Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಾಂಧಿ ಪರಿವಾರ ದೇಶಕ್ಕಾಗಿ ಸೇವೆ, ತ್ಯಾಗ ಮಾಡಿದೆ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ
ತಾಜಾ ಸುದ್ದಿ

ಗಾಂಧಿ ಪರಿವಾರ ದೇಶಕ್ಕಾಗಿ ಸೇವೆ, ತ್ಯಾಗ ಮಾಡಿದೆ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

Dinamaana Kannada News
Last updated: June 27, 2025 3:39 pm
Dinamaana Kannada News
Share
Manjunath Gowda
SHARE

ದಾವಣಗೆರೆ : ಗಾಂಧಿ ಪರಿವಾರ ದೇಶಕ್ಕಾಗಿ ಅನೇಕ ಸೇವೆ, ಪ್ರಾಣತ್ಯಾಗಗಳನ್ನು ಮಾಡಿದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹೇಳಿದರು.

ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದಿರಾಗಾಂಧಿ ನೋಡಿದಲ್ಲೆಲ್ಲಾ ಭಯವಾಗುತ್ತಿದೆ. ಅವರ ಕೆಲಸಗಳಿಂದ ಅವರಿಗೆ ಕೀಳುರಿಮೆ ಕಾಡುತ್ತಿದೆ.‌ ಆದ್ದರಿಂದಲೇ ಇಂದಿರಾ ಗಾಂಧಿಯವರನ್ನು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇಂದು ಮಹಾತ್ಮ ಗಾಂಧಿಯವರನ್ನು ಗೋಡ್ಸೆಗೆ ಹೋಲಿಸಿ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಆದರೆ, ದೇಶಕ್ಕೆ ಮುಂದಿನ ದಿನಗಳಲ್ಲಿ ಬೇಕಾದ ತತ್ವ ಆದರ್ಶಗಳನ್ನು ಗಾಂಧಿ ನಮಗೆ ರೂಪಿಸಿ ಕೊಟ್ಟಿದ್ದಾರೆ. ಗಾಂಧಿ ಪರಿವಾರವನ್ನು ದೂಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ಗಾಂಧಿ ಪರಿವಾರ ದೇಶಕ್ಕಾಗಿ ಸೇವೆ, ತ್ಯಾಗ ಮಾಡುವ ಪರಿವಾರವಾಗಿದೆ. ಗಾಂಧಿ ಪರಿವಾರ ದೇಶಕ್ಕಾಗಿ ಅನೇಕ ಸೇವೆ, ಪ್ರಾಣತ್ಯಾಗಗಳನ್ನು ಮಾಡಿದೆ” ಎಂದು ಸ್ಮರಿಸಿದರು.

“ಯುವ ಕಾಂಗ್ರೆಸ್ ನಲ್ಲಿ ಉತ್ತಮ ಅವಕಾಶಗಳಿದೆ. ಇಲ್ಲಿ ಕೆಲಸ ಮಾಡಿದ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ ಸೇರಿದಂತೆ ಅನೇಕರು ಇಂದು ಉತ್ತಮ ಸ್ಥಾನಮಾನ ಪಡೆದಿದ್ದಾರೆ ಮತ್ತು ಯುವ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದರೆ ರಾಷ್ಟ್ರಮಟ್ಟದಲ್ಲಿಯೂ ಕೂಡ ಉತ್ತಮ ಸ್ಥಾನಮಾನಗಳು ದೊರೆಯಲಿದೆ. ಪಕ್ಷದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ರಾಜೀವ್ ಗಾಂಧಿಯವರು ಕಾಂಗ್ರೆಸ್ ನಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಬಯಸಿದ್ದರು. ಅವರು ಯುವ ಕಾಂಗ್ರೆಸನ್ನು ರಾಷ್ಟ್ರೀಯ ಕಾಂಗ್ರೆಸಿನ ಮುಂದಾಳು ಎಂದು ಕರೆಯುತ್ತಿದ್ದರು. ಏಕೆಂದರೆ ಯಾವುದೇ ಪ್ರತಿಭಟನೆಗಳು ಮತ್ತು ಸಮಾರಂಭಗಳು ಅಥವಾ ಕಾಂಗ್ರೆಸ್ನ ಯಾವುದೇ ಕಾರ್ಯಕ್ರಮಗಳಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿನ ಮುಂದಾಳುಗಳಾಗಿ ಕೆಲಸ ಮಾಡುತ್ತಾರೆ” ಎಂದು ಪ್ರಶಂಸಿಸಿದರು.

Read also : ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ

“ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ನಾವು ಅದನ್ನು ಮರೆತು ಪಕ್ಷಕ್ಕಾಗಿ ಸೇವೆ ಸಲ್ಲಿಸೋಣ. ಪಕ್ಷಕ್ಕಾಗಿ ದುಡಿಯೋಣ. ನೀವು ಇಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದರೆ ಪಕ್ಷ ನಿಮ್ಮನ್ನು ಗುರುತಿಸುತ್ತದೆ. ನಿಮ್ಮ ನಿಮ್ಮ ಗ್ರಾಮ ಮತ್ತು ನಗರಗಳಲ್ಲಿ ಉತ್ತಮ ಕೆಲಸ ಮಾಡಿ ಜನರ ಮಧ್ಯೆ ನಾಯಕರಾಗಿ ಬೆಳೆಯಿರಿ. ಅದು ನಿಮ್ಮ ಜನರ ನಡುವೆ ಪ್ರೀತಿ ವಿಶ್ವಾಸವನ್ನು ಬೆಳೆಸುತ್ತದೆ. ಅದನ್ನು ಪಕ್ಷ ಗುರುತಿಸಿ ನಿಮಗೆ ಸ್ಥಾನಮಾನ ನೀಡುತ್ತದೆ” ಎಂದು ಸ್ಪಷ್ಟಪಡಿಸಿದರು.‌

ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಯುವ ಕಾಂಗ್ರೆಸ್ ನಲ್ಲಿ ಉತ್ತಮ ಅವಕಾಶಗಳಿದೆ. ನಾನು ಯುವ ಕಾಂಗ್ರೆಸ್ ನಲ್ಲಿ ಸುಮಾರು 9 ವರ್ಷಗಳ ಕಾಲ ಕೆಲಸ ಮಾಡಿ ಬಂದಿದ್ದೇನೆ. ಅಲ್ಲಿ ಉತ್ತಮ ಕೆಲಸ ಮಾಡಿದವರನ್ನು ಗುರುತಿಸುತ್ತಾರೆ. ಅವರು ರಾಷ್ಟ್ರಮಟ್ಟದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ. ನಾನು ಯುವ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದರಿಂದಲೇ ಇಂದು ನನಗೆ ನಗರಸಭೆಯ ಮತ್ತು ಇತರ ಅಧಿಕಾರಗಳು ದೊರಕಿವೆ. ಆದ್ದರಿಂದ ಉತ್ತಮ ಕೆಲಸ ಮಾಡಿ, ನಿಮ್ಮ ನಿಮ್ಮ ನಗರ ಮತ್ತು ನಿಮ್ಮ ಬೀದಿ, ಗ್ರಾಮಗಳಲ್ಲಿ ನೀವು ಗುರುತಿಸಿಕೊಂಡರೆ ನಾಯಕರಾಗಿ ಬೆಳೆಯಲು ಸಾಧ್ಯ” ಎಂದು ಸಲಹೆ ನೀಡಿದರು.

ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮಾತನಾಡಿ, ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷಕ್ಕಾಗಿ ಯುವ ಕಾಂಗ್ರೆಸ್ ನಲ್ಲಿ ದುಡಿಯಬೇಕು. ಎಲ್ಲ ಪದಾಧಿಕಾರಿಗಳು ಕಾರ್ಯಕರ್ತರು ಕುಳಿತು ಬಗೆಹರಿಸಿಕೊಂಡು ಮುನ್ನಡೆಯಬೇಕು. ಯುವ ಕಾಂಗ್ರೆಸ್ ನಲ್ಲಿ ದುಡಿದಿದ್ದರಿಂದಲೇ ನಾವು ಇಂದು ಉತ್ತಮ ಸ್ಥಾನಮಾನಗಳನ್ನು ಪಡೆದು ಇಂದು ಇಲ್ಲಿ ನಿಂತಿರುವುದು. ಹಳಬರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ರಾಜ್ಯ ಪದಾಧಿಕಾರಿಗಳಾದ ಬಾಹುಬಲಿ ಜೈನ್, ಜಿಲ್ಲಾ ಅಧ್ಯಕ್ಷ ವರುಣ್ ಬೆಣ್ಣಿಹಳ್ಳಿ, ನಿಖಿಲ್ ಕೊಂಡಜ್ಜಿ, ಜಿಲ್ಲಾ ಕಾರ್ಯದರ್ಶಿ ತಾಹಿರ್, ಜವಾಹರ್ ಬಾಲ್ ಮಂಚ್ ನಾ ಮೈನುದ್ದೀನ್ , ಲಿಯಾಖತ್ ಅಲಿ ಸೇರಿದಂತೆ ಬ್ಲಾಕ್ ಅಧ್ಯಕ್ಷರು, ಅಸೆಂಬ್ಲಿ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ
Next Article Davangere Davangere | ವೈಜ್ಞಾನಿಕ ತಳಹದಿಯ ಮೇಲೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು : ಡಿಸಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ

ದಾವಣಗೆರೆ,ಮಾ.26 ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ. ಜವಳಿ, ಚಿನ್ನಬೆಳ್ಳಿ, ಕಿಚನ್ ವಸ್ತುಗಳ ವ್ಯಾಪಾರಿಗಳು ಸೇರಿದಂತೆ ಟ್ರಾನ್ಸ್ ಪೋರ್ಟ್…

By Dinamaana Kannada News

ಯೋಗ ಒತ್ತಡ ಮುಕ್ತ ಬದುಕಿಗೆ ಸಹಕಾರಿ : ಡಿಸಿ

ದಾವಣಗೆರೆ, ಏ.1 : ಪ್ರಜಾಪ್ರಭುತ್ವದ ಗೆಲುವು ಮತದಾನದಲ್ಲಿದ್ದು ಯೋಗಾಭ್ಯಾಸದಿಂದ ಒತ್ತಡ ಮುಕ್ತ ಬದುಕಿಗೆ ಸಹಕಾರಿಯಾದರೆ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿಯಾಗುವುದರಿಂದ ಸದೃಢ…

By Dinamaana Kannada News

JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

ದಾವಣಗೆರೆ  (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ವತಿಯಿಂದ ಡಿಸೆಂಬರ್ : 07-12-2024 ಶನಿವಾರ…

By Dinamaana Kannada News

You Might Also Like

Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!

By Dinamaana Kannada News
Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?