೆದಾರ ಆಹಾರ ಸಾಮಾಗ್ರಿ ಸರಬರಾಜು ಮಾಡದೆ, ಮನಸಿಗೆ…

By Dinamaana Kannada News

ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್

ದಾವಣಗೆರೆ : ವಿಜ್ಞಾನ ವಿಷಯ ಓದುವ ವಿದ್ಯಾರ್ಥಿಗಳ ಮನಸ್ಥಿತಿ, ಅಭಿರುಚಿಗಳು ಬದಲಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ  ರವಿಕುಮಾರ್ ಕೆ.ವಿ., ಸಲಹೆ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?