ದಾವಣಗೆರೆ (Davanagere): ಪ.ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿಯನ್ನು ವರ್ಗೀಕರಿಸಿ, ಉಪವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶವನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಲಾಗಿದೆ.
ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ.
Read also : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ಮೇ.25 ರವರೆಗೆ ವಿಸ್ತರಿಸಲಾಗಿದೆ, ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) 3 ದಿನಗಳ ಕಾಲ ಮೇ.26 ರಿಂದ 28 ರವರೆಗೆ ಮರು ನಿಗದಿಪಡಿಸಲಾಗಿದೆ, ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಮೇ.19 ರಿಂದ 28 ರವರೆಗೆ ನಿಗದಿಪಡಿಸಲಾಗಿದೆ.
ಮೇ.26 ರಿಂದ 28 ರವರೆಗೆ ವಿಶೇಷ ಶಿಬಿರದಲ್ಲಿ ನಡೆಸಬೇಕಾದ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ-ಮನೆ ಕೋರಿರುವ ಹಿನ್ನಲೆಯಲ್ಲಿ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ.
ಸಮೀಕ್ಷೆಯಲ್ಲಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸುವಂತೆ ಏಕಸದಸ್ಯ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.