Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: March 8, 2025 11:59 am
Dinamaana Kannada News
Share
basavanthappa k s
basavanthappa k s
SHARE

ದಾವಣಗೆರೆ (Davanagere) : ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದು, ಸಮಾಜದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಮತ್ತಿ ಗ್ರಾಮದಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆ ಹಾಗೂ ಮತ್ತಿ ಗ್ರಾಪಂ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ನೂತನ 556 ನೇ ಶುದ್ಧಗಂಗಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಲ್ಲದ ಕ್ಷೇತ್ರವೇ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಕಾಲಿರಿಸಿ ಗಣನೀಯವಾದ ಸಾಧನೆಯನ್ನು ಮಾಡಿದ್ದಾರೆ. ಇಂದು ಪುರುಷರಿಗಿಂತ ಮಹಿಳೆಯರೇನೂ ಕಡಿಮೆಯಿಲ್ಲ ಎಂಬ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಈ ಹಿಂದೆ ನಾಲ್ಕು ಗೋಡೆಗಳ ಮಧ್ಯೆ ಅಡಿಗೆ ಮನೆಗೆ ಸೀಮಿತವಾಗಿದ್ದ ಮಹಿಳೆ ಇಂದು ತನ್ನ ಜ್ಞಾನವನ್ನು ಬೆಳೆಸಿಕೊಂಡು ಸಮಾಜದ ಎಲ್ಲಾ ರಂಗಗಳಲ್ಲೂ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡುತ್ತಿದ್ದಾಳೆ ಎಂದು ಹೇಳಿದರು.

ನೀರಿನ ಬವಣೆ ಆಗದಂತೆ ಎಚ್ಷರಿಕೆ ವಹಿಸಿ :

ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಬವಣೆ ತಪ್ಪಿಲ್ಲ. ಇದು ಬೇಸಿಗೆ ಕಾಲದಲ್ಲಿ ಈ ಸಮಸ್ಯೆ ಹೆಚ್ಚಾಗುತ್ತದೆ. ಮುಂಜಾಗ್ರತೆ ವಹಿಸಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮೀಣ ಪ್ರದೇಶದ ಜನರು ಆರೋಗ್ಯವಂತರಾಗಿರಬೇಕು ಎಂಬ ಒಳ್ಳೆಯ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ಗ್ರಾಮಸ್ಥರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಒಂದು ಹಳ್ಳಿ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿನ ಜನರಿಗೆ ಶುದ್ಧ ಕುಡಿಯವ ನೀರು, ಆರೋಗ್ಯ ಸೇವೆ ಮುಖ್ಯವಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾಗಿದ್ದು, ಸಮಾಜದವಸ್ತರಗಳನ್ನು ಒಳಗೊಂಡಿದೆ. ವಿಶೇಷವಾಗಿ ಮಹಿಳೆ, ಮಕ್ಕಳು, ಶಿಕ್ಷಣ, ಕೃಷಿ, ನೀರಾವರಿ, ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳಿಗೂ ಆದ್ಯತೆ ನೀಡಿದ್ದಾರೆ. ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಮುಂದುವರಿಸಿದ್ದಾರೆ. ಪಂಚ ಗ್ಯಾರಂಟಿ ನಿಲ್ಲಿಸುತ್ತಾರೆ ಎಂಬ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮಿ ಹಣ ಪಾವತಿಸಲು ಸ್ವಲ್ಪ ತಡವಾಗಿರಬಹುದು. ವಿಳಂಬವಾದ ಎಲ್ಲಾ ಕಂತಿನ ಹಣವನ್ನು ಮಹಿಳೆಯರ ಖಾತೆ ಜಮಾ ಮಾಡಲಾಗುತ್ತದೆ. ನೀವು ಯಾರೂ ಗೊಂದಲಕ್ಕೆ ಒಳಗಾಗಬೇಡಿ ಎಂದರು.

