Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನ್ಯಾ.ಶಿವರಾಜ ಪಾಟೀಲ ಸಮಾಜದ ಊರುಗೋಲು : ತರಳಬಾಳು ಶ್ರೀಗಳು
ತಾಜಾ ಸುದ್ದಿ

ನ್ಯಾ.ಶಿವರಾಜ ಪಾಟೀಲ ಸಮಾಜದ ಊರುಗೋಲು : ತರಳಬಾಳು ಶ್ರೀಗಳು

Dinamaana Kannada News
Last updated: August 24, 2025 3:31 am
Dinamaana Kannada News
Share
Taralabalu Shri
SHARE

ದಾವಣಗೆರೆ: ಕಾನೂನಿನ ಚೌಕಟ್ಟಿನೊಳಗೆ ಮಾನವೀಯ ನೆಲೆಗಟ್ಟಿನ  ಆಧಾರದ ಮೇಲೆ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಹಾಗೂ ತಮ್ಮ ಸಾಹಿತ್ಯದ ಮೂಲಕ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಶ್ರಮಿಸಿರುವ ನ್ಯಾಯಮೂರ್ತಿ ಶಿವರಾಜ ವಿ ಪಾಟೀಲ ಸಮಾಜಕ್ಕೆ ಊರುಗೋಲಾಗಿದ್ದಾರೆ   ಎಂದು ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಬೆಂಗಳೂರಿನ ತರಳಬಾಳು ಕೇಂದ್ರದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 2025 ರ ಸಾಲಿನ “ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ” ರಾಜ್ಯ ಪ್ರಶಸ್ತಿಯನ್ನು ನ್ಯಾ.ಶಿವರಾಜ ವಿ ಪಾಟೀಲರಿಗೆ ಪ್ರದಾನ ಸಮಾರಂಭದ  ಸಾನಿಧ್ಯ ವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಸಂದೇಶ ನೀಡಿದರು.

ಜನಿಸಿದ ಕುಗ್ರಾಮದಿಂದ ದೇಶದ ಸರ್ವೋಚ್ಚ ನ್ಯಾಯಾಲಯದ ತನಕ ಅವರು ತಲುಪಿದ ಹಾದಿಯಲ್ಲಿ ಅವರು ಏರಿದ ಒಂದೊಂದು ಮೆಟ್ಟಿಲುಗಳು ಅವರ ಯಶೋಗಾಥೆಯನ್ನು ಪ್ರತಿಬಿಂಬಿಸುತ್ತವೆ. ಕಡು ಬಡತನ, ಕುಗ್ರಾಮದ ಪರಿಸರವನ್ನು ಮೆಟ್ಟಿ ನಿಂತು ಅವರು ತೋರಿದ ಅಸಾಮಾನ್ಯ ಸಾಧನೆ ಎಲ್ಲರಿಗೂ ಆದರ್ಶಪ್ರಾಯವಾಗಿವೆ ಎಂದರು.

ನ್ಯಾ.ಶಿವರಾಜ ವಿ ಪಾಟೀಲ ಮಾತನಾಡಿ,  ಬಡತನವು ಶಾಪವಲ್ಲ ಬದಲಾಗಿ ಅದೊಂದು ವರ. ಶರಣ ಮಾಗನೂರು ಬಸಪ್ಪ ಹಾಗೂ ನನ್ನ ಜೀವನಕ್ಕೂ ಹಲವಾರು ಸಾಮ್ಯತೆಗಳಿವೆ. ಸಾಧನೆ ಮಾಡುವ ಛಲವಿದ್ದಾಗ ಮಾತ್ರ ಯಾವುದೇ ಸಮಸ್ಯೆಯನ್ನು ಎದುರಿಸಲು ಆತ್ಮವಿಶ್ವಾಸ ಬರುತ್ತದೆ. ಪರಿಶ್ರಮ, ಪ್ರಾಮಾಣಿಕತೆ, ವಿನಯ, ಛಲ, ಶಿಸ್ತು, ಮಾನವೀಯತೆ, ಅನುಕಂಪಗಳೇ ನನ್ನ ಜೀವನದ ಯಶಸ್ಸಿಗೆ ಕಾರಣವಾದ ಮೂಲಮಂತ್ರಗಳಾಗಿವೆ ಎಂದರು.

20 ನೇ ಶತಮಾನದ ಶ್ರೇಷ್ಠ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಶರಣ ಮಾಗನೂರು ಬಸಪ್ಪ ಹೆಸರಿನ ಪ್ರಶಸ್ತಿಯು ನನ್ನ ಸಾಮಾಜಿಕ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು. ಪ್ರಶಸ್ತಿಯೊಂದಿಗೆ ನೀಡಿದ ರೂ.50000/- ವನ್ನು ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ದಾಸೋಹ ನಿಧಿಗೆ ಕಾಣಿಕೆಯಾಗಿ ನೀಡುವುದಾಗಿ ಘೋಷಿಸಿದರು.

ಅಧ್ಯಕ್ಷತೆ  ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ಅಧ್ಯಕ್ಷ ಸಂಗಮೇಶ್ವರ ಗೌಡರು ವಹಿಸಿದ್ದರು. ಪ್ರಾಸ್ತಾವಿಕವಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿದರು.

