Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕನ್ನಡ ವೃತ್ತಿ ರಂಗಭೂಮಿ ಮತ್ತು ಚಿತ್ರರಂಗದ ಖ್ಯಾತ ನಟ ರಾಜು ತಾಳಿಕೋಟೆ ನಿಧನ
ತಾಜಾ ಸುದ್ದಿ

ಕನ್ನಡ ವೃತ್ತಿ ರಂಗಭೂಮಿ ಮತ್ತು ಚಿತ್ರರಂಗದ ಖ್ಯಾತ ನಟ ರಾಜು ತಾಳಿಕೋಟೆ ನಿಧನ

Dinamaana Kannada News
Last updated: October 13, 2025 1:46 pm
Dinamaana Kannada News
Share
street theatre
SHARE

ಉಡುಪಿ, ಅಕ್ಟೋಬರ್ 13: ಕನ್ನಡ ವೃತ್ತಿ ರಂಗಭೂಮಿ, ಚಲನಚಿತ್ರ ಮತ್ತು ರಿಯಾಲಿಟಿ ಶೋ ಬಿಗ್ ಬಾಸ್‌ನಲ್ಲಿ ತಮ್ಮ ವಿಶಿಷ್ಟ ಹಾಸ್ಯ ನಟನೆಯ ಮೂಲಕ ‘ಕಲಿಯುಗದ ಕುಡುಕ’ ಎಂದು ಜನಪ್ರಿಯರಾಗಿದ್ದ ಹಿರಿಯ ಕಲಾವಿದ ರಾಜು ತಾಳಿಕೋಟೆ ಅವರು   ಮಣಿಪಾಲ್‌ನ ಆಸ್ಪತ್ರೆಯಲ್ಲಿ ಬೆಳಗ್ಗೆ 4  ಗಂಟೆಗೆ ನಿಧನರಾಗಿದ್ದಾರೆ.

ಅವರ ಅಕಾಲಿಕ ನಿಧನ ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ರಾಜು ತಾಳಿಕೋಟೆ ಅವರು ಉಡುಪಿಯಲ್ಲಿ ಚಲನಚಿತ್ರದ ಚಿತ್ರೀಕರಣಕ್ಕಾಗಿ ಆಗಮಿಸಿದ್ದ ಸಂದರ್ಭದಲ್ಲಿ ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಆರಂಭದಲ್ಲಿ ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ನಂತರ ಮಣಿಪಾಲ್‌ನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

ಧಾರವಾಡ ರಂಗಾಯಣದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ರಾಜು ತಾಳಿಕೋಟೆ, ಕನ್ನಡ ರಂಗಭೂಮಿಯಲ್ಲಿ ತಮ್ಮ ವಿಶಿಷ್ಟ ನಟನೆ ಮತ್ತು ನಿರ್ದೇಶನದ ಮೂಲಕ ಗುರುತಿಸಿಕೊಂಡಿದ್ದರು.

ಚಲನಚಿತ್ರಗಳಲ್ಲಿ ತಮ್ಮ ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ಅವರು, ಬಿಗ್ ಬಾಸ್ ಕನ್ನಡದಲ್ಲಿ ‘ಕಲಿಯುಗದ ಕುಡುಕ’ ಪಾತ್ರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದರು.ಅವರು ಇಬ್ಬರು ಪತ್ನಿಯರು ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

ಅವರ ನಿಧನದ ಸುದ್ದಿ ಕೇಳಿ ಕಲಾವರ್ಗ ಮತ್ತು ಅಭಿಮಾನಿಗಳು ಶೋಕಾಕುಲರಾಗಿದ್ದಾರೆ.

Read also : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಅವರ ಆಪ್ತ ಸ್ನೇಹಿತ ಮಲ್ಲಿಕಾರ್ಜುನ ಕಡಕೋಳ, “ಗೆಳೆಯ ರಾಜು ತಾಳಿಕೋಟೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಭಾವುಕವಾಗಿ ನುಡಿದಿದ್ದಾರೆ.

ರಾಜು ತಾಳಿಕೋಟೆ ಅವರ ಅಗಲಿಕೆಯಿಂದ ಕನ್ನಡ ರಂಗಭೂಮಿ ಮತ್ತು ಚಿತ್ರರಂಗ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುವ ಜೊತೆಗೆ, ಕಲಾವರ್ಗ ಮತ್ತು ಅಭಿಮಾನಿಗಳು ಈ ದುಃಖದ ಸಮಯದಲ್ಲಿ ಅವರ ಕುಟುಂಬದೊಂದಿಗೆ ಒಗ್ಗಟ್ಟಿನಿಂದ ನಿಲ್ಲುವುದಾಗಿ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article Davanagere ಲಿಂಗಾಯತ ಮಠಾಧೀಶರಿಗೆ ಅಪಮಾನ : ಶ್ರೀ ಕಾಡಸಿದ್ದೇಶ್ವರ ಸ್ವಾಮಿಯನ್ನು ದೇಶದಿಂದ ಗಡಿಪಾರು ಮಾಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಕ್ಷಿಣ ಕಾಂಗ್ರೆಸ್‍ನಿಂದ ಎಸ್ಸೆಸ್ ಅವರಿಗೆ ಶ್ರದ್ಧಾಂಜಲಿ

ದಾವಣಗೆರೆ: ದಾವಣಗೆರೆ ದಕ್ಷಿಣದ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಅಯೂಬ್ ಪೈಲ್ವಾನ್ ಅವರ…

By Dinamaana Kannada News

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

ದಾವಣಗೆರೆ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಸಿದ್ದ ತಾಯಿ ಮತ್ತು  ಮಗುವನ್ನು 112 ಹೊಯ್ಸಳ ಸಿಬ್ಬಂದಿ ರಕ್ಷಿಸಿದ ಘಟನೆ…

By Dinamaana Kannada News

ಜಲಜೀವನ ಮಿಷನ್ ಯೋಜನೆ: ಕೇಂದ್ರದ ವೈಫಲ್ಯದ ಬಗ್ಗೆ ಸದನದಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.21 (Davanagere); ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‌ನಡಿಯಲ್ಲಿ 80% ಮನೆಗಳಿಗೆ ನಳದ ಮೂಲಕ ನೀರಿನ ಸಂಪರ್ಕವಿದೆ ಎಂದು ಹೇಳುತ್ತದೆ.…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?