Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿಗೆ ಪ್ರಾತಃಸ್ಮರಣೀಯರು : ಕೆ.ರಾಘವೇಂದ್ರ ನಾಯರಿ
ತಾಜಾ ಸುದ್ದಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿಗೆ ಪ್ರಾತಃಸ್ಮರಣೀಯರು : ಕೆ.ರಾಘವೇಂದ್ರ ನಾಯರಿ

Dinamaana Kannada News
Last updated: June 5, 2024 3:32 am
Dinamaana Kannada News
Share
Kannada Sahitya Parishad Davanagere
ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ
SHARE

ದಾವಣಗೆರೆ : ಕನ್ನಡ  ನಾಡಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕೆಆರ್‌ಎಸ್ ಅಣೆಕಟ್ಟು, ವಾಣಿ ವಿಲಾಸ ಸಾಗರ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಬ್ಯಾಂಕ್, ಮೈಸೂರು ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ಮೆಡಿಕಲ್ ಕಾಲೇಜು,  ನಿಮ್ಹಾನ್ಸ್ ಆಸ್ಪತ್ರೆ, ಮಿಂಟೋ ಆಸ್ಪತ್ರೆ ಮೊದಲಾದ ಹಲವಾರು ಶಾಶ್ವತ ಯೋಜನೆಗಳನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಕನ್ನಡಿಗರಿಗೆ ಪ್ರಾತಃಸ್ಮರಣೀಯರು ಎಂದು ಕೆ.ರಾಘವೇಂದ್ರ ನಾಯರಿ ಅಭಿಪ್ರಾಯಪಟ್ಟರು.

ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ನಾಲ್ವಡಿ  ಕೃಷ್ಣರಾಜ ಒಡೆಯರ್ ಅವರ 140 ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಕೃಷ್ಣರಾಜ ಒಡೆಯರ್ ಅವರ ಕನ್ನಡ ನಾಡಿಗೆ ನೀಡಿದ ಕೊಡುಗೆಗಳ ಬಗ್ಗೆ ಉಪನ್ಯಾಸ ನೀಡಿದರ.

ಒಡೆಯರ್ ಆಡಳಿತಾವಧಿಯಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ಧಿಯನ್ನು ಮೈಸೂರು ರಾಜ್ಯವು ಕಂಡುದರಿಂದ ದೇಶದಾದ್ಯಂತ ಪ್ರಸಿದ್ಧಿಯನ್ನು ಪಡೆದಿತ್ತು. ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ, ಮೂಲಸೌಕರ್ಯ, ಕೈಗಾರಿಕೆ, ಆಡಳಿತ ಸುಧಾರಣೆ, ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಯನ್ನು ಒಡೆಯರ್ ಮಾಡಿದ್ದರು ಎಂದು ಕೆ ಹೇಳಿದರು‌.

ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ ,ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವ ಚಿಂತನೆಯ ಫಲವಾಗಿ 1915 ರಲ್ಲಿ  ಸ್ಥಾಪನೆಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಇಂದು 109 ವರ್ಷಗಳ ಭವ್ಯವಾದ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿದೆ. ಕನ್ನಡ ನಾಡು ನುಡಿಯ ಉನ್ನತಿಗಾಗಿ ವರ್ಷಪೂರ್ತಿ ಕೆಲಸ ಮಾಡುವ ಯಾವುದಾದರೂ ಸಂಸ್ಥೆ ಕನ್ನಡ ನಾಡಿನಲ್ಲಿ ಇದೆ ಅಂತಾದರೆ ಅದು ಕನ್ನಡ ಸಾಹಿತ್ಯ ಪರಿಷತ್ತು ಮಾತ್ರ ಎಂದರು.

