Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ|ರೈತರೊಂದಿಗೆ ಅನುಚಿತ ವರ್ತನೆ : ಪ್ರತಿಭಟನೆ
ತಾಜಾ ಸುದ್ದಿ

ಹರಿಹರ|ರೈತರೊಂದಿಗೆ ಅನುಚಿತ ವರ್ತನೆ : ಪ್ರತಿಭಟನೆ

Dinamaana Kannada News
Last updated: September 18, 2025 3:22 am
Dinamaana Kannada News
Share
harihara
SHARE

ಹರಿಹರ: ತಾಲ್ಲೂಕಿನ ದೊಗ್ಗಳ್ಳಿ ಗ್ರಾಮ ಠಾಣಾ ವ್ಯಾಪ್ತಿಗೆ ಹೊಂದಿಕೊಂಡ ಜಮೀನಿನ ಅಳತೆ ಮಾಡುವಾಗ ಹನಗವಾಡಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯು ರೈತರೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಇಲ್ಲಿನ ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ವ್ಯಕ್ತಪಡಿಸಿದರು.

ತಾಪಂ ಇಒ ಎಸ್.ಪಿ.ಸುಮಲತಾ ಅವರಿಗೆ ಮನವಿ ನೀಡಿದ ನಂತರ ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಜಿ.ಪ್ರಭುಗೌಡ್ರು ಮಾತನಾಡಿ, ದೊಗ್ಗಳ್ಳಿ ಗ್ರಾಮದ ರೈತರೊಬ್ಬರು ನೀಡಿದ ಅರ್ಜಿ ಅನ್ವಯ ಭೂಮಾಪನಾ ಇಲಾಖೆ ಸಿಬ್ಬಂದಿ ಸೆ.16 ರಂದು ಸ್ಥಳಕ್ಕೆ ಆಗಮಿಸಿದ್ದಾಗ ಪಿಡಿಒ ಪ್ರಭಾಕರ ಅವಾಚ್ಯ ಶಬ್ದಗಳಿಂದ ಅರ್ಜಿದಾರ ರೈತನಿಗೆ ನಿಂದಿಸಿದ್ದಾರೆ.

ಅರ್ಜಿದಾರನ ಪರವಾಗಿ ವರದಿ ನೀಡಬೇಡಿರಿ ಎಂದೂ ಭೂಮಾಪಕ ಸಿಬ್ಬಂದಿಗೆ ಒತ್ತಡ ಹೇರಿದ್ದಾರೆ, ಇ ಸ್ವತ್ತು ನೀಡಲು ಗ್ರಾಮಸ್ಥರಿಂದ ಹಣ ಪಡೆಯುತ್ತಾರೆಂಬ ದೂರು ಇವರ ವಿರುದ್ಧ ಇದೆ, ಹೀಗಾಗಿ ಆ ಪಿಡಿಒ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಪಿಡಿಒ, ಅವಾಚ್ಯವಾಗಿ ಮಾತನಾಡಿಲ್ಲ, ಇ ಸ್ವತ್ತು ನೀಡಲು ನಾನು ಹಣಕ್ಕೆ ಬೇಡಿಕೆ ಇಡುವುದಾದರೆ ಗ್ರಾಮಸ್ಥರು ಲೋಕಾಯುಕ್ತರಿಗೆ ದೂರು ನೀಡಬಹುದು, ಕಾರ್ಯಒತ್ತಡ, ಆನ್‍ಲೈನ್ ಮೀಟಿಂಗ್ ನಿಂದಾಗಿ ಕೆಲಸ ಮಾಡಿಕೊಡುವುದು ತಡವಾಗಬಹುದಷ್ಟೆ ಎಂದು ಸಮಜಾಯಿಷಿ ನೀಡಿದರು.

