Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಮನಸ್ಸು ಸ್ವಚ್ಚದಿಂದ ಮಾತ್ರ ಆರೋಗ್ಯ : ನ್ಯಾ.ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ
ತಾಜಾ ಸುದ್ದಿ

ದಾವಣಗೆರೆ|ಮನಸ್ಸು ಸ್ವಚ್ಚದಿಂದ ಮಾತ್ರ ಆರೋಗ್ಯ : ನ್ಯಾ.ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ

Dinamaana Kannada News
Last updated: October 24, 2025 11:35 am
Dinamaana Kannada News
Share
Davanagere
SHARE

ದಾವಣಗೆರೆ ಅ.23  : ಮನಸ್ಸು ಸ್ವಚ್ಚವಾಗಿದ್ದರೆ ಅವರು ಎಲ್ಲಾದರಲ್ಲಿ ಆರೋಗ್ಯವಂತನಾಗಿ ಶ್ರೀಮಂತನಾಗಿರುತ್ತಾನೆ ಎಂದು  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಅಧ್ಯಕ್ಷ  ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ ಅಭಿಪ್ರಾಯಪಟ್ಟರು.

ಶುಕ್ರವಾರ  ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತರು ಎಂದರೆ ಯಾವುದೇ ಕಾಯಿಲೆ ಇಲ್ಲದೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕವಾಗಿ ಚೆನ್ನಾಗಿರುವುದೇ ಆಗಿದೆ. ಎಲ್ಲಾ ಸಮಯ, ಸಂದರ್ಭದಲ್ಲಿ ನೆಮ್ಮದಿಯಿಂದ ಇರುತ್ತಾ ಎಲ್ಲರೊಡನೆ ಹೊಂದಾಣಿಕೆಯಿಂದ ಬದುಕುತ್ತಾ, ಸ್ವಾವಲಂಬಿಯಾಗಿ, ಸಂತೋಷವಾಗಿ, ತೃಪ್ತಿಕರವಾಗಿರುವುದೇ ಮಾನಸಿಕ ಆರೋಗ್ಯ, ದೇಹ ಮತ್ತು ಮನಸ್ಸು ಒಂದೇ ನಾಣ್ಯದ ಎರಡು ಮುಖಗಳು.

ಒಂದಕ್ಕೆ ತೊಂದರೆಯಾದರೆ ಮತ್ತೊಂದಕ್ಕೆ ತೊಂದರೆ, ದೈಹಿಕ ಕಾಯಿಲೆ ಮಾನಸಿಕ ನೆಮ್ಮದಿಯನ್ನು ಕೆಡಿಸಿದರೆ, ಮಾನಸಿಕ ಸಮಸ್ಯೆ ದೇಹದ ಆರೋಗ್ಯವನ್ನು ಕೆಡಿಸಬಲ್ಲದು.  ಕಣ್ಣು ನೋಡಿದ ಸೌಂದರ್ಯವನ್ನು ಮನಸ್ಸು ಸಂತೋಷವಾಗಿಸಬೇಕು. ಅದ್ದರಿಂದ ಮತ್ತೊಬ್ಬರಿಗೆ ತೊಂದರೆಯಾಗಬಾರದು. ಕಿವಿಯಿಂದ ಇಂಪಾದ ಸಂಗೀತವನ್ನು ಕೇಳಬೇಕೇ ಹೊರತು, ಕೆಟ್ಟಮಾತುಗಳನ್ನು ಹಾಡಬಾರದು. ಆಗ ಮಾತ್ರ ಅವನ ಮಾನಸಿಕ ಸ್ಥಿತಿ ಕೇಡುವುದಿಲ್ಲ.

ನಾವು ಮಾತನಾಡುವ ರೀತಿ, ನೋಡುವ ದೃಷ್ಠಿ ಸರಿಯಾಗಿ ಇದ್ದರೆ ಆಗ ಮಾತ್ರ ನಮಗೆ ಯಾವುದೇ ರೀತಿಯ ಮಾನಸಿಕ ಆರೋಗ್ಯ ಕೇಡುವುದಿಲ್ಲ. ಒಂದು ಮನೆಯಲ್ಲಿ ಒಬ್ಬ ವ್ಯಕ್ತಿ ಮಾನಸಿಕ ರೋಗಿ ಆಗಿದ್ದರೆ ಆಗ ಅವರ ಮನೆಯ ಪರಿಸ್ಥಿತಿ ಹೇಗಿರುತ್ತದೆ ಎಂದರೆ ತಮ್ಮ ಕೆಲಸ, ಕರ್ತವ್ಯಗಳನ್ನು ಮಾಡಲಾರರು, ದುಡಿಯಲಾರರು. ಅವರನ್ನು ನೋಡಿಕೊಳ್ಳುವುದು ಮನೆಯವರ ಕೆಲಸವಾಗಿ, ಕುಟುಂಬದ ಮಾನಸಿಕ, ಆರ್ಥಿಕ ನೆಮ್ಮದಿ ಹಾಳಾಗುತ್ತದೆ. ರೋಗಿಗಳ ಮನೆಯವರು ಮೌನವಾಗಿ ನಾನಾ ಸಂಕಟಗಳಿಗೆ ತುತ್ತಾಗುತ್ತಾರೆ. ಇದರಿಂದ ಇಡೀ ಸಮುದಾಯ ನೋವಿಗೆ ಒಳಗಾಗುತ್ತಾರೆ ಎಂದರು.

