Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ
ತಾಜಾ ಸುದ್ದಿ

ಕಂದನಕೋವಿ,ಅಣಜಿ ಗ್ರಾಮಗಳಿಗೆ ಜಿ.ಪಂ. ಸಿಇಓ ಭೇಟಿ,ಅಭಿವೃದ್ದಿ,ಮೂಲಭೂತ ಸೌಕರ್ಯಗಳ ಪರಿಶೀಲನೆ

Dinamaana Kannada News
Last updated: November 18, 2025 4:34 am
Dinamaana Kannada News
Share
Davanagere
SHARE

ದಾವಣಗೆರೆ : ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್  ಕಂದನಕೋವಿ ಮತ್ತು ಅಣಜಿ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಸಾರ್ವಜನಿಕ ಸೌಲಭ್ಯಗಳು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಕಂದನಕೋವಿ : ಕಂದನಕೋವಿ ಗ್ರಾಮದಲ್ಲಿ ಹಾಲಿನ ಡೈರಿ ಮತ್ತು ನ್ಯಾಯಬೆಲೆ ಅಂಗಡಿಗಳನ್ನು ಪರಿಶೀಲಿಸಿ,ವಿತರಣೆ ಕ್ರಮ ಹಾಗೂ ದಾಖಲೆಗಳ ಪರಿಶುಧ್ಧತೆಯನ್ನು ಪರಿಶೀಲಿಸಿದರು.

ಬಳಿಕ ರೈತರೊಂದಿಗೆ ಸಂವಾದ ನಡೆಸಿ ಅವರ ಕುಂದು-ಕೊರತೆಗಳನ್ನು ಆಲಿಸಿದರು.

ಹೊಸವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡಕ್ಕೆ ಭೇಟಿ ನೀಡಿ, ಮಕ್ಕಳ ಸ್ನೇಹಿ ವಾತಾವರಣ ಒದಗಿಸುವ ಉದ್ದೇಶದಿಂದ ಕಟ್ಟಡದ ಗೋಡೆಗಳಲ್ಲಿ ಆಕರ್ಷಕ ಚಿತ್ತಾರ ಮತ್ತು ಬರಹಗಳನ್ನು ನಿರ್ಮಿಸಲು ಸೂಚನೆ ನೀಡಿದರು.

ಗ್ರಾಮದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿ, ಸಮರ್ಪಕ ನೀರಿನ ಹಂಚಿಕೆ ಗ್ರಾಮದ ಜನರಿಗೆ ಲಭ್ಯವಾಗುವಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಜೊತೆಗೆ, ಗ್ರಾಮ ಸ್ವಚ್ಛತೆ ಕುರಿತು ಗ್ರಾಮಸ್ಥರಿಂದ ನೇರವಾಗಿ ಮಾಹಿತಿಯನ್ನು ಪಡೆದುಕೊಂಡರು.

ಅಣಜಿ ಗ್ರಾಮದಲ್ಲಿ ಪರಿಶೀಲನೆ: ಅಣಜಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವು ಸಂಪೂರ್ಣವಾಗಿ ಶಿಥಿಲಗೊಂಡಿರುವುದು ಗಮನಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗ್ರಾಮೀಣ ಸಂತೆ ಪ್ರದೇಶಕ್ಕೆ ಭೇಟಿ ನೀಡಿ ಕಸ ವಿಲೇವಾರಿ ವ್ಯವಸ್ಥೆಯ ಕುರಿತು ಚರ್ಚಿಸಿ, ಕಸವನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read also : ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್

ಅಂಗನವಾಡಿ ಕೇಂದ್ರ ಮತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು.

ನಂತರ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಕಸ ಸಂಗ್ರಹಣೆ ಮತ್ತು ಬೇರ್ಪಡಿಸುವಿಕೆ ಕುರಿತು ಪರಿಶೀಲನೆ ನಡೆಸಿದರು.

