Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಠ್ಯದಲ್ಲಿ ಜಾನಪದ ಕಲೆಗಳ ಕಲಿಕೆ ಕಡ್ಡಾಯಗೊಳಿಸಿ : ಗೊಲ್ಲಹಳ್ಳಿ ಶಿವಪ್ರಸಾದ್
ತಾಜಾ ಸುದ್ದಿ

ಪಠ್ಯದಲ್ಲಿ ಜಾನಪದ ಕಲೆಗಳ ಕಲಿಕೆ ಕಡ್ಡಾಯಗೊಳಿಸಿ : ಗೊಲ್ಲಹಳ್ಳಿ ಶಿವಪ್ರಸಾದ್

Dinamaana Kannada News
Last updated: January 21, 2025 4:27 am
Dinamaana Kannada News
Share
Karnataka Folk Academy
Karnataka Folk Academy
SHARE

ದಾವಣಗೆರೆ (Davanagere): ಸರ್ಕಾರದ ಆರ್ಥಿಕ ಸಹಭಾಗಿತ್ವ ಮತ್ತು ನಿರಂತರ ಕಾರ್ಯಕ್ರಮಗಳ ಆಯೋಜನೆಗಳ ಜೊತೆಗೆ ಶಾಲಾ ಮಟ್ಟದಿಂದಲೇ ಪಠ್ಯ ಕ್ರಮದಲ್ಲಿ ಜಾನಪದ ಕಲೆಗಳನ್ನು ಕಡ್ಡಾಯಗೊಳಿಸುವ ಮೂಲಕ ಅಳಿವಿನ ಅಂಚಿಗೆ ಸರಿಯುತ್ತಿರುವ ಜಾನಪದ ಕಲೆಗಳನ್ನು ರಕ್ಷಿಸಲು ಸಾಧ್ಯ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅಭಿಪ್ರಾಯಪಟ್ಟರು.

ಕರ್ನಾಟಕ ಜಾನಪದ ಅಕಾಡೆಮಿ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ಕನ್ನಡ ಅಧ್ಯಯನ ವಿಭಾಗದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ‘ಗೆಜ್ಜೆ ಮಾತಾಡತಾವೆ’ ಮಹಿಳಾ ಕಲಾವಿದರ ಪ್ರದರ್ಶನ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶೈಕ್ಷಣಿಕ ಸಂಸ್ಥೆಗಳು ಮತ್ತು ಜಾನಪದ ಕಲಾವಿದರ ನಡುವಿನ ಸಹಯೋಗವು ಸಾಂಪ್ರದಾಯಿಕ ಜ್ಞಾನವನ್ನು ದಾಖಲಿಸಲು ಮತ್ತು ಸಂರಕ್ಷಿಸಲು ಸಹಾಯ ಮಾಡುತ್ತದೆ. ಕಲಾ ಪ್ರದರ್ಶನಗಳಲ್ಲಿ ಯುವಜನರನ್ನು ಒಳಗೊಳ್ಳುವಂತೆ ಮಾಡುವ ಮೂಲಕ ಸಾಂಪ್ರದಾಯಿಕ ಕಲಾ ಪರಂಪರೆಯನ್ನು ಪೋಷಿಸಿ, ಮುಂದಿನ ಪೀಳಿಗೆಗೆ ಒಯ್ಯಬಹುದು ಎಂದು ತಿಳಿಸಿದರು.

ಶಾಲಾ ಪಠ್ಯಕ್ರಮದಲ್ಲಿ ಜಾನಪದ ಪ್ರದರ್ಶನ ಕಲೆಗಳನ್ನು ಸೇರಿಸುವುದು ಮತ್ತು ಕಾರ್ಯಾಗಾರಗಳನ್ನು ಆಯೋಜಿಸುವುದು ಯುವ ಪೀಳಿಗೆಯಲ್ಲಿ ಜಾಗೃತಿ ಮತ್ತು ಆಸಕ್ತಿಯನ್ನು ಬೆಳೆಸಬಹುದು. ಸಾರ್ವಜನಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಉತ್ಸವಗಳು ಮತ್ತು ಅಂತರರಾಷ್ಟ್ರೀಯ ಸಹಯೋಗಗಳು ಆಸಕ್ತಿಯನ್ನು ಪುನರುಜ್ಜೀವನಗೊಳಿಸಲು ಮತ್ತು ಜಾನಪದ ಕಲಾವಿದರಿಗೆ ಮಾನ್ಯತೆ ನೀಡಲು ಸಹಾಯ ಮಾಡುತ್ತದೆ ಎಂದು ನುಡಿದರು.

