Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > JJM Medical College : ಗ್ರಾಮೀಣ ವೈದ್ಯರ ಸೇವೆ ಎಲ್ಲರಿಗೂ ಸ್ಪೂರ್ತಿ : ಡಾ. ಸಂಪನ್ನ ಮುತಾಲಿಕ್  
ತಾಜಾ ಸುದ್ದಿ

JJM Medical College : ಗ್ರಾಮೀಣ ವೈದ್ಯರ ಸೇವೆ ಎಲ್ಲರಿಗೂ ಸ್ಪೂರ್ತಿ : ಡಾ. ಸಂಪನ್ನ ಮುತಾಲಿಕ್  

Dinamaana Kannada News
Last updated: July 30, 2024 3:38 am
Dinamaana Kannada News
Share
Davangere
ಜೆ ಜೆ ಎಂ ಮೆಡಿಕಲ್ ಕಾಲೇಜಿನಲ್ಲಿ ದಾವಣಗೆರೆ
SHARE

ದಾವಣಗೆರೆ : ಗ್ರಾಮೀಣ ಪ್ರದೇಶಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರು ಎಲ್ಲಾ ವೈದ್ಯರಿಗೆ ಸ್ಪೂರ್ತಿದಾಯಕವಾಗಬೇಕು, ಇಂತಹ ಸಮಾಜಮುಖಿ ವೈದ್ಯರನ್ನು ಕರೆತಂದು ಈ ದಿನ ಸನ್ಮಾನಿಸುತ್ತಿರುವ ಮೆಡಿಕಲ್ ಕಾಲೇಜಿನ ಕಾಳಜಿ ಮೆಚ್ಚುವಂತದ್ದು  ಎಂದು ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕರಾದ ಡಾ. ಸಂಪನ್ನ ಮುತಾಲಿಕ್  ಹೇಳಿದರು.

ಜೆ ಜೆ ಎಂ ಮೆಡಿಕಲ್ ಕಾಲೇಜಿನ ಅಕಾಡೆಮಿಕ್ ಬಾಡಿ ಆಯೋಜಿಸಿದ್ದ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೀಮಿತ ಸೌಕರ್ಯಗಳ ಮಧ್ಯದಲ್ಲಿ ಎಷ್ಟು ಜೀವಗಳನ್ನು ಉಳಿಸಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯವನ್ನು ಕಾಪಾಡಲು ಶ್ರಮಿಸುತ್ತಿರುವ ವೈದ್ಯರಿಗೆ ಧನ್ಯವಾದ ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಎರಡು ಮೂರು ದಶಕಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮೂವರು ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಡಾ. ಚಂದ್ರಪ್ಪ ಅವರು ಸನ್ಮಾನವನ್ನು ಸ್ವೀಕರಿಸಿದ ಮಾತನಾಡಿ,  ತಮ್ಮ ವಿದ್ಯಾಭ್ಯಾಸದಲ್ಲಿ ಸಾಕಷ್ಟು ಏರುಪೇರುಗಳು ಇದ್ದರೂ ವೈದ್ಯನಾಗಬೇಕು ಎಂಬ ಛಲದಿಂದ ಉತ್ತಮ ಅಂಕ ಪಡೆದು ಸಿಇಟಿಯಲ್ಲಿ ಉತ್ತಮ ರಾಂಕ್ ನೊಂದಿಗೆ ಈ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದೆ. ಇಂದು ಅದೇ ಕಾಲೇಜಿನಲ್ಲಿ ನನ್ನನ್ನು ಗುರುತಿಸಿ ಸನ್ಮಾನಿಸುತ್ತಿರುವುದಕ್ಕೆ ಅತ್ಯಂತ ಸಂತೋಷವಾಗಿದೆ ಎಂದರು.

