Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಕ್ರಮ ಮಣ್ಣು ಗಣಿಗಾರಿಕೆ ತಡೆಯದಿದ್ದರೆ ಉಗ್ರ ಹೋರಾಟ : ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಎಚ್ಚರಿಕೆ
ತಾಜಾ ಸುದ್ದಿ

ಅಕ್ರಮ ಮಣ್ಣು ಗಣಿಗಾರಿಕೆ ತಡೆಯದಿದ್ದರೆ ಉಗ್ರ ಹೋರಾಟ : ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಎಚ್ಚರಿಕೆ

Dinamaana Kannada News
Last updated: December 16, 2024 12:45 pm
Dinamaana Kannada News
Share
Davanagere Dss
ದಾವಣಗೆರೆ : ಹರಿಹರ ತಾಲೂಕಿನಲ್ಲಿ ನಡೆಯುತ್ತಿರುವ ಆಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಒತ್ತಾಯಿಸಿ ಡಿಎಸ್‌ಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
SHARE
ದಾವಣಗೆರೆ (Davanagere): ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನದಿ ದಡದ ಗ್ರಾಮಗಳ ಪಟ್ಟಾ ಭೂಮಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ಅದನ್ನು ತಕ್ಷಣ ತಡೆಯಬೇಕು. ಇಲ್ಲವಾದರೆ ಜಿಲ್ಲಾಡಳಿತದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಬಣದ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹರಿಹರ ತಾಲ್ಲೂಕಿನ ಹರ್ಲಾಪುರ, ಗುತ್ತೂರು, ಸಾರಥಿ, ಪಾಮೇನಹಳ್ಳಿ, ದೀಟೂರು, ಚಿಕ್ಕಬಿದರಿ, ಕರಲಹಳ್ಳಿ, ಬುಳ್ಳಾಪುರ, ಹಲಸಬಾಳು, ರಾಜನಹಳ್ಳಿ, ತಿಮ್ಲಾಪುರ, ಧೂಳೆಹೊಳೆ, ಇಂಗಳಗೊಂದಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿನ ಪಟ್ಟಾ ಭೂಮಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮ ಮಣ್ಣಿನ ಗಣಿಗಾರಿಕೆ ಈ ಹಿಂದಿನ ವರ್ಷಗಳಲ್ಲಿ ಅವ್ಯಾಹತವಾಗಿ ನಡೆಸಲಾಗಿದೆ ಎಂದು ಹೇಳಿದರು.
ನದಿ ದಡದ ಹಲವಾರು ಗ್ರಾಮಗಳಲ್ಲಿ 15 ರಿಂದ 20 ಅಡಿಗಳ ಆಳದವರೆಗೆ ಜೆಸಿಬಿ, ಇಟಾಚಿಯಂತಹ ಬೃಹತ್ ಯಂತ್ರಗಳಿಂದ ಗುಂಡಿಗಳನ್ನು ತೋಡುತ್ತಾ ಅಕ್ರಮ ಮಣ್ಣು ಗಣಿಗಾರಿಕೆ ನಡೆಸಲಾಗಿದೆ. ಭೂ ವಿಜ್ಞಾನ ಮತ್ತು ಗಣಿ, ಕಂದಾಯ ಮತ್ತು ಕೃಷಿ ಇಲಾಖೆಯಿಂದ ಅನುಮತಿ ಪಡೆದು ಏರಿ ಅಥವಾ ಕಲ್ಲುಗಳಿದ್ದರೆ ಮೂರು ಅಡಿಯಷ್ಟು ಮಾತ್ರ ಜಮೀನುಗಳನ್ನು ಸಮತಟ್ಟ ಮಾಡಲು ಅವಕಾಶವಿದೆ, ಮೂರು ಅಡಿಗಿಂತ ಹೆಚ್ಚು ಮಣ್ಣನ್ನು ತೆಗೆಸಿದರೆ ಅಂತಹ ಪಟ್ಟಾ ಜಮೀನುಗಳನ್ನು ಸರ್ಕಾರ ಭೂ ಕಂದಾಯ ಕಾಯ್ದೆ ಅನ್ವಯ ತನ್ನ ಸುಪರ್ದಿಗೆ ಪಡೆಯಲು ಅವಕಾಶವಿದ್ದರೂ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪರಿಸರ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಗಿರೀಶ್ ದೇವರ ಮನಿ ಮಾತನಾಡಿ, ಮಣ್ಣು ಗಣಿಗಾರಿಕೆ ಆರಂಭಿಸಲು ಪಟ್ಟಭದ್ರರು ಈಗಾಗಲೇ ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳನ್ನು ಸಂಪರ್ಕಿಸಿ ಅವರ ಅನೌಪಚಾರಿಕ ಅನುಮತಿಗೆ ಕೋರಿದ್ದಾರೆ. ಈ ಹಿಂದಿನ ಹತ್ತಾರು ವರ್ಷಗಳ ಕಾಲ ನಡೆಸಿರುವ ಅಕ್ರಮ ಮಣ್ಣು ಗಣಿಗಾರಿಕೆಯಿಂದ ತಾಲ್ಲೂಕಿನ ಪರಿಸರ ಹಾಳಾಗಿದೆ, ಈ ವರ್ಷವೂ ಗಣಿಗಾರಿಕೆಗೆ ಅಲಿಖಿತವಾಗಿ ಅವಕಾಶ ನೀಡಲಾಗಿದ್ದು ತಾಲ್ಲೂಕಿನ ಭೌಗೋಳಿಕ ರಚನೆ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಅಪಾಯವಿದೆ ಎಂದು ಕಿಡಿಕಾರಿದರು.
ಹರಿಹರ ತಾಲ್ಲೂಕಿನಲ್ಲಿ ಈವರೆಗೆ ನಡೆದಿರುವ ಅಕ್ರಮ ಮಣ್ಣು ಗಣಿಗಾರಿಕೆಯ ದುಷ್ಪರಿಣಾಮ ಗಮನಿಸಿದರೆ ಮತ್ತೊಂದು ರಿಪಬ್ಲಿಕ್ ಬಳ್ಳಾರಿ ಯಂತೆ ತಪ್ಪು ಹೆಜ್ಜೆಯತ್ತ ಸಾಗುತ್ತಿದೆಯೆ ಎಂಬ ದಟ್ಟ ಅನುಮಾನ ಮೂಡುತ್ತಿದೆ, ಕೂಡಲೆ ರಾಜ್ಯ ಸರ್ಕಾರವು ಹರಿಹರ ತಾಲ್ಲೂಕಿನ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ದ್ರೋಣ್ ಯಂತ್ರದ ಸಹಾಯ ಪಡೆಯಬೇಕು, ಇದಕ್ಕೆ ಸಹಕಾರ ನೀಡಿದ ಸಂಬಂಧಿತ ಹಿಂದಿನ, ಈಗಿನ ಇಲಾಖಾಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಆದ್ದರಿಂದ ಎಷ್ಟೆ ಒತ್ತಡ ಬಂದರೂ ಕೂಡ ಮಣ್ಣು ಗಣಿಗಾರಿಕೆಗೆ ಅವಕಾಶ ನೀಡಬಾರದು, ಈ ಬಗ್ಗೆ ಒಂದು ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇದನ್ನು ಮೀರಿ ಒಂದು ವೇಳೆ ಅವಕಾಶ ನೀಡಿದಲ್ಲಿ ಡಿಎಸ್ ಎಸ್ ಸಂಘಟನೆಯು ಇತರ ಪ್ರಗತಿಪರ ಹಾಗೂ ಪರಿಸರ ಸಂಘಟನೆಗಳ ಸಹಕಾರದೊಂದಿಗೆ ತೀವ್ರತರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಕೆ.ಗೋಪಿನಾಥ್ ಚಾರ್, ಡಿಎಸ್.ಎಸ್. ಹರಿಹರ ತಾಲೂಕಿನ ಸಂಚಾಲಕ ಪಿ.ಜೆ.ಮಹಾಂತೇಶ್, ಸುನೀಲ್ ಹೊಟ್ಟಿಗನಹಳ್ಳಿ, ಮಂಜುನಾಥ್ ಹಾಲುವರ್ತಿ, ಶಿವಶಂಕರ್ ಇತರರು ಇದ್ದರು.