Read also : ಹರಿಹರ|ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ : ಮಾರುತಿ ಬೇಡರ್

ನಂತರ ಇಒ ಮಾತನಾಡಿ, ರೈತರನ್ನು ನಿಂದಿಸಬಾರದು, ನಿಗದಿತ ಅವಧಿಯಲ್ಲಿ ಗ್ರಾಪಂ ಕೆಲಸ, ಕಾರ್ಯಗಳನು ಮಾಡಿಕೊಡಬೇಕು ಎಂದು ಪಿಡಿಒಗೆ ಸೂಚಿಸಿದ ಜೊತೆಗೆ, ಅರ್ಜಿದಾರ ರೈತ ಜಮೀನಿನ ಅಳತೆಯನ್ನು ಬೆಳೆ ಕಟಾವು ಮಾಡಿದ ನಂತರ ಹಿಂದಿನ ಶುಲ್ಕದಲ್ಲೆ ಮಡಿಕೊಡಬೇಕೆಂದು ಭೂ ಮಾಪನಾ ಇಲಾಖೆ ಸಹಾಯಕ ನಿರ್ದೇಶಕ ಕಲ್ಲೇಶ್ ಅವರಿಗೆ ಸೂಚಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ದಾವಣಗೆರೆ ಅಂಜಿನಪ್ಪ, ದೊಗ್ಗಳ್ಳಿ ಮಹೇಶ್ವರಪ್ಪ, ಗರಡಿಮನಿ ಬಸಣ್ಣ, ಅಮರಾವತಿ ಚಂದ್ರಪ್ಪ, ಬೆಳವನೂರು ಕರಿಬಸಪ್ಪ, ಭೀಮಪ್ಪ ಕೆ.ಎನ್., ಎಂ.ಬಿ.ಪಾಟೀಲ್ ಪಾಳ್ಯ, ನಾಗರಾಜ್ ಹಾಗೂ ಇತರರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article harihara ಹರಿಹರ|ಬದುಕನ್ನು ಹಸನು ಮಾಡುವ ಶಕ್ತಿ ಅಭಿಯಂತರರಿಗಿದೆ : ಮಾರುತಿ ಬೇಡರ್
Next Article Davanagere ಪೋಷಣ್ ಮಾಸಾಚರಣೆ|ಪೌಷ್ಠಿಕಾಂಶ ಆಹಾರ ಸೇವನೆಗೆ ಆದ್ಯತೆ ನೀಡಿ :ನ್ಯಾ.ಮಹಾವೀರ ಮ ಕರೆಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ :ನವರಾತ್ರಿ ಸಡಗರ, ಸಂಭ್ರಮ

ದಾವಣಗೆರೆ: ದಾವಣಗೆರೆಯಲ್ಲಿ ಶರನ್ನವರಾತ್ರಿ ಸಡಗರ, ಸಂಭ್ರಮ ಮನೆ ಮಾಡಿದೆ. ಗಲ್ಲಿ ಗಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬನ್ನಿ ಮರದ ಕೆಳಗೆ…

By Dinamaana Kannada News

ಡಾ.ಫ.ಗು. ಹಳಕಟ್ಟಿ : ವಚನ ಸಾಹಿತ್ಯ ಸಂರಕ್ಷಣಾ ದಿನ

ಹುಟ್ಟು ಸಾವು ನಮ್ಮದಲ್ಲ , ಬದುಕು ಮಾತ್ರ ನಮ್ಮದು , ನಮ್ಮ ಬದುಕು ದೀಪವಾದರೂ ಇಲ್ಲವೇ ಕನ್ನಡಿಯಾದರೂ ಆಗಬೇಕು. ಒಂದು…

By Dinamaana Kannada News

ಗ್ಯಾರಂಟಿಗಳಿಗೆ “ದಲಿತ ” ಸಮುದಾಯದ ಅನುದಾನ : ಪಿ.ಜೆ.ಮಹಾಂತೇಶ್ ಖಂಡನೆ

ಹರಿಹರ:  2024-25ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ (ಟಿಎಸ್‌ಪಿ) ಕ್ರಿಯಾಯೋಜನೆ ಅನುದಾನದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳಿಗೆ ಜ್ಞಾನ-ವಿಜ್ಞಾನದ ಜೊತೆಗೆ ಸುಜ್ಞಾನವೂ ಅಗತ್ಯ:ಎಂ.ವಿ. ಸತ್ಯನಾರಾಯಣ

By Dinamaana Kannada News
Davanagere
ತಾಜಾ ಸುದ್ದಿ

ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ

By Dinamaana Kannada News
Davanagere
ತಾಜಾ ಸುದ್ದಿ

ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಸಾರಿಗೆ ಇಲಾಖೆ : ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ವಿನಾಯಿತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?