Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕನ್ನಡ ಭಾಷೆ ಬಳಕೆಯಿಂದ  ಸೌಹಾರ್ಧತೆ ಹೆಚ್ಚಳ : ಮೇಯರ್‌ ಚಮನ್ ಸಾಬ್
ತಾಜಾ ಸುದ್ದಿ

Davanagere | ಕನ್ನಡ ಭಾಷೆ ಬಳಕೆಯಿಂದ  ಸೌಹಾರ್ಧತೆ ಹೆಚ್ಚಳ : ಮೇಯರ್‌ ಚಮನ್ ಸಾಬ್

Dinamaana Kannada News
Last updated: November 3, 2024 8:36 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere):  ಮುಸ್ಲಿಂ ಸಮುದಾಯ  ಕನ್ನಡ ಭಾಷೆ  ಹೆಚ್ಚಾಗಿ ಬಳಸುವುದರಿಂದ  ಸಮಾಜದಲ್ಲಿ ಸೌಹಾರ್ಧತೆ ಬೆಳೆಯುತ್ತದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಕೆ ಚಮನ್ ಸಾಬ್ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ನಾಡು ನುಡಿಗೆಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆ ಬಹಳ ಪ್ರಾಚೀನವಾದ ಭಾಷೆ. ಬೇರೆ ರಾಜ್ಯಗಳ ಭಾಷೆಗಳಿಗೆ ಹೋಲಿಸಿದರೆ ನಮ್ಮ ಕರ್ನಾಟಕದಲ್ಲಿ ಇದೊಂದು ಹಬ್ಬವನ್ನಾಗಿ ಆಚರಿಸುತ್ತಿರುವುದು ವಿಶೇಷವೆಂದರು

ಎರಡನೇ ಶತಮಾನದಲ್ಲಿಯೇ ಕನ್ನಡ ಭಾಷೆಯ ಬಗ್ಗೆ ಉಲ್ಲೇಖವಿದ್ದು ಕನ್ನಡ ಭಾಷೆಯನ್ನು ಬೆಳೆಸಲು ಅನೇಕ ದಾಸರು, ವಚನಕಾರರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಆದರೆ , ಭಾಷೆ  ಹಾಗೂ ಧರ್ಮಕ್ಕೆ ಸಂಬಂಧ ಕಟ್ಟುವ ಕೆಲಸ ನಡೆಯುತ್ತಿದೆ. ಆದರೆ, ಭಾಷೆಗೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಈ ನೆಲದಲ್ಲಿ ಹುಟ್ಟಿರುವ ಎಲ್ಲರೂ ಕನ್ನಡಿಗರು ಎಂಬ ಅಭಿಮಾನಿವಿರಬೇಕು ಎಂದರು.

ಮಕ್ಕಳಿಗೆ ಕನ್ನಡ ಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಮಕ್ಕಳ ಭವಿಷ್ಯ ಉತ್ತಮವಾಗಿರಲಿದೆ. ಅದ್ದರಿಂದ ಕನ್ನಡ ಭಾಷೆಯಲ್ಲಿ ಶಿಕ್ಷಣ ಕೊಡಿಸಬೇಕು.  ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ವೆಂದರು.

Read also :  Davangere | ಆರೋಗ್ಯ ಭಾಗ್ಯವನ್ನು ಕೊಡುವವನು ಧನ್ವಂತರಿ : ವೇದಬ್ರಹ್ಮ ಗೋಪಾಲ ಆಚಾರ್ ಮಣ್ಣೂರ್

ಕನ್ನಡ ಭಾಷೆಯ ಬಗ್ಗೆ ಅನೇಕ  ದಾಸರು ವಚನಕಾರರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.  ಅವರನ್ನೆಲ್ಲ ಸ್ಮರಿಸೋಣ ಎಂದರು.