 

Read also : ದೊಡ್ಡಬಾತಿ ದರ್ಗಾದಲ್ಲಿ ಉರುಸ್ : ಪೊಲೀಸ್ ಭದ್ರತೆಗೆ ಮುಸ್ಲಿಂ ಒಕ್ಕೂಟ ಮನವಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೊಡ್ಡಬಾತಿ ದರ್ಗಾದಲ್ಲಿ ಉರುಸ್ : ಪೊಲೀಸ್ ಭದ್ರತೆಗೆ ಮುಸ್ಲಿಂ ಒಕ್ಕೂಟ ಮನವಿ
Next Article Job fair | ಉದ್ಯೋಗ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.10 :  ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ)…

By Dinamaana Kannada News

Davanagere : ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

Kannada News | Dinamaana.com | 05-08-2024 ಕರ್ನಾಟಕದ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ.ಇಂತಹ ಬಿರುಗಾಳಿಗೆ ಮೂಲವಾದವರು ರಾಜ್ಯಪಾಲ ಥ್ಯಾವರಚಂದ್ ಗೆಹ್ಲೋಟ್…

By Dinamaana Kannada News

Davanagere | ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ನ.26  (Davanagere)- ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒನ್ ಸ್ಟಾಪ್ ಸೆಂಟರ್ ಸಖಿ ಕೇಂದ್ರಕ್ಕೆ ಗೌರವಧನದ ಆಧಾರದ ಮೇಲೆ ಪ್ಯಾರಾಲೀಗಲ್…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?