ಇತ್ತೀಚಿನ ವರ್ಷಗಳಲ್ಲಿ, ಮಹಿಳೆಯರು ಯಕ್ಷಗಾನ ಮತ್ತು ಡೊಳ್ಳು ಕುಣಿತದಂತಹ ಕಲಾ ಪ್ರಕಾರಗಳಲ್ಲಿ ಅಡೆತಡೆಗಳನ್ನು ಮುರಿಯಲು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಮಾರ್ಗದರ್ಶನದ ಕೊರತೆ, ಅಸಮಾನ ವೇತನ ಮತ್ತು ಸೀಮಿತ ಅವಕಾಶಗಳಂತಹ ವ್ಯವಸ್ಥಿತ ಸವಾಲುಗಳು ಮುಂದುವರಿಯುತ್ತವೆ. ಇವುಗಳ ನಿವಾರಣೆಯತ್ತ ಆದ್ಯತೆ ನೀಡಬೇಕಾಗಿದೆ ಎಂದು ತಿಳಿಸಿದರು.

ಜಾನಪದ ಕಲೆಗಳು ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ವ್ಯವಸ್ಥಿತ ಸಮಸ್ಯೆಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಿವೆ. ಸಂಪ್ರದಾಯ ಮತ್ತು ನಾವೀನ್ಯತೆಯ ನಡುವೆ ಸಮತೋಲನವನ್ನು ಸಾಧಿಸುವ ಮೂಲಕ, ಜಾನಪದ ಪ್ರದರ್ಶನ ಕಲೆಗಳು ಸಮಕಾಲೀನ ಜಗತ್ತಿನಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ನುಡಿದರು.

ಕುಲಪತಿ ಪ್ರೊ.ಬಿ.ಡಿ.ಕುಂಬಾರ ಮಾತನಾಡಿ, ಆಧುನೀಕರಣ ಮತ್ತು ಜಾಗತೀಕರಣವು ಜಾನಪದ ಕಲೆಗಳಿಗೆ ಗಮನಾರ್ಹ ಆತಂಕವನ್ನು ಸೃಷ್ಟಿಸಿದೆ. ಅದಾಗ್ಯೂ ವಿಭಿನ್ನ ರೀತಿಯಲ್ಲಿ ಅವು ರೂಪಾಂತರ ಪಡೆದು ಪುನರುಜ್ಜೀವನಕ್ಕೆ ಅವಕಾಶಗಳನ್ನು ಸೃಷ್ಟಿಸುತ್ತೆ. ಕಲಾವಿದರ ಆರ್ಥಿಕ ಸಂಕಷ್ಟ, ಯುವಜನರ ನಿರಾಸಕ್ತಿ ಸಮಸ್ಯೆಗಳನ್ನು ಪರಿಹರಿಸುವುದು, ಲಿಂಗ ತಾರತಮ್ಯ ನಿವಾರಿಸಿ ಎಲ್ಲರಿಗೂ ಉತ್ತೇಜನ ನೀಡುವ ಮತ್ತು ಸಕಾಲಿಕ ಶಿಕ್ಷಣದ ಮೂಲಕ ಈ ಸಂಪ್ರದಾಯಗಳನ್ನು ಸಂರಕ್ಷಿಸುವುದು ಅಗತ್ಯವಾದ ಕ್ರಮಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಜಾನಪದ ಕಲಾವಿದರಿಗೆ ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ಡಿಜಿಟಲ್ ಮಾಧ್ಯಮವು ಅವಕಾಶಗಳನ್ನು ನೀಡುತ್ತದೆ. ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ವೇದಿಕೆಗಳು ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಮನ್ನಣೆ ಪಡೆಯಲು ಅವಕಾಶ ಮಾಡಿಕೊಟ್ಟಿವೆ ಎಂದು ನುಡಿದರು.

ಆರ್ಥಿಕ ಉತ್ತೇಜನ, ಸಾಮಾಜಿಕ ಗೌರವ ಮತ್ತು ಬೆಳವಣಿಗೆಗೆ ಅವಕಾಶಗಳ ಕೊರತೆಯಿಂದಾಗಿ ಯುವ ಪೀಳಿಗೆಯು ಜಾನಪದ ಕಲೆಗಳನ್ನು ಕಲಿಯಲು ಹೆಚ್ಚು ಆಸಕ್ತಿ ಹೊಂದಿಲ್ಲ. ಔಪಚಾರಿಕ ಶಿಕ್ಷಣ ಮತ್ತು ನಗರ ಉದ್ಯೋಗಗಳ ಆದ್ಯತೆಯು ಅವರನ್ನು ಈ ಸಂಪ್ರದಾಯಗಳಿAದ ದೂರವಿಡುತ್ತದೆ ಎಂದು ತಿಳಿಸಿದರು.

