Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮೀಣ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಆಪ್ತವಾಗಲಿ : ರಾಮಕೃಷ್ಣ
ತಾಜಾ ಸುದ್ದಿ

ಗ್ರಾಮೀಣ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಆಪ್ತವಾಗಲಿ : ರಾಮಕೃಷ್ಣ

Dinamaana Kannada News
Last updated: June 23, 2024 5:01 pm
Dinamaana Kannada News
Share
Harihara
ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರ ಮಾಸಿಕ ಸಭೆ
SHARE

ಹರಿಹರ:  ಗ್ರಾಮೀಣ ಭಾಗದಲ್ಲಿರುವ ಗ್ರಾಮ ಪಂಚಾಯ್ತಿಯ ಗ್ರಂಥಾಲಯಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕ್ರಮ ವಹಿಸಬೇಕೆಂದು ತಾಲ್ಲೂಕು ಪಂಚಾಯ್ತಿ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ ಪಿ. ಹೇಳಿದರು.

ನಗರದ ತಾಲೂಕು ಪಂಚಾಯ್ತಿ ಸಂಭಾಂಗಣದಲ್ಲಿ ನಡೆದ ತಾಲ್ಲೂಕಿನ 22 ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರ ಮಾಸಿಕ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದವರಿಗೆ ಜ್ಞಾನದ ಹರಿವು ಉಚಿತವಾಗಿ ಸಿಗಲಿ ಎಂಬ ಗುರಿಯೊಂದಿಗೆ ಸರ್ಕಾರ ಅಪಾರ ಅನುದಾನ ವ್ಯಯಿಸಿ ಗ್ರಂಥಾಲಯಗಳನ್ನು ಸ್ಥಾಪಿಸಿ ನಿರ್ವಹಣೆ ಮಾಡುತ್ತಿದೆ. ವ್ಯಯಿಸುತ್ತಿರುವ ಈ ಅನುದಾನದ ಉಪಯೋಗವಾಗಬೇಕೆಂದರೆ ಜನರು ವಿಶೇಷವಾಗಿ ವಿದ್ಯಾರ್ಥಿಗಳು, ಯುವಕ, ಯುವತಿಯರು ಗ್ರಂಥಾಲಯದ ಉಪಯೋಗ ಪಡೆದುಕೊಳ್ಳಬೇಕು.  ಆ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತಯಾರಿಯನ್ನು ಸೂಕ್ತವಾಗಿ ನಡೆಸಿ, ಗುರಿಯನ್ನು ತಲುಪುತ್ತಾರೆ. ಗ್ರಂಥಪಾಲಕರ ವೃತ್ತಿಯು ಒಂದು ರೀತಿಯಲ್ಲಿ ಶಿಕ್ಷಕ ವೃತ್ತಿಯಂತೆಯೆ ಇದೆ. ಗ್ರಂಥಾಲಯದಿಂದ ಉಪಯೋಗ ಪಡೆದು ಸಾಧನೆ ಸಾಧಿಸದವರು ಮೇಲ್ವಿಚಾರಕರನ್ನು ಶಿಕ್ಷಕರಂತೆಯೆ ಸ್ಮರಿಸುತ್ತಾರೆಂದರು.

ಗ್ರಾಮಾ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಗ್ರಂಥಾಲಯಗಳಿಗೆ ಇಂಟರ್‍ನೆಟ್ ಸೌಲಭ್ಯದೊಂದಿಗೆ ಡಿಜಿಟಲ್ ಉಪಕರಣಗಳನ್ನು ಒದಗಿಸಲಾಗಿದೆ. ವಿವಿಧ ಹಂತದ ವಿದ್ಯಾರ್ಥಿಗಳು, ಸ್ಪರ್ಧಾತಮ್ಕ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳಿಗೆ ಇದು ಸಹಾಯಕವಾಗಿದ್ದು, ಯುವ ಜನರಿಗೆ ಇದರ ಪರಿಚಯ ಮಾಡಿಕೊಡಬೇಕಿದೆ ಎಂದರು.

ಗ್ರಂಥಾಲಯದ ಒಳಗಿನ ಹಾಗೂ ಹೊರಗಿನ ವಾತಾವರಣ ಸ್ವಚ್ಚವಾಗಿಡಬೇಕು. ಓದುಗರಿಗೆ ಸೂಕ್ತ ಟೇಬಲ್, ಕುರ್ಚಿ, ಗಾಳಿ, ಬೆಳಕಿನ ವ್ಯವಸ್ಥೆ ಮಾಡಬೇಕು. ಪುಸ್ತಕ, ದಿನ, ವಾರ, ಮಾಸಿಕ ಪತ್ರಿಕೆಗಳನ್ನು ಕಾಣುವಂತೆ ಜೋಡಿಸಿಟ್ಟಿರಬೇಕು. ಈಗಿನ ತಲೆಮಾರಿನ ಅಗತ್ಯಕ್ಕೆ ತಕ್ಕ ಪುಸ್ತಕಗಳನ್ನು ಲಭ್ಯವಾಗುವಂತೆ ಮಾಡಿಕೊಂಡಲ್ಲಿ ಗ್ರಂಥಾಲಯಗಳು ಜನರಿಂದ ತುಂಬಿ, ತುಳುಕುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಉಮೇಶ್ ಹಾಗೂ ಎಲ್ಲಾ ಗ್ರಂಥಾಲಯಗಳ ಮೇಲ್ವಿಚಾರಕರು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ
Next Article davanagere ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ ಮೂಲಕ ಪ್ರಚಾರ…

By Dinamaana Kannada News

ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ…

By Dinamaana Kannada News

ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋಗಳಿಗೆ ದಂಡ

ದಾವಣಗೆರೆ : ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜ್ ಬಸ್‌ಗಳು ಹಾಗೂ ಆಟೋ, ವ್ಯಾನ್‌ಗಳು ಪರಿಶೀಲನೆ ನಡೆಸಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?