Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಣ್ಣು ಮಾಫಿಯಾ : ವಿದ್ಯುತ್ ಪ್ರಸರಣದ ಬೃಹತ್ ಟವರ್ ಗೆ ಗಂಡಾಂತರ
ತಾಜಾ ಸುದ್ದಿ

ಮಣ್ಣು ಮಾಫಿಯಾ : ವಿದ್ಯುತ್ ಪ್ರಸರಣದ ಬೃಹತ್ ಟವರ್ ಗೆ ಗಂಡಾಂತರ

Dinamaana Kannada News
Last updated: January 15, 2025 5:09 pm
Dinamaana Kannada News
Share
Karnataka Dalit Sangharsa Samiti Harihar
Karnataka Dalit Sangharsa Samiti Harihar
SHARE

ಹರಿಹರ (Harihara) : ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‍ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡು ಬಂದಿದ್ದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕ ಖಂಡಿಸಿದೆ.

ಗ್ರಾಮದ ನದಿ ದಡದ ಪಟ್ಟಾ ಜಮೀನಿನಲ್ಲಿ 70 ಅಡಿಗೂ ಎತ್ತರದ ಈ ಟವರ್ ಲೈನ್ ಮೂಲಕ ಅಪಾರ ಪ್ರಮಾಣದ ವಿದ್ಯುತ್ ಪ್ರಸರಣವಾಗುತ್ತಿದೆ. ಟವರ್‍ಗೆ ನಾಲ್ಕೈದು ಅಡಿಗಳ ಅಂತರದಲ್ಲಿ 15 ಅಡಿಗಳಷ್ಟು ಮಣ್ಣುಗಣಿಗಾರಿಕೆ ನಡೆಸಲಾಗಿದೆ ಎಂದು ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಭಾಗದ ನದಿ ದಡದ ಮಣ್ಣು ಮೆದುವಾಗಿದ್ದು, ಒಂದೆರಡು ದಿನ ಮಳೆ ಹಿಡಿದರೂ ಮಣ್ಣು ಸವಕಳಿಯಾಗಿ ಟವರ್ ನೆಲಕ್ಕೆ ಉರುಳುವ ಸಾಧ್ಯತೆ ಇದೆ. ಹಾಗೇನಾದರು ಟವರ್ ಉರುಳಿ ಬಿದ್ದರೆ ಅಪಾರ ಪ್ರಮಾಣದ ಜೀವ, ಆಸ್ತಿ ಹಾನಿಯಾಗುತ್ತದೆ, ದಾವಣಗೆರೆ, ಹಾವೇರಿ ಹಾಗೂ ಇತರೆ ಜಿಲ್ಲೆಗಳಿಗೆ ಹಲವು ದಿನಗಳ ಕಾಲ ವಿದ್ಯುತ್ ಪ್ರಸಾರದಲ್ಲಿ ತಡೆಯುಂಟಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಟವರ್ ಗಳ ಮಾಲಿಕತ್ವ ವಹಿಸಿರುವ ಕೆಪಿಟಿಸಿಎಲ್‍ನವರಿಗೆ ಈ ವಿಷಯ ಹೇಳಿದರೆ, ಹೌದು ವಿಷಯ ನಮ್ಮ ಗಮನಕ್ಕಿದೆ, ಜಮೀನಿನ ಮಾಲಿಕರಿಗೆ ಈಗಾಗಲೆ ನೋಟಿಸ್ ನೀಡಿದ್ದೇವೆ ಎನ್ನುತ್ತಾರೆ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಇಲಾಖೆಯವರು, ಮಣ್ಣುಗಣಿಗಾರಿಕೆ ಮಾಡಿದ್ದಕ್ಕೆ ನೋಟಿಸ್ ನೀಡಿದ್ದೇವೆ, ರಾಜಧನ ಹಾಗೂ ದಂಡ ವಿಧಿಸಿದ್ದೇವೆ ಎಂದು ಸಿದ್ಧ ಉತ್ತರ ನೀಡುತ್ತಾರೆ.

