Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಿಗ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ
ತಾಜಾ ಸುದ್ದಿ

ಮಾದಿಗ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

Dinamaana Kannada News
Last updated: April 28, 2024 5:35 pm
Dinamaana Kannada News
Share
Madiga community davanagere
ದಾವಣಗೆರೆ ಅಕ್ಕಮಹಾದೇವಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಮಾದಿಗರ ಸಭೆಯನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು.
SHARE

ದಾವಣಗೆರೆ:  ಮಾದಿಗ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿದ ಕಾಂಗ್ರೆಸ್ ಗೆ ಮತ ನೀಡಿ ಋಣ ತೀರಿಸಬೇಕು ಎಂದು ಮಾಜಿ ಸಚಿವ ಎಚ್. ಆಂಜನೇಯ ಕರೆ ನೀಡಿದರು.

ನಗರದ ಅಕ್ಕ ಮಹಾದೇವಿ ಸಮುದಾಯ ಭವನದಲ್ಲಿ ನಡೆದ ಮಾದಿಗ ಮುಖಂಡರ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಮಾದಿಗರು ಕಾಂಗ್ರೆಸಿನ ಸಾಂಪ್ರದಾಯಿಕ ಮತದಾರರು. ಈಗ ಒಗ್ಗಟ್ಟಾಗಿ ಹೋರಾಡಿ ಕಾಂಗ್ರೆಸ್ ಗೆಲ್ಲಿಸಬೇಕು. ಅಸ್ಪೃಶ್ಯತೆ ನಿವಾರಿಸಿ ನಮ್ಮನ್ನು ರಕ್ಷಿಸಿದವರು ಗಾಂಧೀಜಿ, ನೆಹರೂ ಅಂಥಾ ಕಾಂಗ್ರೆಸ್ಸಿಗರೇ ವಿನಾ ಬಿಜೆಪಿಯವರಲ್ಲ.  ಸಮಾನತೆ ಸಾರುವ ಸಂವಿಧಾನಕ್ಕೇ ಇಂದು ಬಿಜೆಪಿಯಿಂದ ಧಕ್ಕೆ ಬಂದಿದೆ. ಬಸವಣ್ಣನ ಕನಸ್ಸನ್ನು ಸಾಕಾರಗೊಳಿಸಿ, ಸಮ ಸಮಾಜದ ಕನಸು ಕಂಡಿದ್ದೇ ಕಾಂಗ್ರೆಸ್.  ಎಸ್.ಎಂ. ಕೃಷ್ಣ ಬಡಾವಣೆ ನಿರ್ಮಿಸಿ ಎಲ್ಲರಿಗೂ ಸೂರು ನೀಡಿದ್ದೇ ಶಾಮನೂರು ಕುಟುಂಬ. ಅವಕಾಶ ವಂಚಿತ ಸಮುದಾಯಗಳ ಪರ ಸದಾ ಚಿಂತಿಸುವ ಶಾಮನೂರು ಕುಟುಂಬ ಗೆಲ್ಲಿಸಬೇಕು, ಎಂದು ಅವರು ಕರೆ ನೀಡಿದರು.

ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳ ಸಿಂಹಪಾಲು ನಮ್ಮವರದ್ದು. ಕೇಂದ್ರದಲ್ಲಿ ಅಧಿಕಾರ ಬಂದರೆ ಮನೆಮನೆಗೂ ಒಂದು ಲಕ್ಷ ರೂ. ದೊರೆಯಲಿದೆ ಎಂದರು.

