Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗೋಮಾಳ ಜಮೀನು ಮತ್ತು ಕೆರೆ ವೈಜ್ಞಾನಿಕ ಸರ್ವೆ ಮಾಡಲು ಒತ್ತಾಯಿಸಿ ಡಿಎಸ್‍ಎಸ್‍ನಿಂದ ಪ್ರತಿಭಟನೆ
ತಾಜಾ ಸುದ್ದಿ

ಗೋಮಾಳ ಜಮೀನು ಮತ್ತು ಕೆರೆ ವೈಜ್ಞಾನಿಕ ಸರ್ವೆ ಮಾಡಲು ಒತ್ತಾಯಿಸಿ ಡಿಎಸ್‍ಎಸ್‍ನಿಂದ ಪ್ರತಿಭಟನೆ

Dinamaana Kannada News
Last updated: March 10, 2025 12:41 pm
Dinamaana Kannada News
Share
Karnataka Dalit Sangharsh Samiti
Karnataka Dalit Sangharsh Samiti -davanagere
SHARE

ದಾವಣಗೆರೆ (Davanagere): ಒತ್ತುವರಿಯಾಗಿರುವ ಗೋಮಾಳ ಜಮೀನು ಮತ್ತು ಕೆರೆಯನ್ನು ಆಧುನಿಕ ಉಪಕರಣಗಳಿಂದ ಹದ್ದು ಬಸ್ತ್ ಮಾಡಬೇಕೆಂದು ಒತ್ತಾಯಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ತಾಲೂಕಿನ ಕಬ್ಬೂರು ಗ್ರಾಮಸ್ಥರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದಿಂದ ಟ್ರ್ಯಾಕ್ಟರ್  ನಲ್ಲಿ ಆಗಮಿಸಿದ್ದ ಗ್ರಾಮಸ್ಥರು, ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು  ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

ಕಬ್ಬೂರು ಗ್ರಾಮದ ಸರ್ವೆ ನಂ.31 ರಲ್ಲಿ 71 ಎಕರೆ, ಸರ್ವೆ ನಂ.32 ರಲ್ಲಿ ಗೋಮಾಳ ಜಮೀನು ಇದೆ. ಸರ್ಕಾರಿ ಗೋಮಾಳ ಜಮೀನಿನಲ್ಲಿದ್ದ ಸ್ಮಶಾನದ ವಿರೂಪ, ಅಕ್ರಮವಾಗಿ ಮಣ್ಣು ಸಾಗಾಣಿಕೆ ಮತ್ತು ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರ ನಾಶ ಮಾಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಮತ್ತು ಒತ್ತುವರಿಯಾಗಿರುವ ಗೋಮಾಳ ಜಮೀನು ಹಾಗೂ ಕೆರೆಯನ್ನು ಈಗಾಗಲೇ ಐದಾರು ಬಾರಿ ಅಳತೆ ಮಾಡಲಾಗಿದೆ. ಆದರೆ ಅಳತೆ ಮಾಡಲು ಬಂದ ಅಧಿಕಾರಿಗಳು ಒಂದು ಕುಟುಂಬದ ಕುಮ್ಮುಕ್ಕಿನಿಂದ ಸರಿಯಾಗಿ ಅಳತೆ ಮಾಡದೆ ವ್ಯತ್ಯಾಸ ಮಾಡುತ್ತಿದ್ದಾರೆ. ಇದನ್ನು ವಿರೋಧಿಸಿ ಈ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿತ್ತು.

ಗ್ರಾಮಾಸ್ಥರ ಒತ್ತಾಯದ ಮೇರೆಗೆ ಜಿಲ್ಲಾಧಿಕಾರಿಗಳು, ಕಬ್ಬೂರು ಗ್ರಾಮದ ಗೋಮಾಳ ಜಮೀನು ಮತ್ತು ಕರೆಯನ್ನು ಅಳತೆ ಮಾಡಿ ಹದ್ದುಬಸ್ತು ಮಾಡಲು, ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಆದೇಶ ನೀಡಿದ್ದರು. ಕಳೆದ ಮಾ.೫ರಂದು ಬುಧವಾರ ಭೂ ಮಾಪಕರು ಭೂಮಾಪನಕ್ಕೆ ಬೇಕಾದ ಗೋಮಾಳದ ಆಕಾರ (ನೀಲಿ ನಕ್ಷೆ) ಚೆಕ್ಕುಬಂದಿ, ಟಿಪ್ಪಣಿ, ಸುತ್ತಮುತ್ತಲಿನ ಪಹಣಿ, ಇತರೆ ಸಾಮಾಗ್ರಿಗಳಿಲ್ಲದೆ ಭಾಗಶಃ ಅಳತೆ ಮಾಡುವ ಸಂದರ್ಭದಲ್ಲಿ ಅಳತೆ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಡೆದರು.