Read also : ದಾವಣಗೆರೆ|ಮಳೆಯಿಂದ ನೀರು ಕೆಸರು : ನೀರನ್ನು ಕುದಿಸಿ, ಆರಿಸಿ ಕುಡಿಯಿರಿ

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣನವರ ಮಾತನಾಡಿ, ಮಾನಸಿಕ ಅಸ್ವಸ್ಥತೆವುಳ್ಳ ವ್ಯಕ್ತಿ ತಿರುಗಾಡುತ್ತಿದ್ದರೆ ಮತ್ತು ತನ್ನನ್ನು ತಾನೇ ನೋಡಿಕೊಳ್ಳಲು ಅಸಮರ್ಥನಾದರೆ ಅವರನ್ನು ರಕ್ಷಣೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಳ್ಳಬೇಕು.  ರಕ್ಷಣೆಗೆ ತೆಗೆದುಕೊಂಡಂತಹ ವ್ಯಕ್ತಿಯನ್ನು ಪೊಲೀಸರು ಯಾವ ಕಾರಣಕ್ಕಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬುದನ್ನು ಆತನಿಗೆ ಅಥವಾ ನಾಮನಿರ್ದೇರ್ಶಿತ ಪ್ರತಿನಿಧಿಗೆ ತಿಳಿಸಬೇಕು.

ಯಾವುದೇ ಪರಿಸ್ಥಿತಿಯಲ್ಲಿ ರಕ್ಷಣೆಗೆ ತೆಗೆದುಕೊಂಡ ವ್ಯಕ್ತಿಯನ್ನು ಪೊಲೀಸ್ ಲಾಕ್‍ಆಪ್‍ನಲ್ಲಾಗಲಿ ಅಥವಾ ಜೈಲಿನಲ್ಲಾಗಲಿ ಇಡಬಾರದು. ಪೊಲೀಸರು ಕರೆದುಕೊಂಡ ಬಂದಂತಹ ವ್ಯಕ್ತಿಯ ಮಾನಸಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಲು ವ್ಯವಸ್ಥೆ ಮಾಡುವ ಜವಾಬ್ದಾರಿ ಸಂಪೂರ್ಣವಾಗಿ ಸಾರ್ವಜನಿಕ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರಾದ್ದಗಿರುತ್ತದೆ ಎಂದರು.

ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ.ನಾಗೇಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ ಎಲ್. ಪಾಟೀಲ್, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ನಾಗವೇಣಿ, ಜಿಲ್ಲಾ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ.ಮರುಳ ಸಿದ್ದಪ್ಪ. ಪಿ.ಎಂ, ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ.ಅನುಪಮ, ಡಾ.ಮೃತ್ಯುಂಜಯ, ವೈದ್ಯಾಧಿಕಾರಿ ಡಾ.ಸುಧೀಂದ್ರ, ಜಿಲ್ಲಾ ಮಾನಸಿಕ ಆರೋಗ್ಯ ಪುನರ್ ವಿಮರ್ಶಾ ಮಂಡಳಿಯ ಸದಸ್ಯರಾದ ಬಿ.ನಾಗಮ್ಮ, ಶಂಕರಮ್ಮ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere city-corporation ದಾವಣಗೆರೆ|ಮಳೆಯಿಂದ ನೀರು ಕೆಸರು : ನೀರನ್ನು ಕುದಿಸಿ, ಆರಿಸಿ ಕುಡಿಯಿರಿ
Next Article Davanagere city-corporation ಡಿವಿಜಿ ಸ್ಮಾರ್ಟ್ ಹೆಲ್ಪ್ ಮೊಬೈಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಪಾಲಿಕೆ ಆಯುಕ್ತೆ ರೇಣುಕಾ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ |ಗಾಂಧಿ ಜಯಂತಿ : ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025 ರ ಅ.2 ರಂದು ಆಚರಿಸುವ ಮಹಾತ್ಮ ಗಾಂಧೀಜಿಯವರ 156…

By Dinamaana Kannada News

ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ

ದಾವಣಗೆರೆ.ಜು.13:  ಉತ್ತಮ ಸೇವೆ ಮತ್ತು ದೇಶದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಅಥವಾ ಅಧಿಕಾರ ವಿಕೇಂದ್ರೀಕರಣ ಮಾಡುವುದು ಉತ್ತಮ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 45 : ಮಕ್ಕಳೂ ಅಂತರ್ಮುಖಿಗಳಾಗುವುದು ಎಂದರೆ…….

Kannada News | Sanduru Stories | Dinamaana.com | 05-06-2024 ಅಗಾಧ ಮೌನ (Sanduru Stories) ಯುದ್ಧ ಮುಗಿದ ನಂತರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?