Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihar | ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ನಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ : ಡಿಎಸ್‌ಎಸ್‌ ಆರೋಪ
ತಾಜಾ ಸುದ್ದಿ

Harihar | ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ನಿಲ್ಲದ ಅಕ್ರಮ ಮಣ್ಣು ಗಣಿಗಾರಿಕೆ : ಡಿಎಸ್‌ಎಸ್‌ ಆರೋಪ

Dinamaana Kannada News
Last updated: December 19, 2024 4:00 pm
Dinamaana Kannada News
Share
harihara
harihara
SHARE

ಹರಿಹರ (Harihara): ಜಿಲ್ಲಾಧಿಕಾರಿಯವರೂ ಸೇರಿದಂತೆ ಸಂಬಂಧಿತ ಇಲಾಖಾಧಿಕಾರಿಗಳಿಗೆ ದೂರು ಅರ್ಜಿಗಳನ್ನು ನೀಡಿದ ಹೊರತಾಗಿಯೂ ಹರಿಹರ ತಾಲ್ಲೂಕಿನ ಹಲವು ಗ್ರಾಮಗಳ ಪಟ್ಟಾ ಜಮೀನುಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದ್ದಾರೆ.

ಅಕ್ರಮ ಮಣ್ಣುಗಣಿಗಾರಿಕೆ ತಡೆಯಲು ಹರಿರಹ ತಹಶೀಲ್ದಾರರಿಗೆ ಡಿ. 4ರಂದು, ಜಿಲ್ಲಾಧಿಕಾರಿಯವರಿಗೆ ಡಿ.16ರಂದು ಎಲ್ಲೆಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿಯೊಂದಿಗೆ ದೂರು ಅರ್ಜಿ ನೀಡಲಾಗಿತ್ತು. ಇದರ ಹೊರತಾಗಿಯೂ ತಾಲ್ಲೂಕಿನ ಗುತ್ತೂರು, ಸಾರಥಿ, ಪಾಮೇನಹಳ್ಳಿ, ಭೈರನಹಳ್ಳಿ ಹಾಗೂ ಇತರೆ ಗ್ರಾಮಗಳಲ್ಲಿ ರಾತ್ರಿ ಸಮಯದಲ್ಲಿ ಬೃಹತ್ ಗಾತ್ರದ ಜೆಸಿಬಿಗಳಿಂದ ಎಗ್ಗಿಲ್ಲದೆ ಮಣ್ಣನ್ನು ಅಗೆದು ಲಾರಿಗಳಲ್ಲಿ ಸಾಗಿಸಲಾಗುತ್ತಿದೆ. ಗುತ್ತೂರಿನಲ್ಲಿ ಹೊಸದಾಗಿ ಮಣ್ಣು ಗಣಿಗಾರಿಕೆಯನ್ನು ಬುಧವಾರ ರಾತ್ರಿ ಕೈಗೊಂಡಿರುವುದರಿಂದ ಸಿದ್ದಪ್ಪಜ್ಜರ ಮಠ ಹಾಗೂ ಮುಸ್ಲಿಂ ಖಬರಸ್ತಾನ್ ಹಾಗೂ ನದಿಗೆ ತೆರಳುವ ರಸ್ತೆ ಅಸ್ತಿತ್ವಕ್ಕೆ ಧಕ್ಕೆ ಒದಗಿಸಲಿದೆ ಎಂದು ಅವರು ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೃಷಿ ಮಾಡುವ ಜಮೀನಿನ ಒಂದು ಪುಟ್ಟಿ ಮಣ್ಣನ್ನು ಇತರೆಡೆಗೆ ಸಾಗಿಸಲು ಭೂ ಕಂದಾಯ ಕಾಯ್ದೆಯಲ್ಲಿ ಅವಕಾಶ ಇರದಿದ್ದರೂ ರಾಜಾರೋಷವಾಗಿ ಎಕರೆಗಟ್ಟಲೆ ಜಮೀನುಗಳಲ್ಲಿನ ಮಣ್ಣನ್ನು ಸಾಗಿಸುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾಡಳಿತ ತಕ್ಷಣ ಕಾರ್ಯೋನ್ಮುಖವಾಗಿ ತಾಲ್ಲೂಕಿನಾದ್ಯಂತ ಮಣ್ಣು ಗಣಿಗಾರಿಕೆಯನ್ನು ನಿಲ್ಲಿಸಬೇಕು, ಕೃಷಿ ಜಮೀನುಗಳನ್ನು, ಪರಿಸರವನ್ನು ಸಂರಕ್ಷಿಸಬೇಕಾಗಿ ಅವರು ಆಗ್ರಹಿಸಿದ್ದಾರೆ.

Read also : New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Serial 'Nuru Janmaku' New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ
Next Article Davangere Davanagere | ವೃದ್ಧೆ  ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ : ಬೈಕ್ ರ‍್ಯಾಲಿ

ದಾವಣಗೆರೆ ಸೆ.14 : ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,…

By Dinamaana Kannada News

ಪ.ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳ ಯೋಜನೆಗಳಿಗೆ…

By Dinamaana Kannada News

Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಅ.07 (Davanagere) ; ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?