ದಾವಣಗೆರೆ (DAVANAGERE): ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್ಗಳು ಪತ್ತೆಯಾಗಿವೆ.
ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿ ಅವರು ಗಸ್ತು ತಿರುಗುವ ಸಂದರ್ಭದಲ್ಲಿ ನಾಡ ಬಾಂಬ್ಗಳು ಪತ್ತೆಯಾಗಿವೆ. ಹಂದಿ ಸೇರಿದಂತೆ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ಈ ನಾಡ ಬಾಂಬ್ಗಳನ್ನು ಇರಿಸಲಾಗಿತ್ತು ಎನ್ನಲಾಗಿದೆ.
ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿ ಮತ್ತು ಸಿಬ್ಬಂದಿ ಅರಣ್ಯ ವಲಯದಲ್ಲಿ ಗಸ್ತು ತಿರುಗುತ್ತಿರುವ ಸಂದರ್ಭದಲ್ಲಿ ಆ ಸ್ಥಳಕ್ಕೆ ತೆರಳುತ್ತಿದ್ದಂತೆ ನಾಲ್ಕು ಜನ
ಆರೋಪಿಗಳು ಬೈಕ್ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲೇ ಬಿಟ್ಟು ಹೋಗಿದ್ದ ಎರಡು ಬೈಕ್ ಮತ್ತು 32 ನಾಡ ಬಾಂಬ್ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read also : ಸೆನೆಟ್ ಚುನಾವಣೆಯಲ್ಲಿ ಜಯ : ಪ್ರೊ. ಡಾ.ಶ್ರೀನಿವಾಸ್ ಎಲ್.ಡಿ ಅವರಿಗೆ ಅಭಿನಂದಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್