ದಾವಣಗೆರೆ (Davanagere): ಉಚ್ಚಂಗಿದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಸಾಕ್ಷಿನಾಶಕ್ಕಾಗಿ ಯತ್ನಿಸಿದ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತ ರಾಷ್ಟ್ರೀಯ ಮಹಿಳಾ ಫೆಡರೇಷನ್ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಗೃಹಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಅವಕಾಶವಾಗದಂತೆ ಕಾನೂನು ಕುಣಿಕೆಯನ್ನು ಬಿಗಿಗೊಳಿಸಬೇಕೆಂದು ಒತ್ತಾಯಿಸಿದರು.
ಮಹಿಳೆಯೊಬ್ಬರು ಕಳೆದ ಮಾ. 31 ರ ಸಂಜೆ ಯುಗಾದಿ ಹಬ್ಬದ ಪ್ರಯುಕ್ತ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಉತ್ಸವಾಂಬಾ ದೇವಿಯ ದರ್ಶನಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ವಾಪಸ್ ಸ್ವಗ್ರಾಮ ದಾವಣಗೆರೆ ತಾಲೂಕಿನ ಜರೇಕಟ್ಟೆ ಗ್ರಾಮಕ್ಕೆ ತೆರಳಲು ಅಂದು ರಾತ್ರಿ ಸುಮಾರು 8:30ರ ಸಮಯದಲ್ಲಿ ಉಚ್ಚಂಗಿದುರ್ಗದಿಂದ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಸಿದ್ದಾರೆ. ಬಸ್ನಲ್ಲಿದ್ದ ಬಹುತೇಕ ಪ್ರಯಾಣಿಕರು ತಮ್ಮ ತಮ್ಮ ಗ್ರಾಮಗಳಲ್ಲಿ ಇಳಿದಿದ್ದಾರೆ. ಕೊನೆಗೆ ಬಸ್ಸಿನಲ್ಲಿ ಮಕ್ಕಳೊಂದಿಗೆ ಮಹಿಳೆಯೊಬ್ಬಳೆ ಪ್ರಯಾಣಿಸುತ್ತಿರುವಾಗ ಬಸ್ನ ಚಾಲಕ ಮತ್ತು ನಿರ್ವಾಹಕ ಹಾಗೂ ಕ್ಲೀನರ್ 3 ಜನ ಸೇರಿ ಬಸ್ಸಿನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಅರಸೀಕೆರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಪ್ರಕರಣ ಗಂಭೀರತೆ ಪಡೆದುಕೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಆರೋಪಿಗಳು ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಪ್ರಭಾವ ಬೀರುವ ಪ್ರಯತ್ನ ನಡೆಸಿದ್ದಾರೆ.ಆದ್ದರಿಂದ ಈ ಪ್ರಕರಣದಲ್ಲಿ ಆರೋಪಿಗಳಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಉಪವಿಭಾಗಾಧಿಕಾರಿಗಳ ಮೂಲಕ ಗೃಹ ಮಂತ್ರಿ ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.
Read also : Davanagere | ಮೆಹಬೂಬ್ ಎ ಇಲಾಹಿ ಚಾರಿಟೇಬಲ್ ಟ್ರಸ್ಟ್ ವತಿ ಸಾಮೂಹಿಕ ವಿವಾಹ
ಜಾತ್ರೆಯ ಸಂದರ್ಭದಲ್ಲಿ ಸಾಕಷ್ಟು ಪೆÇಲೀಸ್ ಬಂದೋಬಸ್ತ್ ಮತ್ತು ಸಂಚಾರ ಪೆÇಲೀಸರ ಗಸ್ತು ಇದ್ದರೂ ಇಂತಹ ಘಟನೆ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ಘಟನೆಗೆ ಕಾರಣರಾದ ಈ ಮೂರು ಜನರಿಗೆ ಉಗ್ರ ಶಿಕ್ಷೆಯನ್ನು ಕೊಡಬೇಕು ಮತ್ತು ಸಂತ್ರಸ್ತ ಮಹಿಳೆಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಮಹಿಳಾ ಒಕ್ಕೂಟದ ಮುಖಂಡರು ಗಳಾದ ಸರೋಜಾ, ಹೆಚ್.ಜಿ.ಮಂಜುಳಾ, ಅನ್ನಪೂರ್ಣ, ಉಚ್ಚಂಗಿಮ್ಮ, ಶಕುಂತಲಮ್ಮ, ನಿರ್ಮಲ, ಸ್ನೇಹಲತಾ ಮತ್ತಿತರರು ಇದ್ದರು.