Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಒಳ ಮೀಸಲಾತಿಯಲ್ಲಿ ಅನ್ಯಾಯ : ಅ.2ಕ್ಕೆ ಅಲೆಮಾರಿಗಳ ದೆಹಲಿ ಚಲೋ  
ತಾಜಾ ಸುದ್ದಿ

ದಾವಣಗೆರೆ|ಒಳ ಮೀಸಲಾತಿಯಲ್ಲಿ ಅನ್ಯಾಯ : ಅ.2ಕ್ಕೆ ಅಲೆಮಾರಿಗಳ ದೆಹಲಿ ಚಲೋ  

Dinamaana Kannada News
Last updated: October 1, 2025 6:53 am
Dinamaana Kannada News
Share
Thippanna
SHARE
ದಾವಣಗೆರೆ : ‘ರಾಜ್ಯ ಸರ್ಕಾರದ‌ ಒಳ ಮೀಸಲಾತಿ ಅಲೆಮಾರಿಗಳ ಭವಿಷ್ಯವನ್ನು ಆತಂಕಕ್ಕೆ ತಳ್ಳಿದ್ದು, ಸೂಕ್ತ ಮೀಸಲಾತಿಗಾಗಿ ಆಗ್ರಹಿಸಿ, ಅಲೆಮಾರಿಗಳ ಒಕ್ಕೂಟದಿಂದ ಅ.2 ರಂದು ‘ದೆಹಲಿ ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪರಿಶಿಷ್ಟ ಜಾತಿ ಅಲೆಮಾರಿಗಳು, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ 49 ಜಾತಿಗಳ ಮಹಾ ಒಕ್ಕೂಟದ ದಾವಣಗೆರೆ ಜಿಲ್ಲಾ ಸಂಚಾಲಕ ಡಿ.ತಿಪ್ಪಣ್ಣ ತಿಳಿಸಿದ್ದಾರೆ.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಒಳ ಮೀಸಲಾತಿ ಅಧ್ಯಯನ ನಡೆಸಿ, ಎಂಪಿರಕಲ್‌ ಡಾಟಾ (ದತ್ತಾಂಶ) ಆಧರಿಸಿ ವೈಜ್ಞಾನಿಕ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಸಿತ್ತು. ವರದಿ ಪರಿಶೀಲಿಸಿ, ಪರಿಷ್ಕರಿಸಿದ ಸರ್ಕಾರ ಅಸ್ಪೃಶ್ಯ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ‌ ಶೇ 6 ಮತ್ತು ಸ್ಪೃಶ್ಯ ಸಮುದಾಯಗಳಿಗೆ ಶೇ 5ರ ಮೀಸಲಾತಿ ನೀಡಿದೆ.
ಸ್ಪೃಶ್ಯ ಜಾತಿಗಳಾದ ಬೋವಿ ಮತ್ತು ಲಂಬಾಣಿ ಸಮುದಾಯದೊಂದಿಗೆ 59 ಅಲೆಮಾರಿ ಜಾತಿಗಳನ್ನೂ ಸೇರಿಸಿ ಅನ್ಯಾಯ ಮಾಡಲಾಗಿದೆ. ಸಣ್ಣಪುಟ್ಟ ಕಸುಬು ನಂಬಿ ಜೀವಿಸುವ ಅಲೆಮಾರಿಗಳು ಕೂಳಿಗೂ ಪರದಾಡುತ್ತಿದ್ದಾರೆ. ಬಹುತೇಕರು ಭಿಕ್ಷಾಟನೆ ಮಾಡಿ, ಹಗಲು ವೇಷ‌ ಹಾಕಿ, ಕೂಲಿ -ನಾಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇಂದಿಗೂ ಅಲೆಮಾರಿಗಳನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳೂ ಇಲ್ಲವಾಗಿದೆ. ಇಂಥ ಬಡಪಾಯಿಗಳ ಬದುಕನ್ನು ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ‌ ಪ್ರಬಲ ಕೋಮುಗಳೊಂದಿಗೆ ಸೇರಿಸಿ, ಅನ್ಯಾಯ ಮಾಡಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.
Read also : ನಾಗರಿಕಾ ಸೇವಾ ವಲಯ ,ನಾಗರಿಕ ಸಮಾಜದ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ
 ಆಯೋಗದ ವರದಿಯಲ್ಲಿ ಅಲೆಮಾರಿಗಳನ್ನು ಗ್ರೂಪ್ ‘ಎ’ ಗೆ ಸೇರಿಸಿ ಶೇ 1 ರಷ್ಡು ಮೀಸಲಾತಿ ನೀಡಲಾಗಿದ್ದರೂ ಒತ್ಡಡಗಳಿಗೆ ಮಣಿದು, ಲಂಬಾಣಿ, ಬೋವಿ‌ ಜನಾಂಗಗಳೊಂದಿಗೆ ಸೇರಿಸಿದ್ದಾರೆ. ಕೆಲ ಸಚಿವರ, ಸ್ವಾಮೀಜಿಗಳ, ಪ್ರಭಾವಿಗಳ, ಅಧಿಕಾರಿಗಳ ಷಡ್ಯಂತ್ರವೇ ಅಲೆಮಾರಿಗಳಿಗೆ ಅನ್ಯಾಯವಾಗಲು ಕಾರಣವಾಗಿದ್ದು, ಇದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಾಗುವುದು. ಮೀಸಲಾತಿಯಲ್ಲಿನ ಅನ್ಯಾಯದ ವಿರುದ್ಧ ಅ.2ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ನಾಗರಿಕಾ ಸೇವಾ ವಲಯ ,ನಾಗರಿಕ ಸಮಾಜದ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere ಶೋಭಾಯಾತ್ರೆಗೆ ಭರ್ಜರಿ ಸಿದ್ಧತೆ :ನವರಾತ್ರಿ ಸಡಗರ, ಸಂಭ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭದ್ರಾ ಜಲಾಶಯದಲ್ಲಿ 170 ಅಡಿ ನೀರು ಸಂಗ್ರಹ : ಭದ್ರೆ ತುಂಬಲು ದಿನಗಣನೆ

Bhadra dam water level today : ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚಾಗಿದ್ದು, ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ…

By Dinamaana Kannada News

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

ಕಳ್ಳತನ ಪ್ರಕರಣ | 10.32 ಲಕ್ಷ ಮೌಲ್ಯದ ಸ್ವತ್ತು ವಶ : ಆರೋಪಿಗಳ ಸೆರೆ

ದಾವಣಗೆರೆ (Davanagere): ಮನೆ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿ 10.32 ಲಕ್ಷ ರೂ. ಮೌಲ್ಯದ ಸ್ವತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?