ತನಿಖಾ ದಳದ ದುರುಪಯೋಗ ಮಾಡಿಕೊಂಡು ಬಿಜೆಪಿ ರಾಜಕೀಯ ವಿರೋಧಿಗಳ ದನಿ ಅಡಗಿಸುತ್ತಿದೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ನಾನು ನಗರಸಭಾ ಸದಸ್ಯ, ಅಧ್ಯಕ್ಷ ಮಾತ್ರ ಆಗಬಹುದಾದ ನಾನು ಸಮಾಜ ಕಲ್ಯಾಣ ಸಚಿವನಾಗಲು ಕಾರಣವಾದ ಕಾಂಗ್ರೆಸ್ ನ್ನು ನಾವೆಲ್ಲ ಬೆಂಬಲಿಸಬೇಕು. ಕಾಂಗ್ರೆಸ್ ನಷ್ಟು ಅಪಾರ ಕೊಡುಗೆ ನೀಡಿದ ಪಕ್ಷ ಬೇರೊಂದಿಲ್ಲ. ಆದಕಾರಣ ಅದಕ್ಕೆ ಋಣಿಯಾಗಿರಬೇಕು ಎಂದರು.

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಎಚ್. ಆಂಜನೇಯ ಸಮಾಜ ಕಲ್ಯಾಣ ಮಂತ್ರಿಯಾದಾಗ ದಲಿತರ ಅಭಿವೃದ್ಧಿ ಆರಂಭವಾಯಿತು.

ಎಲ್ಲರ ವಿಶ್ವಾಸ ಗಳಿಸಿದರೆ ಮಾತ್ರ ಮುಂದೆ ಬರಲು ಸಾಧ್ಯ. ಸರ್ಕಾರದ ಋಣ ತೀರಿಸಲು ಕಾಂಗ್ರೆಸ್ಗೆ ಮತ ಹಾಕಬೇಕು. ಸಿದ್ದರಾಮಯ್ಯ ಸರ್ಕಾರ ದಲಿತರ ಏಳಿಗೆಗೆ ಎಸ್ಸಿಪಿ, ಟಿಎಸ್ಸಿಪಿ ಕಾಯ್ದೆಯಡಿ 39000 ಕೋಟಿ ಹಣ ಸಿಗುವಂತೆ ಮಾಡಿದ್ದಾರೆ. ನಮ್ಮ ಸಮಾಜಕ್ಕೆ ಶಕ್ತಿ ತುಂಬಲು ಆದಿ ಜಾಂಬವ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಕಾಂಗ್ರೆಸ್. ರಾಜ್ಯದ ಎಲ್ಲಾ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಿದ್ದು ಕಾಂಗ್ರೆಸ್. ರಾಜಕಾರಣಿಗಳು ಒಳ್ಳೆಯ ವ್ಯಕ್ತಿತ್ವ ಇರುವವನ್ನು ಮಾತ್ರ ಬೆಂಬಲಿಸಬೇಕು. ಬಿಜೆಪಿ ಸಂಸದರು ಐದು ಸಾರಿ ಗೆದ್ದರೂ ಏನೂ ಕೆಲಸ ಮಾಡಿಲ್ಲ, ಎಂದರು.

ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಮಾತನಾಡಿ, ಮೋದಿ ಹೊರಟಿರುವ ದಿಕ್ಕನ್ನು ತಾವು ಗಮನಿಸಿದರೆ ಸರ್ವಾಧಿಕಾರಿ ಧೋರಣೆ ನಡೆದಂತೆ ಕಾಣುತ್ತಿದೆ. ಸಂವಿಧಾನದ ಆಶಯ ತಲೆಕೆಳಗೆ ಮಾಡುತ್ತಿದ್ದಾರೆ. ಐಟಿ ರೇಡ್ ಅಸ್ತ್ರವಾಗಿದೆ. ಮೋದಿ, ಬಿಜೆಪಿ ಸ್ವಾತಂತ್ರ‍್ಯಕ್ಕೆ  ಬಲಿದಾನ, ತ್ಯಾಗ ಮಾಡಿಲ್ಲ.  ಶ್ರೀಮಂತರನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆಯೇ ವಿನಾ ಬಡವರಿಗೆ ಸಹಾಯ ಮಾಡುತ್ತಿಲ್ಲ.  ಕಾಂಗ್ರೆಸ್ ದಲಿತರಿಗೆ ,  ಪೌರವಕಾರ್ಮಿಕರಿಗೆ ಸೌಲಭ್ಯ ನೀಡಿದೆ.  ಬಸವಂತಪ್ಪ, ಆಂಜನೇಯ ಸಮಾಜದ ಮೇಲೆ ಪ್ರಭಾವ ಬೀರಿ, ಸರಿ ದಾರಿಯಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದರು.