Read also : Davanagere | ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿ : ತ್ಯಾಗೀಶ್ವರಾನಂದಜೀ ಮಹಾರಾಜ್

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ನೀಲಕಂಠಪ್ಪ, ಉಪಾಧ್ಯಕ್ಷೆ ಕಮಲಮ್ಮ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ನಿರ್ದೇಶಕ ಲಕ್ಷ್ಮಣ, ಪಿಡಿಒ ಕೆ.ಸಿ.ವನಿತಾಬಾಯಿ, ಗ್ರಾಪಂ ಸದಸ್ಯರಾದ ಸತೀಶ್, ಕೆ.ಬಿಮಂಜುನಾಥ್, ಮಂಜುಳ ಸುರೇಶ್, ಶಿಲ್ಪ ಟಿ.ಆರ್.ಹನುಮಂತಪ್ಪ, ಗ್ರಾಮದ ಮುಖಂಡ ಹನುಮಂತಪ್ಪ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಗುತ್ತಿಗೆದಾರರ ವಿರುದ್ಧ ಅಸಮಾಧಾನ…

ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕೆಗಳನ್ನು ಗುತ್ತಿಗೆದಾರರು ಸರಿಯಾಗಿ ನಿರ್ವಹಿಸುತ್ತಿಲ್ಲ. ನಿರ್ವಹಣೆ ಇಲ್ಲದೆ ಘಟಕಗಳು ಸ್ಥಗಿತಗೊಳ್ಳುತ್ತಿವೆ. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿರಬಹುದು ಎಂಬ ದೂರುಗಳು ಬರುತ್ತಿವೆ. ಒಂದು ವೇಳೆ ಶಾಮೀಲಾಗಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಒದಗಿಸುವುದು

ಅಧಿಕಾರಿಗಳ ಜವಾಬ್ದಾರಿ. ನೀರಿನ ಘಟಕಗಳ ನಿರ್ವಹಣೆ ಗುತ್ತಿಗೆದಾರರಿಗೆ ವಹಿಸದೆ ಗ್ರಾಪಂಗಳಿಗೆ ವಹಿಸಬೇಕು. ಆಗ ಘಟಕಗಳು ಸರಿಯಾಗಿ ನಿರ್ವಹಣೆ ಆಗುತ್ತದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮೇಲಾಧಿಕಾರಿಗಳಿಗೆ ಸೂಚಿಸುವುದಾಗಿ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು.

TAGGED:Davanagere districtDavanagere NewsDinamana.comInternational Women's DayMLA K.S. Basavanthappaಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Eeshwaramma Higher Primary High School Davanagere Davanagere | ತಂದೆ-ತಾಯಿಗಳೇ ಮಕ್ಕಳಿಗೆ ಮಾದರಿ : ತ್ಯಾಗೀಶ್ವರಾನಂದಜೀ ಮಹಾರಾಜ್
Next Article ಬಾಪೂಜಿ ವಿದ್ಯಾಸಂಸ್ಥೆ Davanagere | ಮಿಸ್ ಪಾರ್ವತಿ ಕಾರ್ಯಕ್ರಮ; ಸಂಸದರಿಂದ ಪೋಸ್ಟರ್ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

‘ಸಪ್ದರ್ ಜೀವಿಸಿದ್ದರೆ’ ಪ್ಯಾಸಿಸಂ ವಿರುದ್ದ ಬೀದಿಯಲ್ಲಿರುತ್ತಿದ್ದರು..

'ಸಪ್ದರ್ ಹಷ್ಟೀ ಸ್ವತಃ ಕಲಾವಿದ ಹಾಗೂ ಪತ್ರಕರ್ತರಾಗಿದ್ದವರು. ಅವರದ್ದು ಕೇವಲ 34 ವರ್ಷಗಳ ಕಿರಿಯ ಕ್ರಾಂತಿಕಾರಿ ಬದುಕು. ಆದರೆ ಆ…

By Dinamaana Kannada News

LG Havanur | ದಕ್ಷಿಣ ಆಫ್ರಿಕಾದ ಸಂವಿಧಾನ ರಚನಾ ಸಲಹಾ ಸಮಿತಿಯಲ್ಲಿ ಹಾವನೂರು

Kannada News | Dinamaana.com |29 -08-2024 ಹಿಂದುಳಿದ ವರ್ಗಗಳ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಎಲ್.ಜಿ.ಹಾವನೂರರ ವೈಜ್ಞಾನಿಕ ವರದಿಯು ದೇಶದ…

By Dinamaana Kannada News

ಶಿಕ್ಷಣ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜೂನ್.10 :  ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ದಾವಣಗೆರೆ ಜಿಲ್ಲಾ…

By Dinamaana Kannada News

You Might Also Like

baby girl
ತಾಜಾ ಸುದ್ದಿ

ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?