Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಪಿ.ಎಂ.ಅನುರಾಧ
ತಾಜಾ ಸುದ್ದಿ

Davanagere | ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಡಾ.ಪಿ.ಎಂ.ಅನುರಾಧ

Dinamaana Kannada News
Last updated: September 10, 2024 12:07 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) : ಮೌಲ್ಯಾಧಾರಿತ ಶಿಕ್ಷಣ ಕೇವಲ ಮಾತಿನಲ್ಲಿರದೇ, ಅದು ಈಶ್ವರಮ್ಮ ಶಾಲೆಯಲ್ಲಿ ಮಕ್ಕಳ ನಡೆವಳಿಕೆಯಲ್ಲಿ ಪ್ರತಿಬಿಂಬಿತವಾಗುತ್ತಿದೆ ಎಂದು ಎವಿಕೆ ಕಾಲೇಜಿನ ವಿಶ್ರಾಂತ ಆಂಗ್ಲ ಭಾಷಾ ಪ್ರಾಧ್ಯಾಫಕರಾದ ಡಾ.ಪಿ.ಎಂ.ಅನುರಾಧ ಅಭಿಪ್ರಾಯಪಟ್ಟರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀಸತ್ಯಸಾಯಿ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹದಿಹರೆಯದಲ್ಲಿ ಇರುವ ಚೈತನ್ಯ, ಹುಮ್ಮಸ್ಸು, ಕ್ರಿಯಾಶೀಲತೆ, ಲವಲವಿಕೆ ಎಂತಹವರಲ್ಲೂ ಉತ್ಸಾಹ ತುಂಬುವಂತಹುದು. ಈ ವಯಸ್ಸಿನಲ್ಲಿ ಹಸಿ ಗೋಡೆಗೆ ಕಲ್ಲು ಒಗೆದರೂ ನಾಟುವಂತಹ ನಾಜೂಕಾದ ಅಪಾಯಕರವಾದ ಈ ಘಟ್ಟವನ್ನು ದಾಟಿಸುವಂತಹವರು ಎಂದರೆs ಶಾಲೆಯಲ್ಲಿ ಗುರುಗಳು ಮತ್ತು ಮನೆಯಲ್ಲಿ ಪೋಷಕರು. ಪ್ರತಿಯೊಂದು ಹಂತದಲ್ಲೂ ನಮ್ಮ ಜೀವನದಲ್ಲಿ ಪಾಠ ಕಲಿಸಿದವರೆಲ್ಲರೂ ಗುರುಗಳೇ ಎಂದು ಬಣ್ಣಿಸಿದರು.

ಈ ಶಿಕ್ಷಣ ವ್ಯವಸ್ಥೆ ಪಾಶ್ಚಿಮಾತ್ಯರನ್ನು ಅನುಕರಿಸುವಂತದ್ದು, ನಾಲ್ಕು ಗೋಡೆಗಳ ಮಧ್ಯೆ ಕೊಡುವ ಶಿಕ್ಷಣ ಜೀವನ್ಮುಯಿಯಾಗಿರುವುದಿಲ್ಲ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ವಿದ್ಯಾರ್ಥಿಗಳು ಕೇವಲ ವೈದ್ಯರು ಮತ್ತು ಇಂಜಿನಿಯರ್ ಆಗಬೇಕೆಂದುಕೊಳ್ಳುತ್ತಾರೆ. ಆದರೆ ಒಳ್ಳೆಯ ಶಿಕ್ಷಕರು, ವಕೀಲರು, ಆರಕ್ಷಕರು, ರೈತರು, ಸೈನಿಕರು, ರಾಜಕಾರಣಿಗಳು ನಮ್ಮ ದೇಶಕ್ಕೆ ಬೇಕಾಗಿದೆ ಎಂದರು.

ಇAದಿನ ಮಕ್ಕಳಿಗೆ ತಾಂತ್ರಿಕತೆ ಯಿಂದ   ಮೊಬೈಲ್, ಲ್ಯಾಪ್‌ಟಾಪ್ ಮೊದಲಾದವನ್ನು ಬಳಸುತ್ತಾ ಮಂಗಗಳAತಾಗಿದ್ದಾರೆ. ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಾಗಿದೆ. ಇಂದಿನ ತಂತ್ರಜ್ಞಾನ, ಇಂದಿನ ಮಕ್ಕಳು ಸುತ್ತಮುತ್ತ ಪರಿಸರವನ್ನು ಗಮನಿಸುವುದಿಲ್ಲ, ಸ್ವಾರ್ಥಿಗಳಾಗುತ್ತಿದ್ದಾರೆ. ಸಮಾಜಕ್ಕೆ ಕೊಡುಗೆಗಳನ್ನು ಕೊಡುವಂತವರಾಗಬೇಕು ಎಂದು ಹೇಳಿದರು.

