ದಾವಣಗೆರೆ (Davanagere): ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದರು ವಿದ್ಯಾನಗರ ಪೊಲೀಸರು 33,24,300/- ರೂ ಮೌಲ್ಯದ ಸ್ವತ್ತು ವಶ ಬಂಗಾರದ ಆಭರಣಗಳು, ಬೆಳ್ಳಿ ಸಾಮಾನುಗಳು, ನಗದು ಹಣ ಹಾಗು ಕೃತ್ಯಕ್ಕೆ ಉಪಯೋಗಿಸಿದ ಕಾರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗದ ಸೈಯ್ಯದ್ ಅಕ್ಬರ್ ಬಂಧಿತ ಆರೋಪಿ
ಬೆಂಗಳೂರಿಗೆ ಹೋಗಿರುವ ಸಂದರ್ಭದಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿರುವುದಾಗಿ ವಿದ್ಯಾನಗರದ ಶಂಕರಯ್ಯ ಎಂಬುವವರು ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಪಿ ಉಮಾ ಪ್ರಶಾಂತ, ಎಎಸ್ಪಿ ಜಿ..ಮಂಜುನಾಥ, ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್, ಪಿ ಎಸ್ ಐ ವಿಶ್ವನಾಥ ಜಿ ಎನ್ ಹಾಗೂ ಸಿಬ್ಬಂದಿಗಳ ತಂಡ ಚಿತ್ರದುರ್ಗದ ಸೈಯ್ಯದ್ ಅಕ್ಬರ್ ಬಂಧಿಸಿ ಒಟ್ಟು 33.24 ಲಕ್ಷ ರೂ ಮೌಲ್ಯದ 332.740 ಗ್ರಾಂ ತೂಕದ ಬಂಗಾರದ ಆಭರಣಗಳು, 544 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು 1,32,000/-ರೂ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕೆಎ63-ಎಮ್-0579 ನೇ ನಂಬರಿನ ಬಲೇನೋ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ದ ಶಿವಮೊಗ್ಗ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ 2013 ರಲ್ಲಿ ಮನೆಕಳ್ಳತನ ಪ್ರಕರಣ, ಚಿತ್ರದುರ್ಗ ಟೌನ್ ಪೊಲೀಸ್ ಠಾಣೆಯಲ್ಲಿ 2020 ರಲ್ಲಿ ಮನೆಕಳ್ಳತನ ಪ್ರಕರಣಗಳಿವೆ.
ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕಿ ಶಿಲ್ಪಾ ವೈ.ಎಸ್ ಹಾಗೂ ಪಿಎಸ್ಐ ವಿಶ್ವನಾಥ ಜಿ ಎನ್, ಹಾಗು ಸಿಬ್ಬಂದಿಗಳಾದ ಆನಂದ ಎಮ್, ಶಂಕರ್ ಜಾದವ್. ಮಲ್ಲಿಕಾರ್ಜುನ ಚಂದ್ರಪ್ಪ, ಬೋಜಪ್ಪ, ಬಸವರಾಜ, ರಾಮಚಂದ್ರಪ್ಪ, ಮಾರುತಿ, ಸೋಮು ಆರ್, ರಾಘವೇಂದ್ರ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ರಮೇಶ್ ಎಂ ಪಿ, ಶಿವುಕುಮಾರ್ ಬಿ ಕೆ ರವರುಗಳನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.