ಕೋಟ್ಯಾಂತರ ಮೌಲ್ಯದ ಮಣ್ಣನ್ನು ಅಕ್ರಮವಾಗಿ ಸಾಗಿಸಿದವರಿಗೆ ನೋಟಿಸ್ ಜಾರಿ ಮಾಡಿ ಜುಜುಬಿ ಮೊತ್ತದ ರಾಜಧನ, ದಂಡ ವಸೂಲಿ ಮಾಡಿದರೆ ಸಾಕೆಂಬ ಅಧಿಕಾರಿಗಳ ಧೋರಣೆ ಖಂಡನೀಯವಾಗಿದೆ.

ನದಿ ದಡದ ಸರ್ಕಾರಿ ಹಾಗೂ ಪಟ್ಟಾ ಜಮೀನುಗಳ ಕೆಂಪು ಮೆದು ಮಣ್ಣು ಹಾಗೂ ಒಳ ಪ್ರದೇಶದಜಮೀನುಗಳಿಂದ ಅಕ್ರಮ ಗ್ರಾವೆಲ್ ಮಣ್ಣು ಸಾಗಣೆಯಿಂದ ತಾಲ್ಲೂಕಿನ ಭೌಗೋಳಿಕ ಆಕಾರ ವಿಕಾರವಾಗುತ್ತಿದೆ. ನದಿ ದಡ ಹಾಗೂ ಜಮೀನುಗಳಲ್ಲಿದ್ದ ಸಹಸ್ರಾರು ಮರಗಳು ನೆಲಕ್ಕುರುಳಿಸಿ ಜೀವ ವೈವಿಧ್ಯಕ್ಕೆ ಧಕ್ಕೆ ಒದಗಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ಜಿಲ್ಲಾಧಿಕಾರಿ, ಗಣಿ, ಕಂದಾಯ, ಕೃಷಿ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಂಘಟನೆಯಿಂದ ಮನವಿ ಸಲ್ಲಿಸಿದ್ದರೂ ತಾಲ್ಲೂಕಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ವಿಷಯದ ಗಂಭೀರತೆಯ ಅರಿವಿದ್ದರೂ ಈ ಅಧಿಕಾರಿಗಳು ಏಕೆ ಮೌನವಹಿಸಿದ್ದಾರೆಂದು ಅವರು ಪ್ರಶ್ನಿಸಿದ್ದಾರೆ.

ಮಣ್ಣು ಮಾಫಿಯಾಕ್ಕೆ ಮಣಿದಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಇಂಧನ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಇಲಾಖೆಗಳ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತರು ಹಾಗೂ ಪರಿಸರವಾದಿ, ಜನಪರ ಹೋರಾಟಗಾರ ಎಸ್.ಆರ್.ಹಿರೇಮಠ ಇವರಿಗೆ ಪತ್ರ ಬರೆಯಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read also : ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಬೆಂಕಿ: ಆವರಗೊಳ್ಳ ಗ್ರಾಮಕ್ಕೆ ಹಬ್ಬಿದ ವಿಷ ಹೊಗೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಘನತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಬೆಂಕಿ: ಆವರಗೊಳ್ಳ ಗ್ರಾಮಕ್ಕೆ ಹಬ್ಬಿದ ವಿಷ ಹೊಗೆ
Next Article National Road Safety Month Davangere Davangere | ಸುರಕ್ಷತೆ ನಿರ್ಲಕ್ಷ್ಯದಿಂದ ಅಪಘಾತ ಹೆಚ್ಚಳ : ಎಸ್ಪಿ ಉಮಾ ಪ್ರಶಾಂತ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere):  ನಗರದಲ್ಲಿ ಕಲಾಕುಂಚ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯೋಗ ಕ್ಷೇತ್ರ ಹಾಗೂ…

By Dinamaana Kannada News

ಕರ್ನಾಟಕದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಮಾ.12 (Davanagere);  ಅಡಿಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ…

By Dinamaana Kannada News

Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

ದಾವಣಗೆರೆ  (Harihara) : ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಗುರುವಾರ ಚಿಕ್ಕಪ್ಪ ಮತ್ತು ಅಣ್ಣನ ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?