Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ
ತಾಜಾ ಸುದ್ದಿ

90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ

Dinamaana Kannada News
Last updated: August 6, 2025 11:21 am
Dinamaana Kannada News
Share
Justice Mahaveer Karennavar
SHARE

ದಾವಣಗೆರೆ : ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಇಡೀ ದೇಶದಾದ್ಯಂತ 90 ದಿನಗಳ ಕಾಲ ಮಧ್ಯಸ್ಥಗಾರಿಕೆ ಅಭಿಯಾನವನ್ನು ಆಯೋಜಿಸಲಾಗಿದೆ. ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಕರೆಣ್ಣವರ್‌ ತಿಳಿಸಿದ್ದಾರೆ.

ಈ ಮಧ್ಯಸ್ಥಗಾರಿಕೆ  ಅಭಿಯಾನ 1.7.2025 ರಿಂದ ಸೆಪ್ಟೆಂಬರ್‌ ಅಭಿಯಾನದಲ್ಲಿ ಎಲ್ಲ ಪ್ರಕರಣಗಳನ್ನು  ರಾಜಿ ಮೂಲಕ ಇತ್ಯರ್ಥಪಡಿಸುವಂತ ಮಹತ್ವದ ಇಚ್ಛೆಯನ್ನ ಮತ್ತು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಒಂದು ಅಭಿಯಾನದಲ್ಲಿ ನುರಿತ ವಕೀಲರುಗಳು ಮತ್ತೆ ನ್ಯಾಯಾಧೀಶರು ಎಲ್ಲರೂ ಭಾಗವಹಿಸಿ ಪಕ್ಷಗಾರರಿಗೆ ಸಂಧಾನಕಾರರಾಗಿ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಸಂಧಾನದಲ್ಲಿ ಭಾಗವಹಿಸುವ ವ್ಯಕ್ತಿಗಳು ಕನಿಷ್ಠ 10 ವರ್ಷ ವಕೀಲ ವೃತ್ತಿ ಮಾಡಿದವರು ಸಂಧಾನಕಾರರಾಗಿ ನೇಮಕವಾಗಿರುತ್ತಾರೆ. ಸಂಧಾನ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಕೂಡ ಭಾಗವಹಿಸಲಿದ್ದಾರೆ. ಎಲ್ಲ ಸೇರ್ಕೊಂಡು ಜನರಿಗೆ ಅವರ ಪ್ರಕರಣಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಕೊಡಲಿದ್ದಾರೆ.

ಪ್ರಕರಣಗಳ ಸಂಧಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ವಿಶೇಷ ಕೊಠಡಿಗಳನ್ನು ಮತ್ತು ಆಸನ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಪಕ್ಷಗಾರರು ಭೌತಿಕವಾಗಿ ಸಂದಾನಕ್ಕೆ ಹಾಜರಾಗಲು ಸಾಧ್ಯವಾಗದಿದ್ದರೆ ವಿಡಿಯೋ ಮೂಲಕ ಹಾಜರಾಗಲು ಕೂಡ ಅವಕಾಶ ಕಲ್ಪಿಸಲಾಗಿದೆ.

ಸಂಧಾನ ಪ್ರಕ್ರಿಯೆಗೆ ಯಾವುದೇ ಪಕ್ಷಕಾರರು ಯಾವುದೇ ಕಾರಣಕ್ಕೂ ಕೂಡ ಹಣವನ್ನು ಖರ್ಚು ಮಾಡುವುದು ಅವಶ್ಯಕತೆ ಇರುವುದಿಲ್ಲ. ಈ ಅಭಿಯಾನಕ್ಕೆ ಅಗತ್ಯವಿರುವ ಎಲ್ಲಾ ಖರ್ಚು ವೆಚ್ಚಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೇ ಭರಿಸಲಾಗುತ್ತದೆ.

Read also : Leopard attack |ಚಿರತೆ ದಾಳಿ: 27 ಕುರಿ ಸಾವು

ಯಾವುದೇ ಕಾರಣಕ್ಕೂ ಬಲವಂತ ಅಥವಾ ಅವರ ಇಚ್ಛೇಗೆ ವಿರುದ್ಧವಾಗಿ ಯಾವುದೇ ಪ್ರಕ್ರಿಯೆಗಳು ಇಲ್ಲಿ ನಡೆಯುವುದಿಲ್ಲ. ಈ ಸಂದರ್ಭದಲ್ಲಿ ಅತ್ಯಂತ ಜನಸ್ನೇಹಿ ಮತ್ತು ಅವರಿಗೆ ಅನುಕೂಲವಾಗುವಂತ ವಾತಾವರಣ ನಿರ್ಮಿಸಿ ಮನವರಿಕೆ ಮಾಡಿಕೊಡುವಂತ ಒಂದು ಪ್ರಕ್ರಿಯೆ ಇದಾಗಿದೆ. ಹೆಚ್ಚಿನ ಜನರು ಈ ಒಂದು ಅಭಿಯಾನ ಅಂದ್ರೆ ಮಧ್ಯಸ್ಥಗಾರಿಕಾ ಅಭಿಯಾನದ ಉಪಯೋಗ ಪಡೆದುಕೊಂಡು ನ್ಯಾಯಾಲಯದಲ್ಲಿರುವ ಪ್ರಕರಣಗಳ ಭಾರ ಕೂಡ ಕಡಿಮೆ ಮಾಡಿ ತಮ್ಮ ಜೀವನ ಉತ್ತ ಮ ಮಾಡಿಕೊಳ್ಳಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davanagere NewsDinamana.comJustice Mahaveer Karennavarದಾವಣಗೆರೆ ಜಿಲ್ಲೆ .ದಿನಮಾನ.ಕಾಂನ್ಯಾ. ಮಹಾವೀರ ಕರೆಣ್ಣವರ್
Share This Article
Twitter Email Copy Link Print
Previous Article Leopard attack: 20 sheep killed Leopard attack |ಚಿರತೆ ದಾಳಿ: 27 ಕುರಿ ಸಾವು
Next Article yava nidi programe davanagere ಯುವನಿಧಿ ಯೋಜನೆ ಯುವಕರಿಗೆ ಸಹಕಾರಿ : ಶಾಮನೂರು ಟಿ. ಬಸವರಾಜ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ

"ಫುಲ್ ಮೀಲ್ಸ್" ಚಿತ್ರದ (Kannada cinema) ಮೋಷನ್ ಪೋಸ್ಟರ್ ಬಿಡುಗಡೆ  ಸಮಾರಂಭ ನಡೆಯಿತು. "ಸಂಕಷ್ಟಕರ ಗಣಪತಿ", "ಫ್ಯಾಮಿಲಿ ಪ್ಯಾಕ್", "ಅಬ್ಬಬ್ಬ" ಚಿತ್ರಗಳ…

By Dinamaana Kannada News

ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಶಿಕ್ಷಣ ಪ್ರೇಮಿಗಳು ಕೊಡುಗೆ ನೀಡುವುದರಿಂದ ಶೈಕ್ಷಣಿಕವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ಪ್ರಗತಿ ಸಾಧಿಸಲು ಸಹಾಯಕವಾಗುತ್ತದೆ ಎಂದು ಶಾಸಕ…

By Dinamaana Kannada News

“ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..

ಬೆಂಗಳೂರು :  ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್  "ಮೊನಾಲಿಸ" ಚಿತ್ರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?