Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಜಿಜಿಎಂಎಸ್ ಕ್ಲಸ್ಟರ್ ನ ಕಲಿಕಾ ಹಬ್ಬ…
ತಾಜಾ ಸುದ್ದಿ

ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಜಿಜಿಎಂಎಸ್ ಕ್ಲಸ್ಟರ್ ನ ಕಲಿಕಾ ಹಬ್ಬ…

Dinamaana Kannada News
Last updated: January 10, 2026 3:05 pm
Dinamaana Kannada News
Share
Davanagere
SHARE

ದಾವಣಗೆರೆ : ಅಕ್ಷರ ಕಿರೀಟ, ಅಕ್ಷರಮಾಲೆ, ಅಕ್ಷರ ಹೂದಾನಿ, ಅಕ್ಷರ ಗೊಂಬೆಗಳು, ಅಕ್ಷರ ದೀಪ, ಸರ್ವಂ….ಅಕ್ಷರ ಮಯಂ… ಇಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದದ್ದು  ಜಿ ಜಿ ಎಂ ಎಸ್ ಕ್ಲಸ್ಟರ್ ನ  ಕಲಿಕಾ ಹಬ್ಬದಲ್ಲಿ.

ಶಾಲಾ ಶಿಕ್ಷಣ ಇಲಾಖೆಯ 2025 26 ನೇ ಸಾಲಿನ ಎಫ್ ಎಲ್ ಎನ್ ಕಲಿಕಾ ಹಬ್ಬವು ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರದಲ್ಲಿ ಜರುಗಿತು.

ಜಿ ಜಿ ಎಂ ಎಸ್ ಕ್ಲಸ್ಟರ್ ನ ಸರ್ಕಾರಿ ಶಾಲೆಗಳು ಈ  ಹಬ್ಬದಲ್ಲಿ ಪಾಲ್ಗೊಂಡಿದ್ದವು. ಶಾಲೆಯು ಅಕ್ಷರಗಳಿಂದ ಅಲಂಕೃತಗೊಂಡಿದ್ದು ಅಕ್ಷರ ಹಬ್ಬವಾಗಿ ಕಂಗೊಳಿಸುತ್ತಿತ್ತು.

ಅಕ್ಷರ ಛತ್ರಿಯನ್ನು ಹಿಡಿದು, ಅಕ್ಷರ ದೀಪ ಹಚ್ಚುವ ಮೂಲಕ ಕಾರ್ಯಕ್ರಮವನ್ನು ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ವಿಶಾಲಾಕ್ಷಿ ಉದ್ಘಾಟಿಸಿ ಚಿನ್ನಕ್ಕಿಂತ ಅಕ್ಷರ ಲೇಸು ಎಂಬ ಕಿವಿ ಮಾತನ್ನು ಮಕ್ಕಳಿಗೆ ಹೇಳುವ ಮೂಲಕ ಅಕ್ಷರ ಹಾರದ ಮಹತ್ವವನ್ನು ವಿವರಿಸಿದರು.

ಎಫ್ಎಲ್ ಎನ್ ಕಲಿಕಾ ಹಬ್ಬದ ಉದ್ದೇಶವನ್ನು ತಿಳಿಸುವುದರೊಂದಿಗೆ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು.

ದಾವಣಗೆರೆ ಉತ್ತರ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಪಸೀಹ್ ಉದ್ದೀನ್ ಶಾಕೀರ್ ಅವರು ಕಲಿಕಾ ಹಬ್ಬದ ವಿವಿಧ ಆಯಾಮಗಳನ್ನು  ತಿಳಿಸಿಕೊಟ್ಟರು ಚಟುವಟಿಕೆಗಳ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇಲಾಖೆಯ ಮೇಲುಸ್ತುವಾರಿ ಅಧಿಕಾರಿಗಳು, ಸ್ಥಳೀಯ ಮುಖಂಡರು, ಪೋಷಕರು ಉಪಸ್ಥಿತರಿದ್ದರು.

ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಲಕ್ಷೀ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸರ್ಕಾರಿ ಶಾಲೆಗಳಲ್ಲಿರುವ ಸಿಗುವ ಸೌಲಭ್ಯಗಳ ಮಾಹಿತಿಯನ್ನು ಪ್ರದರ್ಶನ ಮಾಡಲಾಗಿತ್ತು.

