Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್
ತಾಜಾ ಸುದ್ದಿ

Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್

Dinamaana Kannada News
Last updated: June 4, 2025 2:30 pm
Dinamaana Kannada News
Share
Indira Canteen davanagere
Indira Canteen davanagere
SHARE

ದಾವಣಗೆರೆ (Davanagere) : ಸರ್ಕಾರವು ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಿಸುವ ಆಶಯದೊಂದಿಗೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್‌ಗಳನ್ನು ಪ್ರಾರಂಭಿಸಿದೆ. ಕಡಿಮೆ ದರದಲ್ಲಿ ನಗರ, ಗ್ರಾಮೀಣ ಪ್ರದೇಶದ ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ದಿನಗೂಲಿ ನೌಕರರು ಮತ್ತು ಕಡಿಮೆ ಆದಾಯದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಉಪಹಾರ, ಊಟ ಮತ್ತು ರಾತ್ರಿ ಊಟವನ್ನು ಒದಗಿಸುತ್ತಿರುವ ಇಂದಿರಾ ಕ್ಯಾಂಟಿನ್ ಹಸಿದವರ ಪಾಲಿಗೆ ಅನ್ನದಾತ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು.

ಬುಧವಾರ ದಾವಣೆಗರೆ ನಗರದಲ್ಲಿನ ಹೈಸ್ಕೂಲ್ ಮೈದಾನದಲ್ಲಿನ ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಊಟ ಮಾಡುತ್ತಿದ್ದವರ ತಟ್ಟೆಯಿಂದಲೇ ಚಪಾತಿ, ಪಲ್ಯ, ಅನ್ನಸಾಂಬಾರ್ ಸವಿಯುವ ಮೂಲಕ ಗುಣಮಟ್ಟದ ಪರೀಕ್ಷೆ ನಡೆಸಿದರು.

ಈ ವೇಳೆ ಕ್ಯಾಂಟಿನ್‌ಗೆ ಆಗಮಿಸಿದ್ದ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು, ಪ್ಯಾರಾಮೆಡಿಕಲ್ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿನಿಯರು ಮತ್ತು ರೈತರು, ಕಾರ್ಮಿಕರೊಂದಿಗೆ ಸಂವಾದ ನಡೆಸಿ ಮಾತನಾಡಿದರು.

Read also : ರೌಡಿಶೀಟರ್‌ಗಳ ಪರೇಡ್ | ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಎಸ್ಪಿ

ಹಸಿವು ಮುಕ್ತ ಕರ್ನಾಟಕ ಮಾಡಬೇಕೆಂಬ ಆಶಯದೊಂದಿಗೆ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆ ಕನಸಿನ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟಿನ್ ಆರಂಭಿಸಲಾಯಿತು. ಇಲ್ಲಿ ಬೆಳಗಿನ ಉಪಹಾರ ರೂ.5 ಕ್ಕೆ, ಮಧ್ಯಾಹ್ನ ಮತ್ತು ರಾತ್ರಿ ಊಟ ರೂ. 10ಕ್ಕೆ ನೀಡಲಾಗುತ್ತಿದೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬುದು ಸರ್ಕಾರದ ಪ್ರಮುಖ ಆಶಯವಾಗಿದೆ. ಆದ್ದರಿಂದ ಬಡವರಿಗೆ ದಿನದಲ್ಲಿ ಮೂರು ಹೊತ್ತು ಕಡಿಮೆ ದರದಲ್ಲಿ ಲಭ್ಯವಿರುವ ಪೌಷ್ಟಿಕಾಂಶದಿAದ ಕೂಡಿದ ಆಹಾರವನ್ನು ಒದಗಿಸಲಾಗುತ್ತದೆ ಎಂದರು.

ಹಾಗೆಯೇ ಅಲ್ಲಿನ ಸಿಬ್ಬಂದಿಯ ಬಳಿ ಪ್ರತಿದಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಖರ್ಚಾಗುವ ಪ್ರಮಾಣ ಇನ್ನಿತರೆ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಉತ್ತಮ ಗುಣಮಟ್ಟ ಹಾಗೂ ಶುಚಿ ರುಚಿಯಾದ ಆಹಾರ ಒದಗಿಸುವಂತೆ ತಾಕೀತು ಮಾಡಿದರು.

ಪ್ರಸ್ತುತ ರಾಜ್ಯಾದ್ಯಂತ 196 ಕ್ಯಾಂಟಿನ್ ಕಾರ್ಯನಿರ್ವಹಿಸುತ್ತಿದ್ದು, ಬಿಬಿಎಂಪಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ 186 ಕ್ಯಾಂಟಿನ್ ತೆರೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Parade of rowdy sheeters -davanagere ರೌಡಿಶೀಟರ್‌ಗಳ ಪರೇಡ್ | ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ : ಎಸ್ಪಿ
Next Article Davanagere ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.12 (Davanagere);  ಅಡಿಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ…

By Dinamaana Kannada News

ಒಂದ್ರುಪಾಯಿ ರೊಟ್ಟಿ ಹೋಟೆಲ್ಲೂ…ಹೂವಿನ ಹಡಗಲಿಯೆಂಬ ಪರಿಮಳದ ಊರೂ….

ಅದೇನೋ ಏನೋ, ತೊಂಭತ್ತರ ದಶಕವೆಂದರೆ ಅದೆಂಥದೋ ಸ್ಪೀಡು.ಒಂದ್ಕಡೆ ಮಂಡಲ್ ವರದಿ ಜಾರಿಗಾಗಿ ಹೋರಾಟ ನಡೆಯುತ್ತಿದ್ದರೆ ಮತ್ತೊಂದ್ಕಡೀಗೆ ಕಮಂಡಲ ಹಿಡಿದು ಹೊರಟ…

By Dinamaana Kannada News

19 ವರ್ಷಗಳ ನಂತರ ಹಳೇ ಕುಂದುವಾಡದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ: ಜಗಮಗಿಸುತ್ತಿದೆ ಗ್ರಾಮ

ದಾವಣಗೆರೆ(Davanagere): ಬೇಸಿಗೆ ಬಂತೆಂದರೆ ಸಾಕು ಜಾತ್ರಾ ಮಹೋತ್ಸವಗಳ ಸಂಭ್ರಮ ಪ್ರಾರಂಭವಾಗುತ್ತದೆ. ಆಯಾ ಗ್ರಾಮದ, ಗ್ರಾಮದೇವತೆಗಳ ಆರಾಧನೆಯನ್ನು ಜಾತ್ರಾ ಮೂಲಕ ವೈಭವದಿಂದ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?