ಗ್ರಾಮಗಳಲ್ಲಿ ಇನ್ನೂ ಕೆಲವು ಕಡೆ ಕಸ ಸುಡುವುದು ಗಮನಕ್ಕೆ ಬಂದಿದ್ದು ಇದನ್ನು ತಕ್ಷಣ ನಿಲ್ಲಿಸಿ ಎಲ್ಲ ಕಸದನ್ನೂ ವಿಲೇವಾರಿ ಘಟಕಕ್ಕೆ ಸಾಗಿಸಿ ಸರಿಯಾದ ವಿಧಾನದಲ್ಲಿ ಸಂಸ್ಕರಿಸುವಂತೆ ನಿರ್ದೇಶನ ನೀಡಿದರು.

ಗ್ರಾಮಗಳ ಭೇಟಿಯಿಂದ ಅಭಿವೃದ್ಧಿ, ಸ್ವಚ್ಛತೆ ಮತ್ತು ಸಾರ್ವಜನಿಕ ಸೌಲಭ್ಯಗಳ ಸುಧಾರಣೆಗೆ ಮಹತ್ವದ ಉತ್ತೇಜನ ಸಿಗಲಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹಿರಿಯ ನಾಗರೀಕರ ಬಗ್ಗೆ ಅಸಡ್ಡೆ ಬೇಡ: ನ್ಯಾ. ಮಹಾವೀರ ಮ.ಕರೆಣ್ಣನವರ್
Next Article District Collector G.M. Gangadharaswamy ದಾವಣಗೆರೆ|ಭತ್ತ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ವಸತಿ ರಹಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ

ಹರಿಹರ (Davanagere) : ತಾಲ್ಲೂಕಿನ ಕೆ.ಬೇವಿನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಡ್ಲೆಗೊಂದಿ ಗ್ರಾಮದ ವಸತಿ ರಹಿತ ಮಾದಿಗ ಹಾಗೂ ಹಿಂದುಳಿದ…

By Dinamaana Kannada News

ಮದಕರಿನಾಯಕ ಮಹಾದ್ವಾರ ತೆರವು : ಮತದಾನ ಬಹಿಷ್ಕಾರದ ಎಚ್ಚರಿಕೆ

ದಾವಣಗೆರೆ.ಏ.27:    25 ವರ್ಷದ ಹಳೆಯ ಶ್ರೀ ರಾಜವೀರ ಮದಕರಿನಾಯಕ ಮಹಾದ್ವಾರ ಹಾಗೂ ಶ್ರೀ ವಾಲ್ಮೀಕಿ ವೃತ್ತವನ್ನು ಕಾನೂನು ಬಾಹಿರವಾಗಿ…

By Dinamaana Kannada News

ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ

ದಾವಣಗೆರೆ: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ-ಶಿಕ್ಷಕರ ಕಾರ್ಯಕ್ಷಮತೆ ಶಿವ ಸ್ವರೂಪಿಯಾಗಿ, ಕ್ಷಕಿರಣದೋಪಾದಿಯಲ್ಲಿ ಯಾರು ಕರ್ಮ ಅಥವಾ ಕಾಯಕವನ್ನು ಮಾಡುವರೋ ಅವರೇ ಶಿಕ್ಷಕರು ಎಂದು…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
DAVANAGERE
ತಾಜಾ ಸುದ್ದಿ

ದಾವಣಗೆರೆ: ಆಸ್ತಿ ತೆರಿಗೆ ಪಾವತಿಸಿ ಶೇ.05 ರಷ್ಟು ರಿಯಾಯಿತಿ ಪಡೆಯಿರಿ

By Dinamaana Kannada News
Dr. B SHIVAKUMAR BAMS.MS
ಆರೋಗ್ಯ

ಗುದ-ಗತ ಖಾಯಿಲೆಗಳು (ಅನೋರೆಕ್ಟಲ್ ರೋಗಗಳು)ಮತ್ತು ಆಯುರ್ವೇದದಲ್ಲಿ ಅದರ ನಿರ್ವಹಣೆ

By ಡಾ.ಬಿ. ಶಿವಕುಮಾರ್
Davanagere
ತಾಜಾ ಸುದ್ದಿ

ಆಹಾರ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ಆರೋಪ: ತನಿಖೆ ನಡೆಸಿ ವರದಿ ನೀಡುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?