Read also : ವಸತಿ ಶಾಲೆಗಳನ್ನು ತೆರೆದು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿ : ಶಾಸಕ ಕೆ.ಎಸ್.ಬಸವಂತಪ್ಪ ಆಶಯ

ಕಥೆ ಹೇಳುವುದು, ಸಾಲಡ್ ತಯಾರಿಕೆ, ಗಟ್ಟಿ ಓದು, ಜ್ಞಾಪಕ ಪರೀಕ್ಷೆ, ಸುಂದರ ಕೈಬರಹ, ಸಂತೋಷದಾಯಕ ಗಣಿತ, ವಿಶೇಷವಾಗಿ ಪೋಷಕ ಮತ್ತು ಮಕ್ಕಳ ಸಹ ಸಂಬಂಧ ಚಟುವಟಿಕೆ, ಇದರ ಜೊತೆಗೆ ಗರಿಷ್ಠ ಮಗ್ಗಿ ಹೇಳುವ ಚಟುವಟಿಕೆಯನ್ನು ಆಯೋಜಿಸಲಾಗಿತ್ತು, ಪೋಷಕ ಮಕ್ಕಳ ಸಹಕಾರದೊಂದಿಗೆ ಆಡುವ ಆಟ ಅತ್ಯಂತ ಸಂತೋಷದಾಯಕವಾಗಿತ್ತು, ಎಲ್ಲರಿಗೂ ಸಿಹಿ ಅಡುಗೆ ಊಟ ಏರ್ಪಡಿಸಲಾಗಿತ್ತು.

ಮಕ್ಕಳು ಉತ್ತರ ಕರ್ನಾಟಕ ಶೈಲಿಯಲ್ಲಿ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಸಂಭಾಷಣೆ ಮೂಲಕ ಪರಿಚಯಿಸಿದರು.  ಸ್ವಾಗತ ನೃತ್ಯ ಮಾಡಿದರು.

ಕಾರ್ಯಕ್ರಮದ ರೂವಾರಿಯಾದ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿಗಳಾದ   ನಾಗರಾಜ ಹೆಚ್, ರವರು ಸರ್ವರನ್ನು ಸ್ವಾಗತಿಸುವುದರೊಂದಿಗೆ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಮುಖ್ಯ ಶಿಕ್ಷಕರಾದ  ವಾಣಿ ರವರು ವಂದಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು  ಶಿಕ್ಷಕಿ ತೇಜಸ್ವಿನಿ  ನಡೆಸಿಕೊಟ್ಟರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagwere ವಸತಿ ಶಾಲೆಗಳನ್ನು ತೆರೆದು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿ : ಶಾಸಕ ಕೆ.ಎಸ್.ಬಸವಂತಪ್ಪ ಆಶಯ
Next Article Davanagere ಶಾಲಾ,ಕಾಲೇಜುಗಳ ಬಳಿ ಗುಟ್ಕಾ ಮತ್ತು ತಂಬಾಕು ಮಾರಾಟ :73 ಸಾವಿರ ರೂ ದಂಡ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Electrical variation | ಹರಿಹರದಲ್ಲಿ ವಿವಿಧಡೆ ಅ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ

ಹರಿಹರ (Davanagere)  : ಗುತ್ತೂರು 220/66/11 ಕೆ.ವಿ. ವಿ.ವಿ. ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆ.22 ರಂದು…

By Dinamaana Kannada News

Davanagere news | ಶಿಕ್ಷಕರ ಕರ್ತವ್ಯ ಲೋಪಕ್ಕೆ ಶಾಸಕ ಬಸವಂತಪ್ಪ ಗರಂ

ದಾವಣಗೆರೆ (Davanagere) : ರಜೆಯಿದ್ದರೂ ರಜೆ ಚೀಟಿ ಇಲ್ಲ, ಹಾಜರಿ ಪುಸ್ತಕದಲ್ಲಿ ಎಂಟ್ರಿ ಇಲ್ಲ. ಇನ್ನು ಕೆಲಸಕ್ಕೆ ಹಾಜರಿಯಾಗಿದ್ದರೂ ಕೂಡ…

By Dinamaana Kannada News

Gautama Buddha | ‘ಮನುಕುಲದ ಬೆಳಕು ತಥಾಗತ ಬುದ್ಧ’

ಸರ್ ಎಡ್ವಿನ್ ಅರ್ನಾಲ್ಡ್ ಎಂಬ ವಿದ್ವಾಂಸರು ಬುದ್ಧನನ್ನು "ಏಷ್ಯಾದ ಬೆಳಕು" ಎಂದು ಕರೆದರೆ ರಿಸ್ ಡೇವಿಡ್ಸ್ ಎಂಬುವರು ಬುದ್ಧನನ್ನು "ಜಗತ್ತಿನ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?