Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ
ತಾಜಾ ಸುದ್ದಿ

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

Dinamaana Kannada News
Last updated: April 10, 2025 11:19 am
Dinamaana Kannada News
Share
harihara
ಪಿ.ಜೆ.ಮಹಾಂತೇಶ್
SHARE

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ ನೀಡಬೇಕೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ 2023, 2024 ಮತ್ತು 2025ನೇ ಸಾಲುಗಳಿಗೆ 15 ಜನರನ್ನು ವಿವಿಧ ಕ್ಷೇತ್ರದ ಸಾಧಕರೆಂದು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಈ 15 ಜನ ಪ್ರಶಸ್ತಿ ಪುರಸ್ಕøತರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪನವರ ಜಾತಿಗೆ ಸೇರಿದವರಾಗಿದ್ದಾರೆಂದು ಗುಟ್ಟಾಗಿ ಉಳಿದಿಲ್ಲ ಎಂದು ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಬರೆದಿರುವ ಪತ್ರದಲ್ಲಿ ಆರೋಪಿಸಿದ್ದಾರೆ.

ಪರಿಶಿಷ್ಟರೆಂದರೆ 100ಕ್ಕೂ ಹೆಚ್ಚು ಜಾತಿ, ಜನಾಂಗದವರಿದ್ದಾರೆ, ಆದರೆ ಇಲಾಖೆ ಸಚಿವರು ಹಾಗೂ ಇಲಾಖೆಯ ಆಯುಕ್ತರು ಒಂದೇ  ಜಾತಿಗೆ ಸೇರಿದ್ದು, ಅವರ ಜಾತಿಯವರನ್ನು ಮಾತ್ರ ಆಯ್ಕೆ ಮಾಡಿರುವುದು ಎಷ್ಟು ಸಮಂಜಸ ಎಂದು ಅವರು ಪ್ರಶ್ನಿಸಿದ್ದಾರೆ.

ಡಾ.ಅಂಬೇಡ್ಕರ್‍ರನ್ನು ಛಲವಾದಿ ಜಾತಿಗೆ, ಡಾ.ಬಾಬು ಜಗಜೀವನರಾಂರನ್ನು ಮಾದಿಗ ಜಾತಿಗೆ ಸೀಮಿತಗೊಳಿಸುವ ಮನೋಭಾವದ ಮಹದೇವಪ್ಪನವರು ಸಚಿವರಾಗಿ ಮುಂದುವರೆಯಲು ಅನರ್ಹರಾಗಿದ್ದಾರೆ. ರಾಷ್ಟ್ರ ನಾಯಕರನ್ನು ಒಂದು ಜಾತಿಗೆ ಸೀಮಿತಗೊಳಿಸುವ ಕೀಳು ಮಟ್ಟದ ಕೆಲಸವನ್ನು ಸಮಾಜ ಕಲ್ಯಾಣ ಸಚಿವರಿಂದ ನಿರೀಕ್ಷೆ ಮಾಡಿರಲಿಲ್ಲ.

ಅಂಬೇಡ್ಕರ್ ಪ್ರಶಸ್ತಿಯ ಮೌಲ್ಯವನ್ನು ಇವರೆ ಕಳೆಯುತ್ತಿದ್ದಾರೆ, ಕರ್ನಾಟಕದ ಅಂಬೇಡ್ಕರ್ ಎಂದೆ ಕರೆಯಲ್ಪಡುವ ಪ್ರೊ.ಬಿ.ಕೃಷ್ಣಪ್ಪನವರು ಎಲ್ಲ ತಳ ಸಮುದಾಯದ ಪರವಾಗಿ ಹೋರಾಟ ಮಾಡಲಿಲ್ಲವೆ?, ಬದುಕನ್ನೆ ಸಮರ್ಪಣೆ ಮಾಡಿ ಈಗಲೂ ರಾಜ್ಯದಲ್ಲಿರುವ ಕೃಷ್ಣಪ್ಪರ ಅನೇಕ ಹಿರಿಯ ಅನುಯಾಯಿಗಳು ಇವರಿಗೆ ಯಾರೂ ಕಾಣಲಿಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಅಂಬೇಡ್ಕರ್ ಪ್ರಶಸ್ತಿಯನ್ನು ಕೇವಲ ಒಂದೆ ಜಾತಿಗೆ ಸೀಮಿತ ಎಂದು ಸರ್ಕಾರ ಅಧಿಕೃತ ಘೋಷಿಸಲಿ, ಇಲ್ಲವೆ ಈ ಪ್ರಶಸ್ತಿಗೆ ಪರಿಶಿಷ್ಟರ ಎಲ್ಲಾ ಜಾತಿ, ಜನಾಂಗದವರನ್ನು ಪರಿಗಣಿಸಬೇಕು. ಸಮಾಜವಾದವನ್ನು ಪ್ರತಿಪಾದಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಿರುವ ತಪ್ಪನ್ನು ಗಮನಿಸಿ ಸರಿಪಡಿಸಬೇಕು.