ವಸ್ತುಸ್ಥಿತಿ ಅಳತೆ ಮಾಡಲು ಒತ್ತಾಯಿಸಿದರೂ ಭೂಮಾಪಕರು ಮಾಡಲಿಲ್ಲ. ಸರಿಯಾಗಿ ಮಾಡಬೇಕೆಂದು ಪಟ್ಟು ಹಿಡಿದರೂ ಭೂಮಾಪಕರು, ಗ್ರಾಮಸ್ಥರು ಅಳತೆ ಮಾಡಲು ಸಹಕಾರ ನೀಡಿಲಿಲ್ಲ ಎಂದು ಕುಂಟು ನೇಪವೊಡ್ಡಿ ಸದರಿ ಸ್ಥಳದಿಂದ ಹಿಂದಿರುಗಿ ಬಂದಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

Political analysis | ಚಕ್ರವ್ಯೂಹದಿಂದ ಪಾರಾದರಾ ಸಿಎಂ ಸಿದ್ದು?

ಪ್ರಾಮಾಣಿಕವಾಗಿ ಇರುವ ಭೂಮಾಪಕರನ್ನು ಅಳತೆ ಮಾಡಲು ಕಳುಹಿಸಬೇಕು. ಆಧುನಿಕ (ಡಿಜಿಟಿಲ್) ಉಪಕರಣಗಳಿಂದ ಸರ್ಕಾರಿ ಗೋಮಾಳ ಮತ್ತು ಕೆರೆಯನ್ನು ಅಳತೆ ಮಾಡಬೇಕು, ಗೋಮಾಳದ ಆಕಾರ, ಚೆಕ್ಕುಬಂದಿ, ಟಿಪ್ಪಣಿ, ಸುತ್ತಮುತ್ತಲಿನ ಪಹಣಿಯೊಂದಿಗೆ ಅಳತೆ ಮಾಡಿ, ಹದ್ದುಬಸ್ತು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮತ್ತು ತಹಸೀಲ್ದಾರ್ ಡಾ.ಅಶ್ವತ್ಥ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಕುಂದುವಾಡ, ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಗ್ರಾಮಸ್ಥರಾದ ಮಂಜುನಾಥ ವೈ.ಕಬ್ಬೂರು, ಚಂದ್ರಪ್ಪ, ಎನ್.ಎಂ.ಕೊಟ್ಯಪ್ಪ, ಕೆ.ಪಿ.ರಾಮಸ್ವಾಮಿ, ಧರ್ಮಣ್ಣ, ಪ್ರಸನ್ನ, ರಾಮಸ್ವಾಮಿ ಎಲ್.ಪಿ., ಎನ್.ಶಿವಕುಮಾರ್, ದೇವರಾಜ್, ಎನ್.ಎಂ.ಕೋಟಿ, ಬಸವರಾಜ್ ಗೋಶಾಲೆ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

 

ಸರ್ಕಾರಿ ಗೋಮಾಳ ಮತ್ತು ಕೆರೆಯನ್ನು ಅಳತೆ ಮಾಡಿಸಿ ಒತ್ತುವರಿ ತೆರವುಗೊಳಿಸಿ ಹದ್ದುಬಸ್ತ್ ಮಾಡಿಸಲು ತಹಸೀಲ್ದಾರ್, ಭೂಮಾಪನ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಂತರ ಯಾರು ಸಮಾಧಿ, ಸಶ್ಮಾನ ವಿರೂಪ, ಅಕ್ರಮವಾಗಿ ಮಣ್ಣು ಸಾಗಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಚಕ್ರವ್ಯೂಹದಿಂದ ಪಾರಾದರಾ ಸಿಎಂ ಸಿದ್ದು?
Next Article Davanagere JOB NEWS | ವಿಪತ್ತು ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere): ಫಲಾನುಭವಿಗಳು ಸರ್ಕಾರದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್…

By Dinamaana Kannada News

Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ

ದಾವಣಗೆರೆ  (Davanagere) :  ಕಲಬುರಗಿಯ ಸರಕಾರಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೀಡಲು ತೀರ್ಮಾನಿಸಿರುವ ಸರಕಾರದ…

By Dinamaana Kannada News

Harihara news | ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ

ಹರಿಹರ (Davanagere) : ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹರಿಹರ ತಾಲೂಕು ಕಚೇರಿಯ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳ ಕಪ್ಪು ಪಟ್ಟಿ…

By Dinamaana Kannada News

You Might Also Like

Eyes are waiting PR. Venkatesh
ತಾಜಾ ಸುದ್ದಿ

poem | ಕಣ್ಣುಗಳು ಕಾಯುತ್ತಿವೆ : ಪಿಆರ್. ವೆಂಕಟೇಶ್

By Dinamaana Kannada News
DAVANAGERE
ತಾಜಾ ಸುದ್ದಿ

ಭದ್ರಾ ಜಲಾಶಯದಲ್ಲಿ 176.9 ಅಡಿ ನೀರು : ತುಂಬಲು 9.1 ಅಡಿ ಮಾತ್ರ ಬಾಕಿ

By Dinamaana Kannada News
Davanagere
ತಾಜಾ ಸುದ್ದಿ

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?