Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕುಡಿಯುವ ನೀರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ : ಡಿಸಿ
ತಾಜಾ ಸುದ್ದಿ

ಕುಡಿಯುವ ನೀರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ : ಡಿಸಿ

Dinamaana Kannada News
Last updated: March 30, 2024 12:58 pm
Dinamaana Kannada News
Share
dvg
ಕುಡಿಯುವ ನೀರು ಸರಬರಾಜು ಕುರಿತಂತೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ
SHARE

ದಾವಣಗೆರೆ, ಮಾ.೨೮ :  ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ನಿರೀಕ್ಷೆಯಿದ್ದು, ಕುಡಿಯುವ ನೀರಿನ ಪೂರೈಕೆಗಾಗಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿಟ್ಟುಕೊಂಡು ಸಮಸ್ಯೆಯಾದ ಕಡೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು ಸರಬರಾಜು ಕುರಿತಂತೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು

ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಸಾಕಷ್ಟು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕಾಲುವೆ ಮತ್ತು ನದಿಯಲ್ಲಿನ ನೀರು ಹರಿವು ಕಡಿಮೆಯಾಗಿದ್ದರಿಂದ ಸಮಸ್ಯೆಯಾಗಿದೆ. ಆದರೂ ಸಹ ನದಿಗೆ ಹಾಗೂ ಕಾಲುವೆಗೆ ನೀರು ಹರಿಸುವ ಮೂಲಕ ಮುಂದಿನ ೧ ತಿಂಗಳ ಕಾಲ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜೊತೆಗೆ ಕೊಳವೆಬಾವಿಗಳ ಮೂಲಕವೂ ನೀರು ಪೂರೈಕೆ ಮಾಡಲಾಗುತ್ತದೆ. ಕೆಲವು ಕಡೆ ಕೊಳವೆಬಾವಿಗಳು ಬತ್ತಿ ಹೋಗಿವೆ, ಇನ್ನೂ ಕೆಲವು ಕಡೆ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಇಳಿಕೆಯಾದ ಕೊಳವೆಬಾವಿಗೆ ಸಿಂಗಲ್‌ಫೇಜ್ ಮೋಟಾರ್ ಪಂಪ್ ಅಳವಡಿಸುವ ಮೂಲಕ ನೀರನ್ನು ಪೂರೈಕೆ ಮಾಡಲು ತಿಳಿಸಿ ಗ್ರಾಮ ಪಂಚಾಯಿತಿಗಳಲ್ಲಿನ ೧೫ ನೇ ಹಣಕಾಸು ಯೋಜನೆಯಡಿ ಹೊಸ ಸಿಂಗಲ್‌ಫೇಜ್ ಮೋಟಾರ್ ಖರೀದಿಸಲು ತಿಳಿಸಿದರು.

ಖಾಸಗಿ ಕೊಳಬೆಬಾವಿ ಗುರುತಿಸಲು ಸೂಚನೆ

ಎಲ್ಲೆಲ್ಲಿ ನೀರಿನ ಸಮಸ್ಯೆ ಎದುರಾಗಿದೆ, ಅಂತಹ ಕಡೆ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ ಬಾಡಿಗೆ ಆಧಾರದ ಮೇಲೆ ಪಡೆಯಲು ಮುಂದಾಗಬೇಕು. ಆದರೆ ಹೆಚ್ಚು ಟ್ಯಾಂಕರಗಳ ಮೇಲೆ ಅವಲಂಭಿತವಾಗಬಾರದು ಎಂದು ಎಚ್ಚರಿಕೆ ನೀಡಿದರು. ಪ್ರತಿ ದಿನ ಒಬ್ಬರಿಗೆ ಕನಿಷ್ಠ ೫೫ ಲೀಟರ್ ನೀರು ಪೂರೈಕೆ ಮಾಡಬೇಕಾಗಿದೆ ಮತ್ತು ಜಾನುವಾರುಗಳಿಗೂ ನೀರು ಪೂರೈಕೆ ಮಾಡುವುದರಿಂದ ಬಾಡಿಗೆ ಕೊಳವೆಬಾವಿಗಳಿಂದ ನಿರ್ವಹಣೆ ಸುಲಭವಾಗಲಿದೆ ಎಂದರು.

