Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇಶದ ಒಳತಿಗೆ ಎಲ್ಲರೂ ಒಗ್ಗಟಾಗಿ ಸೈನಿಕರಿಗೆ ಶಕ್ತಿ ತುಂಬಿ : ಶಾಸಕ ಕೆ.ಎಸ್.ಬಸವಂತಪ್ಪ ಕರೆ
ತಾಜಾ ಸುದ್ದಿ

ದೇಶದ ಒಳತಿಗೆ ಎಲ್ಲರೂ ಒಗ್ಗಟಾಗಿ ಸೈನಿಕರಿಗೆ ಶಕ್ತಿ ತುಂಬಿ : ಶಾಸಕ ಕೆ.ಎಸ್.ಬಸವಂತಪ್ಪ ಕರೆ

Dinamaana Kannada News
Last updated: May 10, 2025 12:12 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಅಮಾಯಕ ಭಾರತೀಯರ ಪ್ರಾಣ ತೆಗೆದು ಇಡೀ ದೇಶ ಕಣ್ಣೀರು ಹಾಕುವಂತೆ ಮಾಡಿದ್ದ ಭಯೋತ್ಪಾದಕರಿಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡುತ್ತಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ತಾಲೂಕಿನ ಮಾಯಕೊಂಡ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈಗ ಪಾಕಿಸ್ತಾನ ಮತ್ತು ಭಾರತ ಮಧ್ಯೆ ಯುದ್ಧ ನಡೆಯುತ್ತಿದೆ. ಯುಧವನ್ನು ನಾವು ಬಯಸಿರಲಿಲ್ಲ. ಅದನ್ನು ಬಯಸಿದ್ದು ಪಾಕಿಸ್ತಾನ. ಏಕೆಂದರೆ ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಅಮಾಯಕ ಹಿಂದೂಗಳ ಮೇಲೆ ಉಗ್ರರು ನಡೆಸಿದ ನರಮೇಧಕ್ಕೆ ಇಡೀ ಭಾರತ ಕಣ್ಣೀರು ಹಾಕಿತು. ಈ ದುಷ್ಕೃತ್ಯದಿಂದ ಭಯೋತ್ಪಾದನೆ ನಿರ್ಮೂಲನೆಗೆ ಕೇಂದ್ರ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದ್ದು, ಇದಕ್ಕೆ ವಿಪಕ್ಷಗಳು ಸಂಪೂರ್ಣ ಬೆಂಬಲ ನೀಡಿವೆ. ಇದರ ಪರಿಣಾಮ ಪಾಕಿಸ್ತಾನದ ಭಯೋತ್ಪಾದಕ ತಾಣಗಳನ್ನು ನಮ್ಮ ಯೋಧರು ಧ್ವಂಸ ಮಾಡುತ್ತಿದ್ದಾರೆ ಎಂದರು.

ಪಾಕಿಸ್ತಾನ ಹುಟ್ಟು ಹಾಕಿರುವ ಭಯೋತ್ಪಾದನೆಯನ್ನು ಸಂಪೂರ್ಣ ನಿರ್ನಾಮ ಮಾಡುವ ಶಕ್ತಿಯನ್ನು ನಮ್ಮ ಯೋಧರಿಗೆ ದೇಶದ 140 ಕೋಟಿ ಜನರು ಬೆಂಬಲ ನೀಡಬೇಕಿದೆ. ದೇಶದ ಒಳತಿಗಾಗಿ ಎಲ್ಲರೂ ಒಗ್ಗಟ್ಟಾಗಿ ಸೈನಿಕರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಜೊತೆಗೆ ಸೈನಿಕರಿಗೆ ಆತ್ಮಸ್ಥೈರ್ಯ, ಅವರ ಪ್ರಾಣ ರಕ್ಷಣೆ ಮಾಡುವಂತೆ ಶ್ರೀಆಂಜನೇಯಸ್ವಾಮಿ ಪ್ರಾರ್ಥಿಸಿದರು.

ಕೆರೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು:

ಮಾಯಕೊಂಡ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಳ ದೃಷ್ಟಿಯಿಂದ ಕೆರೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಮಾಯಕೊಂಡ ಗುಡ್ಡದಲ್ಲಿರುವ ಹೊಸಕೆರೆ ವಾಣಿ ವಿಲಾಸ ಸಾಗರದಂತೆ ಇದ್ದು, ಈ ಕೆರೆಯನ್ನು ವಾಣಿ ವಿಲಾಸ ಸಾಗರ ಮಾದರಿಯಲ್ಲಿ ಹೊಸಕೆರೆ ಅಭಿವೃದ್ಧಿ ಮಾಡಲಾಗುವುದು. ಇದರಿಂದ ಸುತ್ತಮುತ್ತಲ ೩೦ ಹಳ್ಳಿಗಳ ನೀರಿನ ಬವಣೆ ನೀಗಿಸಬಹುದು ಎಂದರು.