ಪಾಲಿಕೆ ಸದಸ್ಯ ಉದಯ ಕುಮಾರ್, ನಿಂಗಪ್ಪ, ನೀಲಗಿರಿಯಪ್ಪ, ಎಲ್.ಡಿ.ಗೋಣೆಪ್ಪ, ಸೋಮ್ಲಾಪುರ ಹನುಮಂತಪ್ಪ, ಸಿದ್ದನೂರು ಪ್ರಕಾಶ್, ಜಿಪಂ ಮಾಜಿ ಉಪಾಧ್ಯಕ್ಷ ಶಿವಣ್ಣ, ಹರಿಹರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ,, ರೈತ ಮುಖಂಡ ಹುಚ್ಚವನಹಳ್ಳಿ ಮಂಜುನಾಥ, ಬಿ.ಎಂ. ಹನುಂಮತಪ್ಪ, ಮಂಜುಳಮ್ಮ, ನಗರ ಸಭಾ ಸದಸ್ಯ ಮಾಜಿ ಸದಸ್ಯ ಮಲ್ಲಿಕಾರ್ಜುನ, ನಿವೃತ್ತ ಡಿವೈಎಸ್ಪಿ ರವಿ ನಾರಾಯಣ,ಬಗರ್ ಹುಕುಂ ಸಮಿತಿಯ ಶೇಖರಪ್ಪ ಇತರರು ಇದ್ದರು.

TAGGED:Congress contribution to the development of Madiga community is immense.Dinamana.comKannada Newsಕನ್ನಡ ಸುದ್ದಿದಿನಮಾನ.ಕಾಂಮಾದಿಗ ಸಮುದಾಯದ ಅಭಿವೃದ್ದಿಗೆ ಕಾಂಗ್ರೆಸ್‌ ಕೊಡುಗೆ ಅಪಾರ.
Share This Article
Twitter Email Copy Link Print
Previous Article nsui davanagere ಕಪ್ಪುಬಟ್ಟೆ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತ ಪ್ರತಿಭಟನೆ
Next Article sanduru bellrey ಸೊಂಡೂರಿನ ಕಗ್ಗತ್ತಲೆಯ ಕಥನಗಳು -8 ನೀಲ ಕುರುಂಜಿ ಹೂಗಳ ಮೌನ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

ದಾವಣಗೆರೆ.ಮಾ.11 (Davanagere); ಇಂದಿರಾಗಾಂಧಿ ರಾಷ್ಟ್ರೀಯ ವಿಶೇಷಚೇತನರ ಪಿಂಚಣಿ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ ಕೇವಲ‌ 300 ರೂಪಾಯಿ ನೀಡಲಾಗುತ್ತಿದೆ.ಇದರಿಂದ ಮೂಲಭೂತ ಅಗತ್ಯಗಳನ್ನು…

By Dinamaana Kannada News

Davangere | ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ದಾವಣಗೆರೆ, ನ.1 (Davangere) : ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣಗೊಳಿಸುವುದರ ಮೂಲಕ 69ನೇ…

By Dinamaana Kannada News

Davanagere news | ನಾಯಿಗಳ ಹಾವಳಿ : ನಗರಸಭಾ ಸದಸ್ಯರಿಂದ ನಗರಸಭೆ ಕಚೇರಿಗೆ ಬೀಗ

ಹರಿಹರ  (Davangere District)  : ಹರಿಹರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹಿಸಿ ನಗರಸಭೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?