ಕೊಳಬೆವಾವಿ ಪುನಃಶ್ಚೇತನಕ್ಕೆ ಅನುದಾನ

ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದಲ್ಲಿ ಇದನ್ನು ಫ್ಲೆಶಿಂಗ್ ಮತ್ತು ಆಳಕ್ಕೆ ಕೊರತೆಯಲು ಯೋಜನೆ ರೂಪಿಸಬೇಕು. ಕೊಳವೆಬಾವಿಗಳ ಕೊರೆಯಲು ಜಿಲ್ಲೆಯಲ್ಲಿ ೭ ರಿಗ್‌ಗಳನ್ನು ವಶಕ್ಕೆ ಪಡೆದು ನೀಡಲು ಸಾರಿಗೆ ಅಧಿಕಾರಿಗೆ ಆದೇಶ ನೀಡಲಾಗಿದೆ. ಎಲ್ಲಲ್ಲಿ ಅಗತ್ಯವಿದೆ, ಅಂತಹ ಕಡೆ ಮಾತ್ರ ಹಾಲಿ ಇದ್ದ ಕೊಳವೆಬಾವಿ ಆಳ ಮತ್ತು ಫ್ಲೆಶಿಂಗ್ ಮಾಡುವ ಕೆಲಸ ಮಾಡಬೇಕೆಂದರು.

ಸಾರ್ವಜನಿಕ ಬಳಕೆ ಬೋರ್ ಪಕ್ಕ ಕೊಳವೆಬಾವಿ ಕೊರೆಸುವಂತಿಲ್ಲ

ಸಾರ್ವಜನಿಕ ಉದ್ದೇಶಕ್ಕಾಗಿ ಕೊಳವೆಬಾವಿ ಕೊರೆಯಿಸಿದ್ದಲ್ಲಿ ಖಾಸಗಿಯವರು ಪಕ್ಕದಲ್ಲಿಯೇ ಬಂದು ಕೊಳವೆಬಾವಿ ಕೊರೆಯಲು ಅವಕಾಶ ಇರುವುದಿಲ್ಲ. ಒಂದು ವೇಳೆ ಸಾರ್ವಜನಿಕರು ಕೊರೆಯಿಸಿದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ಕಾಯಿದೆಯಡಿ ವಶಕ್ಕೆ ಪಡೆದುಕೊಳ್ಳಲು ಅವಕಾಶ ಇದ್ದು ತಹಶೀಲ್ದಾರರು ಕ್ರಮ ಕೈಗೊಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ೩೧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೪೭ ಗ್ರಾಮಗಳಲ್ಲಿ ೫೨ ಖಾಸಗಿ ಬೋರ್‍ವೆಲ್ ಬಾಡಿಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಇನ್ನೂ ೧೭ ಬೋರ್‍ವೆಲ್ ಬಾಡಿಗೆ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ದಾವಣಗೆರೆ ತಾ; ೪ ಕೊಳವೆಬಾವಿ ಬಾಡಿಗೆ, ಜಗಳೂರು ತಾ; ೧೧ ಖಾಸಗಿ ಬಾಡಿಗೆ, ಉಚ್ಚಂಗಿ ದುರ್ಗದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಖಾಸಗಿ ಬೋರ್‍ವೆಲ್ ಪಡೆಯಲು ನಿರ್ದೇಶನ ನೀಡಲಾಯಿತು.