ಸಮುದಾಯ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ:

ವಿಧಾನಸಭಾ ಕ್ಷೇತ್ರದ ಕೇಂದ್ರ ಬಿಂದು ಮಾಯಕೊಂಡ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಈ ಭಾಗದ ಜನರ ಹೆಚ್ಚಿನ ಬೇಡಿಕೆ ಇದೆ. ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿ ಈ ಬಾರಿಯ ಬಜೆಟ್‌ನಲ್ಲಿ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ಈ ಭಾಗದ ಬಡವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಅದೇ ರೀತಿ ಸುಸಜ್ಜಿತ ಬಸ್ ನಿಲ್ದಾಣ ಇಲ್ಲದೇ ನೂರಾರು ಬಸ್‌ಗಳು ರಸ್ತೆಯ ಮಧ್ಯೆ ನಿಲುಗಡೆ ಮಾಡಿ ಹೋಗುತ್ತಿವೆ. ಹೀಗಾಗಿ 10 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಎರಡು ದಿನದಲ್ಲಿ ರೈಲ್ವೆ ನಿಲ್ದಾಣ ಸಿಸಿ ರಸ್ತೆಗೆ ಭೂಮಿಪೂಜೆ ನೆರವೇರಿಸಲಿದ್ದು, ಒಟ್ಟಾರೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

Read also : Hemophilia | ಜೀನ್ ಥೆರಪಿ ಚಿಕಿತ್ಸೆ ನಮ್ಮ ದೇಶದಲ್ಲೂ ಬರಬಹುದು : ಐ.ಜಿ.ಪಿ ಡಾ. ರವಿಕಾಂತೇಗೌಡ

ಈ ಸಂದರ್ಭದಲ್ಲಿ ಹೆಬ್ಬಾಳು ಮಠದ ಶ್ರೀಮಹಾರುದ್ರ ಮಹಾಸ್ವಾಮೀಜಿ, ಹೊಸದುರ್ಗ ಶಾಖಾಮಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಹೊಳಲ್ಕೆರೆ ಶ್ರೀತಿಪ್ಪೇರುದ್ರ ಸ್ವಾಮೀಜಿ, ಹಾವೇರಿ ಶ್ರೀನಿಜಶರಣ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ, ಹೊಸದುರ್ಗ ಶ್ರೀಪುರುಷೋತ್ತನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕ ಬಸವರಾಜನಾಯ್ಕ್, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಬಿ.ಟಿ.ಹನುಮಂತಪ್ಪ, ಗೋಪಾಲ, ಜಗಣ್ಣ, ಮಂಜಣ್ಣ, ರುದ್ರೇಶ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

TAGGED:davanagereMLA K.S. Basavanthappaದಾವಣಗೆರೆಮಾಯಕೊಂಡಶಾಸಕ ಕೆ.ಎಸ್.ಬಸವಂತಪ್ಪ
Share This Article
Twitter Email Copy Link Print
Previous Article Thalassemia Day celebration program Hemophilia | ಜೀನ್ ಥೆರಪಿ ಚಿಕಿತ್ಸೆ ನಮ್ಮ ದೇಶದಲ್ಲೂ ಬರಬಹುದು : ಐ.ಜಿ.ಪಿ ಡಾ. ರವಿಕಾಂತೇಗೌಡ
Next Article Davanagere Davanagere | ಯೋಧರ ಸುರಕ್ಷತೆಗೆ ಪ್ರಾರ್ಥನೆ  : ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತಾಲ್ಲೂಕು  ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಗಂಗಾಧರಯ್ಯ ಹಿರೇಮಠ

ದಾವಣಗೆರ (Davanagere) ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಫೆ. 1 ಮತ್ತು 2 ರಂದು ನಡೆಸಲು ನಿರ್ಧರಿಸಲಾಗಿದ್ದು,…

By Dinamaana Kannada News

Davanagere | ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದವರು ಇಂದಿರಾಗಾಂಧಿ : ಡಿ. ಬಸವರಾಜ್

ದಾವಣಗೆರೆ  (Davanagere)  :  ರಾಷ್ಟ್ರೀಯ ಖಾಸಗಿ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣ ಮಾಡುವ ಮೂಲಕ ಭಾರತ ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದ…

By Dinamaana Kannada News

ದಾವಣಗೆರೆ : ಷೇರುದಾರರ ಮಕ್ಕಳಿಗೆ ಪ್ರತಿಭಾಪುರಸ್ಕಾರಕ್ಕೆ ಆಹ್ವಾನ

ದಾವಣಗೆರೆ: ಶ್ರೀ ಕಲ್ಪತರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಷೇರುದಾರರ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?