ಅಕಾಡೆಮಿ ಸದಸ್ಯ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಅನೇಕ ಜಾನಪದ ಪ್ರದರ್ಶನ ಕಲೆಗಳು ಮೌಖಿಕ ಸಂಪ್ರದಾಯಗಳ ಮೇಲೆ ಅವಲಂಬಿತವಾಗಿದೆ. ಪುರುಷ ಪ್ರಧಾನ ಕಲೆಗಳಲ್ಲಿ ಮಹಿಳೆಯರಿಗೆ ಆದ್ಯತೆ ಇಲ್ಲದೆ, ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರಲ್ಲಿ ಕಲಾ ಸಂಪ್ರದಾಯ ಬೆಳೆಸಲು ಪ್ರದರ್ಶನ ಮತ್ತು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ ಎಂದರು.
ಜಾನಪದ ಕಲೆಗಳು ಮತ್ತು ಕಲಾಪ್ರದರ್ಶನಗಳನ್ನು ವಿಶ್ವವಿದ್ಯಾನಿಲಯಗಳು ಕಾಲೇಜು ಪಠ್ಯಕ್ರಮಗಳಲ್ಲಿ ಕಡ್ಡಾಯ ಕಲಿಕೆಗೆ ಗಮನ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕುಲಪತಿಗಳು ವಿಶೇಷ ಗಮನ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮುನ್ನ ವಿವಿಧ ಮಹಿಳಾ ಕಲಾ ತಂಡಗಳು ಜಾನಪದ ಕಲೆಗಳನ್ನು ಪ್ರದರ್ಶಿಸಿದವು.

ಸಿಂಡಿಕೇಟ್ ಸದಸ್ಯೆ ಡಾ.ಜಿ.ಕೆ.ಪ್ರೇಮಾ ಅವರು ಮಹಿಳಾ ಜಾನಪದದ ಮುನ್ನೋಟಗಳು ಕುರಿತು ವಿಶೇಷ ಉಪನ್ಯಾಸ ನೀಡಿದರು. ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ, ಅಕಾಡೆಮಿ ರಿಜಿಸ್ಟಾçರ್ ಎನ್.ನಮ್ರತ, ಸದಸ್ಯರಾದ ಮಲ್ಲಿಕಾರ್ಜುನ ಕೆಂಕೆರೆ, ದೇವಾನಂದ ಉಪಸ್ಥಿತರಿದ್ದರು. ಕನ್ನಡ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ವಿ.ಜಯರಾಮಯ್ಯ ಸ್ವಾಗತಿಸಿದರು. ಡಾ.ಭೀಮಾಶಂಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು, ಮಂಜುಳಾ ವಂದಿಸಿದರು.

Read also : ಜಿಎನ್‌ಎಂ ಹುದ್ದೆ ನೇಮಕಾತಿಗೆ ಆದೇಶ: ಪಿಎಚ್‌ಸಿಒ ಸಿಬ್ಬಂದಿಗಳಿಗೆ ಅನ್ಯಾಯ

Karnataka Folk Academy
Karnataka Folk Academy
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜಿಎನ್‌ಎಂ ಹುದ್ದೆ ನೇಮಕಾತಿಗೆ ಆದೇಶ: ಪಿಎಚ್‌ಸಿಒ ಸಿಬ್ಬಂದಿಗಳಿಗೆ ಅನ್ಯಾಯ
Next Article harihara MLA B.P .Harisha Davanagere | ಪ್ಲೆಕ್ಸ್, ಹೋರ್ಡಿಂಗ್ಸ್ ಅಳವಡಿಕೆ ವಿಚಾರದಲ್ಲಿ ಅವ್ಯವಹಾರ : ಶಾಸಕ ಬಿ.ಪಿ. ಹರೀಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Crime news | ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ

ದಾವಣಗೆರೆ (Davanagere) :  ಪತ್ನಿ ಸಾವಿನಿಂದ ಮನನೊಂದು ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣು ಹಾಕಿಕೊಂಡು ಸಾವಿಗೆ…

By Dinamaana Kannada News

ಪಂಚಮಸಾಲಿ ಸಮುದಾಯದ ಮುಖಂಡರಿಗೆ ಅನ್ಯಾಯ

ಹರಿಹರ  :    ರಾಜಕೀಯವಾಗಿ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಅನ್ಯಾಯವಾಗಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ…

By Dinamaana Kannada News

ಸಂವಿಧಾನ ಉಳಿಸಲು ಪಣ ತೊಡೋಣ : ಜಿಗ್ನೇಶ್ ಮೇವಾನಿ

ದಾವಣಗೆರೆ (Davanagere): ಬಾಬಾಸಾಹೇಬರ  ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ,…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?