Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ
ತಾಜಾ ಸುದ್ದಿ

Davanagere | ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ

Dinamaana Kannada News
Last updated: November 21, 2024 1:21 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ನ.21 (Davanagere) :  ನವಂಬರ್ 24 ರಂದು ನಗರದ 17 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತಿರುವ ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.

ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆ-ಸೆಟ್-2024 ಪರೀಕ್ಷೆಗೆ ಸಂಬಂಧಿಸಿದ ಪರಿವೀಕ್ಷಕರು, ಮಾರ್ಗಾಧಿಕಾರಿಗಳು ಮತ್ತು ವೀಕ್ಷಕರುಗಳಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಆಯೋಗದ ನಿರ್ದೇಶನಗಳನ್ನು ಪಾಲಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಚತೆ, ಆಸನ ವ್ಯವಸ್ಥೆ, ಬಂದೋಬಸ್ತ್ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ನ.24 ರಂದು 17 ಪರೀಕ್ಷಾ ಕೇಂದ್ರಗಳಲ್ಲಿ 7275 ಅಭ್ಯರ್ಥಿಗಳು, ಪರೀಕ್ಷೆ ಬರೆಯಲಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2 ಪರೀಕ್ಷೆಯು ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಈ ಎರಡು ಪತ್ರಿಕೆಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ನಿಯೋಜಿತ ಸಿಬ್ಬಂದಿಗಳು ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸುವಾಗ, ಪರೀಕ್ಷೆ ಮುಗಿದು ಬಂಡಲ್ ಮಾಡುವಾಗ ಜಾಗರೂಕತೆಯಿಂದ ಕಾಳಜಿ ವಹಿಸಬೇಕು.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ ಗಳನ್ನು ಅನುಮತಿ ಇರುವುದಿಲ್ಲ. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ ಗಳನ್ನು ಧರಿಸುವುದು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ ,ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.

ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೇಟ್, ಪಾಕೇಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸಬಾರದು.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ:  ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್ ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವ ಆಗಿಲ್ಲ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ,ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಆಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯ. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸಬಾರದು. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಪೋನ್‍ಗಳು, ಪೆನ್ ಡ್ರೈವ್‍ಗಳು, ಇಯರ್ ಪೋನ್‍ಗಳು, ಮೈಕ್ರೋಪೋನ್ ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.

ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸಿಬಾರದು.

ಯಾವುದೇ ರೀತಿಯ ಮಾಸ್ಕನ್ನು ಧರಿಸುವಂತಿಲ್ಲ. ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಪೆÇಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಮೇಲಿನ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು.

ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಡಿಡಿಪಿಯು ಕರಿಸಿದ್ದಪ್ಪ, ಡಿಡಿಪಿಐ ಕೊಟ್ರೇಶ್.ಜಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಜರಿದ್ದರು.

Read also : Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ
Next Article Davangere Harihara | ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ : ಲೂಸಿ ಸಾಲ್ಡಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ವಿದ್ಯಾರ್ಥಿಗೆ ಓದು ಜೀವನದ ಗುರಿಯಾಗಬೇಕು : ಮಹಾವೀರ ಮ. ಕರೆಣ್ಣವರ್  

ದಾವಣಗೆರೆ (Davanagere): ವಿದ್ಯಾರ್ಥಿ ಜೀವನದಲ್ಲಿ ಓದು ಬಹು ಮುಖ್ಯ. ಓದು ಜೀವನದ ಗುರಿಯಾಗಿರಬೇಕು. ಭವಿಷ್ಯದ ಕಡೆ ಚಿತ್ತ ಇರಬೇಕು. ಆಗ…

By Dinamaana Kannada News

ಎಸ್‌ಡಿಪಿಐ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ

ದಾವಣಗೆರೆ (Davanagere): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಎಸ್ ಡಿ ಪಿ ಐ…

By Dinamaana Kannada News

ಹಾಳಾದ ರಸ್ತೆ, ವಿವಿಧ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ  

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಳಾದ ರಸ್ತೆಗಳ ಅಭಿವೃದ್ಧಿ ಮತ್ತು ಶಾಲೆ, ಕಾಲೇಜು, ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?