ಚನ್ನಗಿರಿ ತಾ; ೧೨ ಖಾಸಗಿ ಬೋರ್‍ವೆಲ್ ಪಡೆದು ಇನ್ನೂ ೫೪ ಗುರುತಿಸಲಾಗಿದೆ. ಸೂಳೆಕೆರೆಗೆ ಭದ್ರಾ ನೀರು ಬಿಡಿಸಿದರೆ ಶೇ ೫೦ ರಷ್ಟು ಸಮಸ್ಯೆ ಬಗೆಹರಿಯಲಿದೆ. ಹರಿಹರ ತಾ; ೨೦ ಬಾಡಿಗೆ ಬೋರ್‍ವೆಲ್ ಪಡೆದಿದ್ದು ಬಾನಳ್ಳಿಯಲ್ಲಿನ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ವಹಿಸಲು ಸೂಚನೆ, ತಾಲ್ಲೂಕಿನಲ್ಲಿ ೨೮ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿದೆ. ಹೊನ್ನಾಳಿ ತಾ; ೬ ಖಾಸಗಿ ಬೋರ್‍ವೆಲ್ ಪಡೆದಿದ್ದು ಹೊನ್ನಾಳಿ ೧೨, ನ್ಯಾಮತಿ ತಾಲ್ಲೂಕಿನ ೭ ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ೧೦೮೯ ಕೊಳವೆಬಾವಿಗಳಿವೆ, ಕುಂದುವಾಡ ಕೆರೆಯಿಂದ ೮-೧೦ ದಿನಗಳಿಗೊಮ್ಮೆ ಹಳೆ ದಾವಣಗೆರೆಗೆ ನೀರು ನೀಡಲಾಗುತ್ತಿದೆ. ಟಿ.ವಿ.ಸೇಷನ್ ಕೆರೆಯಿಂದ ೪-೫ ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಮತ್ತು ರಾಜನಹಳ್ಳಿ ಜಾಕ್‌ವೆಲ್‌ನಿಂದ ೬೦ ಎಂಎಲ್‌ಡಿ ನೀರು ಪೂರೈಕೆ ಮಾಡುತ್ತಿದ್ದು ಇದರಲ್ಲಿ ೨೦ ಎಂಎಲ್‌ಡಿ ನೀರು ಕುಂದುವಾಡ ಕೆರೆಗೆ ಸಂಗ್ರಹಿಸಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದಾಗ ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿನ ಹೊರತಾಗಿ ವಾಹನಗಳ ವಾಷಿಂಗ್, ಸಸಿಗಳಿಗೆ ಹಾಗೂ ಇನ್ನಿತರೆ ಉದ್ದೇಶಕ್ಕಾಗಿ ನೀರು ಬಳಸಬಾರದೆಂದು ಕಠಿಣ ಕ್ರಮ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಟ್ಯಾಂಕರ್ ಮಾಲಿಕರ ಎಂಪ್ಯಾನಲ್ ಮಾಡಲು ಸೂಚನೆ

ಕುಡಿಯುವ ನೀರಿನ ಸರಬರಾಜು ಮಾಡುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟ್ಯಾಂಕರ್ ಮಾಲಿಕರಿಂದ ದರಪಟ್ಟಿಯನ್ನು ಪಡೆದು ಅವರೊಂದಿಗೆ ಸಭೆ ಮಾಡಿ ಏಕರೂಪದ ದರ ನಿಗದಿ ಮಾಡಲು ಕ್ರಮ ವಹಿಸಬೇಕು. ಮಾಲಿಕರು ಟ್ಯಾಂಕರ್ ನೊಂದಣಿ, ಆರ್.ಸಿ, ಟ್ಯಾಂಕರ್ ಸ್ವಚ್ಚತೆ, ಜಿಪಿಎಸ್ ಅಳವಡಿಕೆ ಹೊಂದಿರುವ ಷರತ್ತುಗಳಿಗನುಗುಣವಾಗಿ ಎಂಪ್ಯಾನಲ್ ಮಾಡಿಕೊಳ್ಳಬೇಕು. ಇದರಿಂದ ಸಮಸ್ಯೆ ಉದ್ಬವಿಸಿದಾಗ ಟ್ಯಾಂಕರ್ ಮೂಲಕ ನೀರು ನೀಡಲು ತಕ್ಷಣ ಕ್ರಮ ವಹಿಸಲು ಅನುಕೂಲವಾಗುತ್ತದೆ ಎಂದರು.

