Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere : ಟ್ರಾಕ್ಟ್‌ರಗಳಿಗೆ ಕೇಜ್ ವ್ಹೀಲ್ ಹಾಕಿ ರಸ್ತೆಗೆ ಇಳಿದರೆ ಕ್ರಮ : ಜೆ.ಸಂಜೀವ್ ಕುಮಾರ್
ತಾಜಾ ಸುದ್ದಿ

Davanagere : ಟ್ರಾಕ್ಟ್‌ರಗಳಿಗೆ ಕೇಜ್ ವ್ಹೀಲ್ ಹಾಕಿ ರಸ್ತೆಗೆ ಇಳಿದರೆ ಕ್ರಮ : ಜೆ.ಸಂಜೀವ್ ಕುಮಾರ್

Dinamaana Kannada News
Last updated: August 8, 2024 12:53 am
Dinamaana Kannada News
Share
davanagere
davanagere
SHARE
ದಾವಣಗೆರೆ  (Davanagere): ಗ್ರಾಮೀಣ ಭಾಗದಲ್ಲಿ ಟ್ರಾಕ್ಟ್‌ರಗಳಿಗೆ  ಕೇಜ್ ವ್ಹೀಲ್ ಹಾಕಿಕೊಂಡು ಸಾರ್ವಜನಿಕ ರಸ್ತೆಗಳನ್ನು ಹಾಳುಮಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿರುವ ಟ್ರ್ಯಾಕ್ಟರ ಚಾಲಕರ ಮತ್ತು ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ತಾಲ್ಲೂಕಿನ ಹದಡಿ ಪೊಲೀಸ್ ಠಾಣೆ ಉಪನಿರೀಕ್ಷಕ ಜೆ.ಸಂಜೀವ್ ಕುಮಾರ್ ಎಚ್ಚರಿಕೆ ನೀಡಿದರು.
ದಾವಣಗೆರೆ ತಾಲ್ಲೂಕಿನ ಕಾಶೀಪುರ ಗ್ರಾಮದ ಶ್ರೀ ಕಾಶೀಲಿಂಗೇಶ್ವರ ಸಭಾಭವನದಲ್ಲಿ ರೈತರು ತಮ್ಮ ಟ್ರ್ಯಾಕ್ಟರ್‌ ಗಳಿಗೆ   ಕೇಜ್ ವ್ಹೀಲ್ ಹಾಕಿಕೊಂಡು ರಸ್ತೆಯಲ್ಲಿ ಸಂಚರಿಸದೆ ಹೊಲದಲ್ಲೇ ಕೇಜ್ ವ್ಹೀಲ್ ಅಳವಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
ಹಲವು ವರ್ಷಗಳಿಂದ ಕೇಜ್ ವ್ಹೀಲ್ ಹಾಕಿಕೊಂಡು ರಸ್ತೆಯಲ್ಲಿ ಸಂಚರಿಸಬಾರದು ಎಂದು ಜಾಗೃತಿ ಮೂಡಿಸಲಾಗುತ್ತಿದೆ ಆದರೂ ಕೆಲ ರೈತರು ತಮ್ಮ ಮನೆಯಿಂದಲೇ ಟ್ರ್ಯಾಕ್ಟರ ಗಳಿಗೆ ಕೇಜ್ ವ್ಹೀಲ್ ಹಾಕಿಕೊಂಡು ರಸ್ತೆ ಮೂಲಕ ತಮ್ಮ ಹೊಲಗಳಿಗೆ ಸಂಚಾರ ಮಾಡುತ್ತಿದ್ದಾರೆ.
ಇದರಿಂದ ರಸ್ತೆಗೆ ಹಾನಿಯುಂಟಾಗಿ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಮೊದಲ ಹಂತವಾಗಿ ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನಂತರದ ದಿನಗಳಲ್ಲಿ ರಸ್ತೆಗಳಲ್ಲಿ ಕೇಜ್ ವ್ಹೀಲ್ ಟ್ರ್ಯಾಕ್ಟರ  ಸಂಚರಿಸುತ್ತಿರುವುದು ಗಮನಕ್ಕೆ ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಸುಮಾರು 10 ಟ್ರ್ಯಾಕ್ಟರ ಗಳ ಮೇಲೆ ಸ್ಥಳದಲ್ಲೇ ದಂಡ ವಿಧಿಸಿ ಕೇಸ್ ದಾಖಲಿಸಲಾಗಿದೆ ಎಂದರು.
ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 45 ಹಳ್ಳಿಗಳಲ್ಲಿ ಹಾಗೂ ಠಾಣೆಯ ಅಧಿಕೃತ ಜಾಲತಾಣದಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಗುಪ್ತ ಮಾಹಿತಿದಾರರನ್ನು ನೇಮಿಸಲಾಗಿದ್ದು, ಅವರ ನೀಡುವ ಟ್ರ್ಯಾಕ್ಟರ  ಫೋಟೋ ಆಧಾರವಾಗಿಟ್ಟುಕೊಂಡು ಕೇಸ್ ದಾಖಲು ಮಾಡಲಾಗುತ್ತಿದೆ. ಮುಖ್ಯವಾಗಿ ಗ್ರಾಮದಲ್ಲಿ ಪ್ರತಿ 70  ಮೀಟರ್‌ಗೆ  ವಿದ್ಯುತ್ ಕಂಬ ಅಳವಡಿಸುವುದು ಮತ್ತು ಮುಖ್ಯ ರಸ್ತೆಗಳಿಗೆ ಸಿಸಿ ಕ್ಯಾಮರ ಅಳವಡಿಸುವುದರಿಂದ ಗ್ರಾಮದಲ್ಲಿನ ಅನೈತಿಕ ಚಟುವಟಿಕೆಗಳು, ಕಳ್ಳಕಾಕರ ಗುರುತುಗಳು ಹಾಗೂ ಗ್ರಾಮದ ಎಲ್ಲಾ ಚಲನವಲನಗಳ ಮೇಲೆ ನಿಗವಹಿಸಲು ಅನುಕೂಲವಾಗುತ್ತದೆ ಆದ್ದರಿಂದ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಸಿಸಿ ಕ್ಯಾಮರ ಬೀದಿ ದೀಪಗಳನ್ನು ಅಳವಡಿಸಿಕೊಳ್ಳಿ ಎಂದು ಹೇಳಿದರು.