ಡಾ. ಮಂಜುನಾಥ್ ಕೆ ಎಂ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ,  ವೈದ್ಯರಿಗೆ ಸಂವಹನ ಕೌಶಲ್ಯ ಅತಿ ಮುಖ್ಯ ಇದರಿಂದ ರೋಗಿಯ ಮನಸ್ಸನ್ನು ಗೆದ್ದು ಅವರು ಬೇಗ ಗುಣಮುಖರಾಗುವಂತೆ ಮಾಡಬಹುದು, ಔಷಧಿಯ ಜೊತೆಗೆ ನಮ್ಮ ಒಳ್ಳೆಯ ಮಾತುಗಳು ರೋಗಿಯನ್ನು ಬೇಗ ಗುಣಮುಖವಾಗುವಂತೆ ಮಾಡುತ್ತದೆ. ಇದನ್ನು ಪ್ರತಿಯೊಬ್ಬ ವೈದ್ಯರು ಅಳವಡಿಸಿಕೊಳ್ಳಬೇಕು ಎಂದರು.

ಡಾ. ಷಣ್ಮುಖಪ್ಪ  ಮಾತನಾಡಿ,  ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಸೌಕರ್ಯಗಳಿಲ್ಲದಿದ್ದರೂ ಸಮಯ ಪ್ರಜ್ಞೆಯಿಂದ ನಾವು ಸಾಕಷ್ಟು ಜೀವಗಳನ್ನು ಅನುಭವದಿಂದ ಉಳಿಸಬಹುದು, ನಮ್ಮ ಕೈ ಮೀರಿದ ಸಮಸ್ಯೆಗಳಿಗೆ ಹೆಚ್ಚು ಸಮಯ ವ್ಯರ್ಥ ಮಾಡದೆ ಸೂಕ್ತ ಕ್ರಮಕ್ಕೆ ಅನುವು ಮಾಡಿಕೊಟ್ಟು ಸಾಕಷ್ಟು ರೋಗಿಗಳನ್ನು ನಾವು ಬದುಕಿಸಿದ್ದೇವೆ. ಅಂತಹ ಸಮಯಪ್ರಜ್ಞೆ ವೈದ್ಯರಿಗೆ ಅಗತ್ಯ ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಕ್ಲ ಶೆಟ್ಟಿ ಅವರು ಸ್ವಾಗತಿಸಿದರು ಡಾಕ್ಟರ್ ಸಂತೋಷ್ ಅವರು ಎಲ್ಲರನ್ನು ವಂದಿಸಿದರು ವೇದಿಕೆಯ ಮೇಲೆ ಡಾ. ನಾಗಮಣಿ ಅಗರ್ವಾಲ್ ಉಪಸ್ಥಿತರಿದ್ದರು ಡಾಕ್ಟರ್ ಛಾಯಾ ಹಾಗೂ ಡಾ. ನೀತಿ ಕಾರ್ಯಕ್ರಮವನ್ನು ನಿರೂಪಿಸಿದರು

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಬಂಜಾರ ಭಾಷೆ (Banjara language) ಸಂವಿಧಾನದ ಷೆಡ್ಯೂಲ್‌ನಲ್ಲಿ ಸೇರಿಸಲು ಸಂಘಟಿತರಾಗಬೇಕು : ಎನ್.ಅನಂತನಾಯ್ಕ
Next Article davanagere ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಿನಮಾನ ಹೆಮ್ಮೆ : ಭಾವೈಕ್ಯದ ಅನನ್ಯ ಬಂಧು- ಎಲ್.ಖಾದರ್ ಬಾಷಾ

Kannada News | Dinamaanada Hemme  | Dinamaana.com | 14-07-2024 ಪಿಂಜಾರ ಬೀದಿಯ ಪೀರ್ ಬಾಷಾ ಮತ್ತು ಬಿಚ್ಚುಗತ್ತಿ…

By Dinamaana Kannada News

ವಸತಿ ಶಾಲೆಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಕ್ಕೆ ಅಹ್ವಾನ

ದಾವಣಗೆರೆ ಜುಲೈ.10 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ…

By Dinamaana Kannada News

Harihara | ಪ. ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ ನಡೆಸಲು ದಸಂಸ ಆಗ್ರಹ

ಹರಿಹರ (Harihara) : ಪ.ಜಾತಿ ಮತ್ತು ಪ.ಪಂಗಡದ ಹರಿಹರ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆ ನಡೆಸಲು ಕರ್ನಾಟಕದಲಿತ ಸಂಘರ್ಷ ಸಮಿತಿಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?