Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಶ್ವ ಮಾನವ ಸಂದೇಶ ಪ್ರತಿಯೊಬ್ಬರೂ ಪಾಲಿಸಿ :ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ವಿಶ್ವ ಮಾನವ ಸಂದೇಶ ಪ್ರತಿಯೊಬ್ಬರೂ ಪಾಲಿಸಿ :ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: December 29, 2025 12:14 pm
Dinamaana Kannada News
Share
Davanagere
SHARE
ದಾವಣಗೆರೆ: ಪ್ರತಿಯೊಂದು ಮಗುವೂ ಹುಟ್ಟುತ್ತಲೇ ವಿಶ್ವಮಾನವ. ಬೆಳೆಯುತ್ತಾ, ಬೆಳೆಯುತ್ತಾ ನಾವು ಆ ಮಗುವನ್ನು ಅಲ್ಪಮಾನವನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಕರೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ವಿರ್ಶವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಮಹನೀಯರ ಜಯಂತಿಗಳಲ್ಲಿ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರೆ ಅವರಲ್ಲಿ ಜ್ಞಾನದ ಮಟ್ಟ ಹೆಚ್ಚಾಗುತ್ತದೆ. ಈ ಬಗ್ಗೆ ಶಿಕ್ಷಣ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತೇನೆ. ಅಧಿಕಾರಿಗಳು ಕಾಟಾಚಾರಕ್ಕೆ ಜಯಂತಿಗಳನ್ನು ಆಚರಿಸಬಾರದು, ಅರ್ಥಪೂರ್ಣವಾಗಿ ಜಯಂತಿಗಳನ್ನು ಆಚರಿಸಬೇಕೆಂದು ಸಲಹೆ ನೀಡಿದರು.
ಕುವೆಂಪು ಅವರ ‘ಮನುಜ ಮತ ವಿಶ್ವಪಥ’ ಎಂಬ ವಿಶ್ವಮಾನವ ಸಂದೇಶವನ್ನು ಸಾರಬೇಕಾಗಿದೆ. ಇದು ಮಾನವ ಕುಲದ ಸಮಾನತೆ, ವೈಚಾರಿಕತೆ ಮತ್ತು ಜಾತ್ಯಾತೀತೆಯ ಆಶಯಗಳನ್ನು ಪಸರಿಸುವ ದಿನವಾಗಿದೆ ಎಂದರು.
ರಾಷ್ಟçಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯಕವಾಗಲಿದೆ ಎಂದು ಕಿವಿಮಾತು ಹೇಳಿದರು.
‘ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ, ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದ್ದಾರೆ. ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಪಾವನವಾಗಲಿದೆ ಎಂದರು.
Read also : Political analysis|ಜನವರಿ ಒಂಭತ್ತಕ್ಕೆ ದಿಲ್ಲಿಯಲ್ಲಿ ಫೈನಲ್ !!
‘ಸರ್ವಜನಾಂಗ ಶಾಂತಿಯ ತೋಟ’ ರಾಷ್ಟçಕವಿ ಕುವೆಂಪು ಅವರ ಆದರ್ಶಗಳ ಸಾರವಾಗಿದೆ. ಇದನ್ನು ಅವರ ಜನ್ಮದಿನದಂದು ಆಚರಿಸಲಾಗುತ್ತಿದೆ. ಎಲ್ಲಾ ಧರ್ಮ, ಜಾತಿ, ಭಾಷೆಗಳ ಜನರ ನಡುವೆ ಸಾಮರಸ್ಯ, ಸಹಭಾಳ್ವೆ ಮತ್ತು ಏಕತೆಯನ್ನು ಸಾರುತ್ತದೆ. ಕುವೆಂಪು ಅವರು ನೀಡಿರುವ ವಿಶ್ವ ಮಾನವ ಸಂದೇಶವನ್ನು ಇಂದಿನ ಸಮಾಜದಲ್ಲಿ ಪಾಲಿಸಬೇಕಾಗಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಚಂದ್ರ, ಹಿರಿಯ ಪತ್ರಕರ್ತ ಬಿ.ಎನ್.ಮಲ್ಲೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇಂದಿನ ದಿನಗಳಲ್ಲಿ ಅನ್ನ, ಆಚಾರ, ವಿಚಾರ, ಉಡುಪು ಮುಂತಾದ ವಿಷಯಗಳಲ್ಲಿ ಮನಸ್ಸುಗಳನ್ನು ಒಡೆಯುತ್ತಿರುವ ಸಂದರ್ಭದಲ್ಲಿ ಕುವೆಂಪು ಅವರ ‘ವಿಶ್ವ ಮಾನವ ಸಂದೇಶ’ ಮಾನವ ಸಂಕುಲಕ್ಕೆ ಉಳಿದಿರುವ ಏಕೈಕ ದಾರಿ.
-ಕೆ.ಎಸ್.ಬಸವಂತಪ್ಪ, ಮಾಯಕೊಂಡ ಶಾಸಕ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Political analysis Political analysis|ಜನವರಿ ಒಂಭತ್ತಕ್ಕೆ ದಿಲ್ಲಿಯಲ್ಲಿ ಫೈನಲ್ !!
Next Article Davanagere ದಾವಣಗೆರೆ:ಸಾರಿಗೆ ಪ್ರಯಾಣದಲ್ಲಿ ಬಾರಿ ರಿಯಾಯಿತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS :ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.07 (DAVANAGERE ):  ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ”ಸಿ” ಮತ್ತು ಸ್ಟೆನೋಗ್ರಾಫರ್ ಗ್ರೇಡ್…

By Dinamaana Kannada News

ವಕ್ಫ್ ವಿವಾದ: ಬಿಜೆಪಿ ಕುತಂತ್ರಕ್ಕೆ ಕಿವಿಗೊಡದಿರಿ; ರಾಜ್ಯದ ಜನರಿಗೆ ಸಿದ್ದು ಮನವಿ

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ…

By Dinamaana Kannada News

ಪದ್ಮ ವಿಭೂಷಣ, ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.15   : ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?