Read also : DAVANAGERE : ‘ಇ–ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು

ಬರೀ ನಗರದಲ್ಲಿ ಅಲ್ಲದೇ ಹಳ್ಳಿಗಳಲ್ಲೂ ಅಪಘಾತಗಳಾಗಿ ಸಾವು ನೋವು ಸಂಬಂವಿಸಿವೆ ಆದ್ದರಿಂದ ಹಳ್ಳಿಗಳಲ್ಲೂ ಬೈಕ್ ಚಾಲಕರು ಹೆಲ್ಮೆಟ್ ಧರಿಸಬೇಕು ಎಂದ ಅವರು, ರೈತರು ಇನ್ನಾದರು ಜಾಗೃತಗೊಂಡು ರಸ್ತೆಗೆ ಹಾನಿ ಮಾಡಿ ಸರ್ಕಾರಕ್ಕೆ ನಷ್ಟವಾಗುವುದನ್ನು ತಪ್ಪಿಸಬೇಕು ಇಲ್ಲಾವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕಾಶೀಪುರ ಗ್ರಾಮದ ಕಲ್ಲೇಶ, ಕೆ.ಎಸ್.ಓಂಕಾರಮೂರ್ತಿ, ಈಶಣ್ಣ, ಪಂಚಾಕ್ಷರಿ, ಕೆ.ಪಿ.ರುದ್ರಪ್ಪ, ಕೆ.ಪಿ.ಶಿವಕುಮಾರ್, ಮೆದಕೇರಪ್ಪ, ರೇವಣಸಿದ್ದಪ್ಪ, ವಿನೋದ್ ಕುಮಾರ್ ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANAGERE : ‘ಇ-ಸ್ವತ್ತು’ಗೆ ಅಲೆದಾಡಿಸಬೇಡಿ : ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು
Next Article Davanagere DAVANAGERE NEWS: ಸಿ.ಎಂ.ಸಿದ್ದರಾಮಯ್ಯ ಅವರ ತೇಜೋವಧೆ ಸರಿಯಲ್ಲ : ವಿನಾಯಕ ಬಿ.ಎನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಿಎಂ ಸಿದ್ದರಾಮಯ್ಯ ಅವರಿಂದ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು (Bangalore) : ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ…

By Dinamaana Kannada News

ಬಳ್ಳಾರಿಯ ಚೆಗೆವಾರ!

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಸಾಣಿಕೊಪ್ಪದ,ಶಿವರುದ್ರಯ್ಯ ಸ.ಹಿರೇಮಠ ಎಂಬ ಗಾಂಧಿವಾದಿ,ಬಳ್ಳಾರಿ ಜಿಲ್ಲೆಯ ಹೊಸಪೇಟೆ ಕಾಲೇಜಿನ ಮೇಷ್ಟ್ರಾಗುವ ಹೊತ್ತಿಗೆ ಭೀಮಸೇನರಾವ್ ಎಂಬ ಮಾರ್ಕ್ಸ್…

By Dinamaana Kannada News

DAVANAGERE NEWS : ಬಸವ ಪಂಚಮಿ : ಹಾಲು ಮತ್ತು ಬ್ರೆಡ್ ವಿತರಣೆ

ಹರಿಹರ (DAVANGERE) :  ಮಾನವ ಬಂಧುತ್ವ ವೇದಿಕೆ ಕರ್ನಾಟಕ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹರಿಹರದ ಗುತ್ತೂರು ಹೆಲಿಫ್ಯಾಡ್‍ನಲ್ಲಿರುವ…

By Dinamaana Kannada News

You Might Also Like

davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?