Read also : Davanagere | ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಗೆ ನೊಂದಣಿ : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಒಂದೇ  ಜಾತಿಯ ಸಾಧಕರ ಪಟ್ಟಿಯನ್ನು ರದ್ದುಪಡಿಸಿ ಒಟ್ಟಾರೆ ಪರಿಶಿಷ್ಟರಲ್ಲಿರುವ ಸಾಧಕರನ್ನು ಸೂಕ್ಷ್ಮವಾಗಿ ಅವಲೋಕಿಸಿ ಹೊಸದಾಗಿ ಆಯ್ಕೆ ಮಾಡಬೇಕು, ಸ್ವಜನ ಪಕ್ಷಪಾತ ಮಾಡಿರುವ ಸಚಿವ ಮಹಾದೇವಪ್ಪರನ್ನು ಸಂಪುಟದಿಂದ ಕೈಬಿಡಬೇಕು, ಇಲಾಖೆಯ ಆಯುಕ್ತರನ್ನು ಅಮಾನತ್ತು ಪಡಿಸಬೇಕು ತಪ್ಪಿದಲ್ಲಿ ಕದಸಂಸನಿಂದ ಪ್ರತಿಭಟನೆ ಹಮ್ಮಿಲಾಗುವುದೆಂದು ಅವರು ಪತ್ರದಲ್ಲಿ ಎಚ್ಚರಿಸಿದ್ದಾರೆ.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere | ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಗೆ ನೊಂದಣಿ : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Next Article Davanagere Harihara | ಅಧ್ಯಕ್ಷರಾಗಿ  ಬಿ. ದಯಾನಂದ್ , ಉಪಾಧ್ಯಕ್ಷರಾಗಿ ಹನುಮಂತಪ್ಪ ಪಿ.ಎನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಅ.15 (Davanagere) :  ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಪ್ರಯುಕ್ತ ತುಂಗಭದ್ರ ನದಿಗೆ ಮಣ್ಣು ಮಿಶ್ರಿತ ಕೆಸರು…

By Dinamaana Kannada News

ದಾವಣಗೆರೆ , ಶಿವಮೊಗ್ಗ ಜಿಲ್ಲೆಗಳ ಮೆಕ್ಕೆಜೋಳ ವರ್ತಕರಿಗೆ ಸಚಿವ ಶಿವಾನಂದ ಪಾಟೀಲ ಭರವಸೆ

ಶಿವಮೊಗ್ಗ: ನಮೂನೆ 35 ಬಿಗೆ ಸಂಬಂಧಿಸಿದ ಸೆಸ್‌ ಸಮಸ್ಯೆ ಇತ್ಯರ್ಥ್ಯಕ್ಕೆ ಶೀಘ್ರದಲ್ಲಿ ಎಥನಾಲ್‌ ಫ್ಯಾಕ್ಟರಿ ಮಾಲೀಕರು ಹಾಗೂ ಮೆಕ್ಕೆಜೋಳ ಖರೀದಿದಾರರ…

By Dinamaana Kannada News

ಅಂಚೆ ಇಲಾಖೆಯಿಂದ ಗ್ರಾಹಕರಿಗೆ ತ್ವರಿತ ಸೇವೆ : ಅಂಚೆ ಅಧೀಕ್ಷಕ ಚಂದ್ರಶೇಖರ್

ದಾವಣಗೆರೆ: ದಾವಣಗೆರೆಯ ಅಂಚೆ ವಿಭಾಗದಲ್ಲಿ ಸೆಪ್ಟೆಂಬರ್ 8ರಿಂದ 13ರವರೆಗೆ ನಡೆಯುತ್ತಿರುವ ಮಹಾ ಉದ್ಯಮ ಸಪ್ತಾಹದ ಅಂಗವಾಗಿ ದಾವಣಗೆರೆಯ ಅಂಚೆ ಅಧೀಕ್ಷಕರಾದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?