ಕನ್ನಡ ನಾಡನ್ನು ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಸಂಪದ್ಭರಿತವಾಗಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಬಹು ದೊಡ್ಡದು. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.  ಇದಲ್ಲದೇ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಸಾಮಾಜಿಕ ಕಾನೂನುಗಳ ಹರಿಕಾರರಾಗಿದ್ದರು.   ದೇವದಾಸಿ ಪದ್ಧತಿ, ಬಸವಿ ಪದ್ಧತಿ, ವೇಶ್ಯಾ ವೃತ್ತಿ, ಗೆಜ್ಜೆ ಪೂಜೆ ಪದ್ಧತಿಯನ್ನು ನಿರ್ಮೂಲನೆ ಮಾಡಲು ಕಾನೂನನ್ನು ರೂಪಿಸಿದರು. ಅನೇಕ ಹೊಸ ರೈಲು ಮಾರ್ಗಗಳನ್ನು ಆರಂಭಿಸಿದರು ಎಂದು ಹೇಳಿದರು.

ಮಹಿಳಾ ಮೀಸಲಾತಿ, ಉಚಿತ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತಂದರು. ಹೀಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನ ಸ್ನೇಹಿ ಆಡಳಿತವನ್ನು ನಡೆಸಿದ್ದರಿಂದ ಅವರ ಆಡಳಿತಾವಧಿಯು ಸುವರ್ಣ ಯುಗವೆಂದು ಕರೆಯಬಹುದು ಎಂದು ವಾಮದೇವಪ್ಪರವರು ಬಣ್ಣಿಸಿದರು.

ಪರಿಷತ್ತಿ‌ನ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ರುದ್ರಾಕ್ಷಿ ಬಾಯಿ ಅವರಗೆರೆ ಹೆಚ್‌.ಜಿ.ಉಮೇಶ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಕ್ಕರಗೊಳ್ಳ ಪರಮೇಶ್ವರಪ್ಪ, ಅವರಗೆರೆ ರುದ್ರಮುನಿ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಕೆ.ಎಸ್.ವೀರೇಶ್‌ಪ್ರಸಾದ್,  ಸತ್ಯಭಾಮಾ ಮಂಜುನಾಥ್, ತಾಲೂಕು ಕಸಾಪ ಪದಾಧಿಕಾರಿಗಳಾದ ಬೇತೂರು ಷಡಾಕ್ಷರಪ್ಪ, ಕುರ್ಕಿ ಸಿದ್ದೇಶ್ ಹಾಗೂ ನಾಗೇಶ್ವರಿ ನಾಯರಿ, ಹೆಚ್.ಚಿದಾನಂದ, ಎ.ಜಿ.ವೀರೇಶ್, ಶ್ರೀನಿವಾಸ ಮೊದಲಾದವರು ಉಪಸ್ಥಿತರಿದ್ದರು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 45 : ಮಕ್ಕಳೂ ಅಂತರ್ಮುಖಿಗಳಾಗುವುದು ಎಂದರೆ…….
Next Article Davanagere ಜೈನ್ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಿನಮಾನ ಹೆಮ್ಮೆ : ಚಳುವಳಿಗಳ ಮಳೆಗಾಲದಲ್ಲಿ ಉದಯಿಸಿದ ಕವಿ – ಹುಲಿಕಟ್ಟಿ ಚನ್ನಬಸಪ್ಪ

Kannada News | Dinamaanada Hemme  | Dinamaana.com | 08-07-2024 ಬದಲಾದ ಭಾರತದ ರಾಜಕೀಯ, ಸಾಮಾಜಿಕ ಪರಿಸ್ಥಿತಿಯಲ್ಲಿ ರಾಜಕೀಯ…

By Dinamaana Kannada News

ಸೆಂಟ್ ಪಾಲ್ಸ್ ಶಾಲೆಯ ಗೈಡ್ಸ್ ತಂಡ ಪಥ ಸಂಚಲನದಲ್ಲಿ ಪ್ರಥಮ

ದಾವಣಗೆರೆ ಜ. 27 (Davanagere) : ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪಥ…

By Dinamaana Kannada News

ದೇಶ ಬದಲಾಯಿಸುವ ಶಕ್ತಿ ಮತದಾರರಲ್ಲಿದೆ

ದಾವಣಗೆರೆ, ಏ.2 :  ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಈ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.90 ಕ್ಕಿಂತಲೂ ಹೆಚ್ಚು ಮತದಾನವಾಗಬೇಕೆಂಬ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?