ಖಾತರಿಯಡಿ ಕೆರೆಕಟ್ಟೆ ಹೂಳೆತ್ತಲು, ಮಳೆ ಕೊಯ್ಲು ಯೋಜನೆ ರೂಪಿಸಲು ಸೂಚನೆ

ಜಿಲ್ಲೆಯಲ್ಲಿ ಜಲಸಂಪನ್ಮೂಲ, ಸಣ್ಣ ನೀರಾವರಿ, ಜಿಲ್ಲಾ ಪಂಚಾಯತ್ ಕೆರೆಗಳು ಸೇರಿದಂತೆ ಒಟ್ಟು ೫೨೨ ಕೆರೆಗಳು ಜಿಲ್ಲೆಯಲ್ಲಿವೆ, ಆದರೆ ಇರುವ ಕೊಳವೆಬಾವಿಗಳ ಸಂಖ್ಯೆ ಜಾಸ್ತಿ ಇದ್ದು ಅಂತರ್ಜಲ ಮಟ್ಟ ಕುಸಿಯಲು ಕಾರಣವಾಗಿದೆ. ಆದ್ದರಿಂದ ಈಗಿರುವ ಕೆರೆಗಳಲ್ಲಿನ ಹೂಳೆತ್ತಲು, ಏರಿ ಭದ್ರಪಡಿಸಲು ಮತ್ತು ರಿಪೇರಿ ಇದ್ದಲ್ಲಿ ದುರಸ್ಥಿ ಕೆಲಸ ಮಾಡಲು ಮುಂದಾಗಬೇಕು. ಮತ್ತು ಸಾರ್ವಜನಿಕ ಕೊಳವೆಬಾವಿಗಳ ಸುತ್ತಮುತ್ತ ಮಳೆನೀರು ಮರುಪೂರಣ ಮಾಡಲು ಮಳೆಕೊಯ್ಲು ಯೋಜನೆ ರೂಪಿಸಲು ಜಿಲ್ಲಾಧಿಕಾರಿಯರು ಸೂಚನೆ ನೀಡಿ ದಾವಣಗೆರೆ ಜಿಲ್ಲೆ ಅಂತರ್ಜಲ ಕುಸಿದ ಜಿಲ್ಲೆಯ ಪಟ್ಟಿಯಲ್ಲಿದ್ದು ಕೊಳವೆಬಾವಿ ಕೊರೆಯಲು ಫಾರಂ ೭ ರಡಿ ಅರ್ಜಿ ಸಲ್ಲಿಸಿ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕು. ಆದರೆ ಇದುವರೆಗೂ ಯಾವುದೇ ಅರ್ಜಿ ನನ್ನ ಬಳಿ ಬಂದಿರುವುದಿಲ್ಲ, ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ಕುಡಿಯುವ ನೀರಿನ ವಿದ್ಯುತ್ ಸಂಪರ್ಕಕ್ಕೆ ಯಾವುದೇ ಅಡಚಣೆಯನ್ನು ಬೆಸ್ಕಾಂನಿಂದ ಮಾಡಬಾರದು. ಮತ್ತು ತಕ್ಷಣವೇ ಸಂಪರ್ಕ ಕಲ್ಪಿಸಲು ಕ್ರಮ ವಹಿಸುವ ಜೊತೆಗೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಟಿ.ಸಿ. ಸುಟ್ಟು ಹೋದಾಗ ತಕ್ಷಣವೇ ರಿಪೇರಿ ಮಾಡಿ ಅಳವಡಿಸುವ ಕೆಲಸ ಮಾಡಬೇಕು ಎಂದ ಅವರು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾಮಗಳಲ್ಲಿ ಕುಡಿಯುವ ನೀರಿನ ಮೋಟಾರ್ ಸುಟ್ಟಲ್ಲಿ ತಕ್ಷಣವೇ ರಿಪೇರಿ ಮಾಡಿಸುವ ಕೆಲಸ ಮಾಡಬೇಕು. ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ರಿಪೇರಿ ಮಾಡಿಸಲು ವಿಳಂಬ ಮಾಡುತ್ತಾರೆ ಎಂಬ ದೂರುಗಳಿದ್ದು ಕಾರ್ಯನಿರ್ವಾಹಕ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಎನ್.ದುಗಶ್ರೀ, ಅಭಿಷೇಕ್ ಹಾಗೂ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:dinamaana.comdinamaana.com.davanagere newsIf there is a problem with drinking waterrespond immediately.ಕುಡಿಯುವ ನೀರಿಗೆ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article cm siddaramaya  “ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷ ಮಣಿಸಲು ಸಾಧ್ಯವಿಲ್ಲ
Next Article CM Siddaramay ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಸಿಎಂ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಚನ್ನಪಟ್ಟಣದಲ್ಲಿ ಡಿಕೆಸು ವರ್ಸಸ್  ಅನಿತಕ್ಕ?

ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿಯ ಐರನ್ ಮ್ಯಾನ್ ಅಮಿತ್ ಷಾ ಅವರನ್ನು ಭೇಟಿ…

By Dinamaana Kannada News

Davanagere | ಕೋಳಿ ಶೀತ ಜ್ವರ : ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ : ಡಿಸಿ

ದಾವಣಗೆರೆ ಮಾ.06 (Davanagere):  ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅವೈಜ್ಞಾನಿಕ ಮಾಹಿತಿಗೆ ಕಿವಿಗೊಡಬೇಡಿ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ…

By Dinamaana Kannada News

Davanagere | ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಮಹಾವೀರ್ ಮಾ.ಕರೆಣ್ಣವರ್

ದಾವಣಗೆರೆ ಸೆ.25  (Davanagere)  : ವಿದ್ಯಾರ್ಥಿ ಜೀವನದಲ್ಲಿ ರ್ಯಾಗಿಂಗ್ ಎಂಬುವುದು ಪೆಡಂಭೂತ, ಇದು ಸಮಾಜಘಾತುಕ, ಸಾಮಾಜಿಕ, ಬೌದ್ಧಿಕ ಮತ್ತು ಧಾರ್ಮಿಕ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?