Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಭಗೀರಥ ಪ್ರಯತ್ನ ಮಾಡಿದಲ್ಲಿ ಯಶಸ್ಸು ನಿಶ್ಚಿತ : ಡಿಸಿ
ತಾಜಾ ಸುದ್ದಿ

Davanagere | ಭಗೀರಥ ಪ್ರಯತ್ನ ಮಾಡಿದಲ್ಲಿ ಯಶಸ್ಸು ನಿಶ್ಚಿತ : ಡಿಸಿ

Dinamaana Kannada News
Last updated: May 4, 2025 1:37 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) :ಯಾವುದೇ ಕೆಲಸದಲ್ಲಿ ಭಗೀರಥರಂತೆ ಸತತ ಪ್ರಯತ್ನ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಭಗೀರಥ ಜಯಂತಿಯಲ್ಲಿ ಭಗೀರಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಒಂದಲ್ಲ ಒಂದು ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುತ್ತಾರೆ. ಹಾಗಾಗಿ ಸೋತಾಗ ಕುಗ್ಗದೇ, ಭಗೀರಥರಂತೆ ಸತತ ಪ್ರಯತ್ನ ಪ್ರಾಮಾಣೀಕವಾಗಿ ಮಾಡಿದಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸಾಧನೆ ನಿಶ್ಚಿತ ಎಂದ ಅವರು, ಪ್ರತಿಯೊಂದು ಕುಟುಂಬದಲ್ಲಿ ಭಗೀರಥರಂತಹ ವ್ಯಕ್ತಿ ಜನಿಸಿದರೆ ದೇಶ, ನಾಡು, ಸಮಾಜ, ಸಂಸ್ಕೃತಿ ಮತ್ತಷ್ಟು ಸಮೃದ್ಧಿಯಾಗಲಿದೆ. ಭಗೀರಥ ಮಹರ್ಷಿ ಅವರ ಜೀವನ, ಆದರ್ಶಗಳು ಭವಿಷ್ಯದ ಪೀಳಿಗೆಗೆ ದಾರಿದೀಪವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

Read also : ವಕ್ಫ್ ಉಳಿಸಿ-ಸಂವಿಧಾನ ಉಳಿಸಿ ಬೃಹತ್ ಸಮಾವೇಶದ ಪೋಸ್ಟರ್ ಬಿಡುಗಡೆ

ನಿವೃತ್ತ ಪ್ರಾಂಶುಪಾಲರಾದ ಡಾ.ಎಸ್.ಆರ್. ಅಂಜಿನಪ್ಪ ಮತನಾಡಿ, ಭಗೀರಥನು ಇಕ್ಷ್ವಾಕು ವಂಶದ ರಾಜನಾಗಿದ್ದು, ತನ್ನ ಪೂರ್ವಜರ ಆತ್ಮಗಳಿಗೆ ಶಾಂತಿ ಸಿಗಲೆಂದು ಅವನು ತನ್ನ ನಿಷ್ಠೆ ಹಾಗೂ ಪ್ರಾಮಾಣಿಕ ಕಠಿಣ ತಪಸ್ಸು ಮಾಡಿ ಬ್ರಹ್ಮನನ್ನು ಮೆಚ್ಚಿಸಿ, ಪಂಚಭೂತಗಳಲ್ಲಿ ಒಂದಾದ ಗಂಗೆಯನ್ನು ಧರೆಗಿಳಿಸಿದ ಮಹಾನ್ ಮಾನವತವಾದಿ. ಅಂತಹ ಪವಿತ್ರವಾದ ಗಂಗೆಯನ್ನು ಇಡೀ ಮನುಕುಲಕ್ಕೆ ನೀಡಿದ ಪುರಾಣ ಪುರುಷ. ಸತತ ಪ್ರಯತ್ನದಿಂದ ಅಸಾಧ್ಯವಾದುದು ಸಾಧ್ಯ ಎಂದು ತೋರಿದ ಆದರ್ಶ ಪುರುಷ, ಮನುಷ್ಯ ಪ್ರಯತ್ನಕ್ಕೆ ಮಾದರಿ. ಈ ಭಗೀರಥ ಮಹಾಶಯ. ಇಂತಹ ವ್ಯಕ್ತಿಯನ್ನು ಕೇವಲ ಒಂದು ಜಾತಿ, ಸಮುದಾಯಕ್ಕೆ ಹಾಗೂ ಜಯಂತಿಗಳಂದು ಪುಷ್ಪಾರ್ಚನೆಗೆ ಸೀಮಿತಗೊಳಿಸದೇ, ಅನುಸರಣೆಯ ಹಂತವನ್ನು ಪಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್‌ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ ಸಂತೋಷ್, ದೂಡ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಉಪ್ಪಾರ ಸಮಾಜದ ಗೌರವಾಧ್ಯಕ್ಷ ತಿಪ್ಪಣ್ಣ, ಜಿಲ್ಲಾಧ್ಯಕ್ಷ ಎಂ.ರಮೇಶ್, ತಾಲ್ಲೂಕು ಅಧ್ಯಕ್ಷ ಗಿರೀಶ್ ಹೊಸನಾಯಕನಹಳ್ಳಿ, ಕಾರ್ಯದರ್ಶಿ ಹೆಚ್.ಎಸ್,ಹಾಲೇಶ್, ಮಾಜಿ ಉಪ ಮೇಯರ್ ಮಂಜುಳಮ್ಮ ಸಮಾಜದ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Waqf ವಕ್ಫ್ ಉಳಿಸಿ-ಸಂವಿಧಾನ ಉಳಿಸಿ ಬೃಹತ್ ಸಮಾವೇಶದ ಪೋಸ್ಟರ್ ಬಿಡುಗಡೆ
Next Article ಮಾಜಿ ಸಚಿವ ಸಿ.ಪಿ Political analysis | ಯೋಗಿಯ ಯೋಗ ನೀರಿನಿಂದ  ನೀರಾ ತನಕ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪಾಲಿಕೆಯಿಂದ ನವೆಂಬರ್‌ನಲ್ಲಿ “ಕನ್ನಡ ಸ್ವಚ್ಚತಾ” ಮಾಸ : ಮಹಾಪೌರ ಚಮನ್‍ಸಾಬ್

ದಾವಣಗೆರೆ, ಅ. 24  (Davanagere) :  ಮಹಾನಗರ ಪಾಲಿಕೆಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ…

By Dinamaana Kannada News

ಮಕ್ಕಳೇಕೆ ಕಲಿಕೆಯಲ್ಲಿ ಹಿಂದುಳಿಯುವರು?? : ಮಕ್ಕಳಿಗೆ ಶಿಕ್ಷೆಗಿಂತ ಪ್ರೀತಿ,ವಿಶ್ವಾಸ ಸರಿಯಾದ ಮಾರ್ಗ

Kannada News | Dinamaana.com | 28-07-2024 ಸರಿಯಾಗಿ ಕುಳಿತು ಅಭ್ಯಾಸ ಮಾಡು' ಎಂದು ತಾಕೀತು ಮಾಡಿ ಶಿಕ್ಷೆ ನೀಡಿದ…

By Dinamaana Kannada News

ಗ್ಯಾರಂಟಿ ಯೋಜನೆ  ಬಿಜೆಪಿ ಮೇಲೆ ಪರಿಣಾಮ ಬೀರಲ್ಲ

ದಾವಣಗೆರೆ:   ರಾಜ್ಯ ಸರಕಾರದ  ಗ್ಯಾರಂಟಿ ಯೋಜನೆಗಳು ಬಿಜೆಪಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮೋದಿ ಅವರ ಹವಾದ ಮುಂದೆ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?