Read also : Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ

ಜಾಗತೀಕರಣ ಹೆಚ್ಚಾದಂತೆ, ನಾವು ನಮ್ಮ ದೇಶೀ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ. ಆದರೆ ನಮ್ಮ ಭಾರತೀಯ ಸಂಸ್ಕೃತಿಯನ್ನು ಈಶ್ವರಮ್ಮ ಶಾಲೆಯಲ್ಲಿ ಕಾಣುತ್ತಿರುವುದೇ ಸಂತಸ ತಂದಿದೆ. ಮಕ್ಕಳು ನಮ್ಮ ಸಂಸ್ಕೃತಿಯನ್ನು ಮತ್ತು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಶಾಲಾಡಳಿತ ಮಂಡಳಿಯ ಅಧ್ಕಕ್ಷರಾದ ಕೆ.ಆರ್.ಸುಜಾತ ಕೃಷ್ಣ ಮಾತನಾಡಿ, ಶಿಕ್ಷಕರ ದಿನಾಚರಣೆ ಬಹಳಷ್ಟು ಅರ್ಥಪೂರ್ಣವಾಗಿದೆ. ಈಶ್ವರಮ್ಮ ಶಾಲೆಯ ವೈಶಿಷ್ಟö್ಯ ಏನೆೆಂದರೆ ಮೌಲ್ಯಧಾರಿತ ಶಿಕ್ಷಣ ಕೊಡುವುದಾಗಿದೆ. ಅಂತಹ ಶಿಕ್ಷಣ ಇಲ್ಲಿ ಸಿಗುತ್ತಿದೆ. ಇಲ್ಲಿನ ಗುರುಗಳಿಂದ ಕಲಿತ ಮಕ್ಕಳು ಉತ್ತಮ ನಾಗರಿಕರಾಗಿ ಹೊರಹೊಮ್ಮಿದ್ದಾರೆ ಎಂದು ತಿಳಿಸಿದರು.

ಇದೇ  ಸಂದರ್ಭದಲ್ಲಿ  ಎಲ್ಲಾ ಶಿಕ್ಷಕವೃಂದವರಿಗೆ ಗುರುಕಾಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಈಶ್ವರಮ್ಮ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಎ.ಆರ್.ಉಷಾರಂಗನಾಥ್, ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪ ಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿಯರಾದ ಬಿ.ಎನ್.ಭಾವನಾ ಮತ್ತು ಎ.ಪಿ.ಭೂಮಿಕ ನಿರೂಪಿಸಿದರು. ಎಂ.ಯು.ರೋಹಿಣಿ ಸ್ವಾಗತಿಸಿದರು. ಜಿ.ಎಸ್.ಮೇಘನಾ ವಂದಿಸಿದರು.

ಖಡ್ಗಕ್ಕಿಂತ  ಲೇಖನಿ ಹರಿತವಾದದ್ದು, ಶಿಕ್ಷಕರ ವೃತ್ತಿ, ಬಹಳ ಶ್ರೇಷ್ಠವಾದ ವೃತ್ತಿ. ಜಗತ್ತಿನಲ್ಲಿ ಕೆಟ್ಟದ್ದು ಇದ್ದರೂ, ಅಂಧಕಾರವಿದ್ದರೂ ಅಲ್ಲಲ್ಲಿ ಬೆಳಕನ್ನು ಬೀರುವ ಜ್ಯೋತಿಗಳೇ ಶಿಕ್ಷಕರು.
– ಡಾ.ಪಿ.ಎಂ.ಅನುರಾಧ, ಎವಿಕೆ ಕಾಲೇಜಿನ ವಿಶ್ರಾಂತ ಆಂಗ್ಲಭಾಷಾ ಪ್ರಾಧ್ಯಾಪಕರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Kannada movie | ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ತೆರೆಗೆ
Next Article davanagere Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಿನಮಾನಹೆಮ್ಮೆ: ಬಂಡಾಯದ ಕೂಗು:ಡಿ.ಬಿ.ಬಡಿಗೇರ ಮಾಸ್ತರ

Kannada News | Dinamaanada Hemme  | Dinamaana.com | 11-07-2024 ಬಳ್ಳಾರಿಯಿಂದ ಭೌಗೋಳಿಕವಾಗಿ ದೂರವಿರುವ ಮತ್ತು ಅತಿಹೆಚ್ಚು ಭೂ…

By Dinamaana Kannada News

Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ

ದಾವಣಗೆರೆ (Davangere District) : ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ಸೆ.14 ರಂದು ಬೆಂಗಳೂರಿನ…

By Dinamaana Kannada News

Davanagere | ಮತ್ತೆ ಆಯೋಗ ದಲಿತರ ಕಣ್ಣೋರೆಸುವ ತಂತ್ರ : ಕುಂದವಾಡ ಮಂಜುನಾಥ ಬೇಸರ

ದಾವಣಗೆರೆ  (Davanagere) :  ಒಳಮೀಸಲಾತಿ ನೀಡಲು ಸುರ್ಪ್ರೀಂ ಆದೇಶ ನೀಡಿದರು ಸಹ ರಾಜ್ಯ ಸರಕಾರ ನಿವೃತ್ತ ನ್ಯಾಯಮೂರ್ತಿಗಳ ಆಯೋಗ ರಚನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?