ಶರಣ ಮಾಗನೂರು ಬಸಪ್ಪ ಅವರ ಜೀವನ ಮತ್ತು ಸಾಧನೆಯ ಕುರಿತಾಗಿ ಡಾ.ಹೆಚ್.ಎಸ್.ಮಂಜುನಾಥ ಕುರ್ಕಿ ಉಪನ್ಯಾಸ ನೀಡಿದರು.

Read also : ಒಳ ಮೀಸಲಾತಿ|ಲಾಭ ಪಡೆದುಕೊಳ್ಳಲು ಜ್ಞಾನದ ಗ್ರಹಿಕೆಯ ಶಕ್ತಿ ಬೆಳೆಸುವುದು ಮುಖ್ಯ

ನ್ಯಾ. ಶಿವರಾಜ ಪಾಟೀಲರನ್ನು ಅಭಿನಂದಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಪ್ರೊ.ಎ.ಮುರಿಗೆಪ್ಪನವರು ಮಾತಾಡಿದರು. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ.‌ರಾಘವೇಂದ್ರ ನಾಯರಿ ನ್ಯಾ. ಶಿವರಾಜ ಪಾಟೀಲರಿಗೆ ಅರ್ಪಿಸಿದ ಅಭಿನಂದನಾ ಪತ್ರವನ್ನು ವಾಚಿಸಿದರು. ಸಮಾರಂಭದ ವೇದಿಕೆಯಲ್ಲಿ ಎಂ.ಎಸ್.ಸುನಂದಾ ದೇವಿ, ಅನ್ನಪೂರ್ಣ ಶಿವರಾಜ ಪಾಟೀಲ ಇದ್ದರು.

ನ್ಯಾಯಾಧೀಶರುಗಳು, ನ್ಯಾಯವಾದಿಗಳು, ಈ ಹಿಂದೆ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಗೆ ಭಾಜನರಾಗಿದ್ದ ಡಾ.ಬಿ.ಟಿ.ಲಲಿತಾ ನಾಯಕ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಡಾ.ಅಮರೇಶ್ ಯತ್ಗಲ್, ವಿಶ್ರಾಂತ ಪೋಲಿಸ್ ಅಧಿಕಾರಿ ಶಂಕರ ಬಿದರಿ, ಮಾಗನೂರು ಚಂದ್ರಶೇಖರ ಗೌಡರು, ಮಾಗನೂರು ಪ್ರಭುದೇವ್, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಬಿ.ದಿಳ್ಯಪ್ಪ, , ರೇವಣಸಿದ್ದಪ್ಪ ಅಂಗಡಿ, ಜಿಗಳಿ ಪ್ರಕಾಶ್,  ಸುಮತಿ ಜಯಪ್ಪ, ಡಿ.ಎಂ.ಮಂಜುನಾಥಯ್ಯ,  ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ನ ಎಸ್.ಆರ್.ಶಿರಗುಂಬಿ, ಪ್ರಾಂಶುಪಾಲೆ  ಎ.ಎಸ್‌.ಕುಸುಮ, ಮಾಗನೂರು ಬಸಪ್ಪ ಪಬ್ಲಿಕ್ ಸ್ಕೂಲಿನ ಶಿಕ್ಷಕರು, ಸಿಬ್ಬಂದಿವರ್ಗದವರು, ನ್ಯಾಯಮೂರ್ತಿ ಶಿವರಾಜ ಪಾಟೀಲರ ಅಭಿಮಾನಿ ವರ್ಗದವರು, ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಶಿಷ್ಯವರ್ಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

TAGGED:Davanagere NewsDinamana.comKannada NewsTaralabalu Shriಕನ್ನಡ ಸುದ್ದಿತರಳಬಾಳು ಶ್ರೀಗಳುದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಒಳ ಮೀಸಲಾತಿ|ಲಾಭ ಪಡೆದುಕೊಳ್ಳಲು ಜ್ಞಾನದ ಗ್ರಹಿಕೆಯ ಶಕ್ತಿ ಬೆಳೆಸುವುದು ಮುಖ್ಯ
Next Article Davanagere ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ

ದಾವಣಗೆರೆ (Davangere District) : ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ಸೆ.14 ರಂದು ಬೆಂಗಳೂರಿನ…

By Dinamaana Kannada News

ಜೂ.13 ರಂದು ಕರೆಂಟ್‌ ಇರಲ್ಲ

ದಾವಣಗೆರೆ ಜೂ.12 : ಕುಕ್ಕವಾಡ, ಶ್ಯಾಗಲೆ, ಆನಗೋಡು, ಅತ್ತೀಗೆರೆ ಮತ್ತು ಮಾಯಕೊಂಡ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

ಎಸ್‌.ಎಸ್ ಕೇರ್ ಟ್ರಸ್ಟ್ ಆರೋಗ್ಯ ಸೇವೆಯಿಂದ ಜನರ ಜೀವನದಲ್ಲಿ ಆಶಾಕಿರಣ : ಸಂಸದೆ ಡಾ.ಪ್ರಭಾ

ದಾವಣಗೆರೆ : ಎಸ್‌.ಎಸ್ ಕೇರ್ ಟ್ರಸ್ಟ್ ಆರೋಗ್ಯ ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಜೀವನದಲ್ಲಿ ಆಶಾಕಿರಣವಾಗಿದೆ ಸಂಸದೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?