ನಿವೃತ್ತ ಪ್ರಾಧ್ಯಾಪಕ ಡಾ. ದಾದಾಪೀರ್ ನವಳಿಹಾಳ್ ಮಾತನಾಡಿ, ಕನ್ನಡ ಭಾಷೆಗೆ ಮುಸ್ಲಿಮರ ಕೊಡುಗೆ ಅಪಾರವಾಗಿದೆ.  ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ  ಜಾರಿಗೆ ತಂದವರು ಟಿಪ್ಪು ಸುಲ್ತಾನ್‌. ಕನ್ನಡಕ್ಕೆ ಅನೇಕ ಮುಸ್ಲಿಂ ಕವಿಗಳು ದಾರ್ಶನಿಕರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಭಾಷೆಗೆ ಮುಸ್ಲಿಮರ ಕೊಡುಗೆ ಅಪಾರವಾಗಿದೆ ಎಂದರು.

ಕನ್ನಡ ಭಾಷೆಯನ್ನು ಮುಸ್ಲಿಮರು ಸೊಗಸಾಗಿ ಬಳಸುತ್ತಾರೆ. ಆದರೆ,  ಸಿನಿಮಾ ಹಾಗೂ ನಾಟಕಗಳಲ್ಲಿ ಪಾತ್ರಧಾರಿಗಳು  ಕನ್ನಡ ಬಳಸುವ ಭಾಷೆ ತುಂಬಾ ಕೆಟ್ಟದಾಗಿರುತ್ತೆದೆ ಎಂದು ವಿಷಾಧ ವ್ಯಕ್ತಪಡಿಸಿದರು .

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದಂತಹ ಸಾಧಕರಿಗೆ ಸನ್ಮಾನಿಸಲಾಯಿತು.

ಜಾಕಿರ್ ಹುಸೇನ್ ಸ್ವಾಗತಿಸಿದರು.  ಪ್ರಾಸ್ತಾವಿಕವಾಗಿ ಜಮೀರ್‌  ಅಹ್ಮದ್ ಮಾತನಾಡಿದರು.

ಮಹಮ್ಮದ್ ಗೌಸ್ ಸೈಯದ್ ಚಾರ್ಲಿ, ಸಾದಾರಲಿ ಖಾನ್ ಸನಾವುಲ್ಲಾ ನವಿಲೇಹಾಳ, ಕಲೀಮ್ ಬಾಷಾ,  ಶೋಕತ್ ಅಲಿ , ಉಮ್ಮರ್ ಸಾಬ್ ಮಹಮ್ಮದ್ ಜಬಿವುಲ್ಲಾ ಮುಂತಾದವರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere | ಆರೋಗ್ಯ ಭಾಗ್ಯವನ್ನು ಕೊಡುವವನು ಧನ್ವಂತರಿ : ವೇದಬ್ರಹ್ಮ ಗೋಪಾಲ ಆಚಾರ್ ಮಣ್ಣೂರ್
Next Article Waqf Controversy CM Siddaramaiah BJP Protest Prime Minister Narendra Modi ವಕ್ಫ್ ವಿವಾದ: ಬಿಜೆಪಿ ಕುತಂತ್ರಕ್ಕೆ ಕಿವಿಗೊಡದಿರಿ; ರಾಜ್ಯದ ಜನರಿಗೆ ಸಿದ್ದು ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ : ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮನವಿ

ಹರಿಹರ (Harihara): ತಾಲ್ಲೂಕಿನ ತುಂಗಭದ್ರಾ ನದಿ ಹಾಗೂ ಸೂಳೆಕೆರೆ ಹಳ್ಳದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಾ ಅಪಾಯಕಾರಿ ಗುಂಡಿಗಳನ್ನು ಸೃಷ್ಟಿsಸುವ…

By Dinamaana Kannada News

ವಿಶ್ವ ಕಾರ್ಮಿಕರ ದಿನಾಚರಣೆ | ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು

ಮೇ 1 - ವಿಶ್ವ ಕಾರ್ಮಿಕರ ದಿನಾಚರಣೆ ಎಂದೊಡನೆಯೇ 8 ಘಂಟೆಯ ಕೆಲಸದ ಅವಧಿಯ ಬೇಡಿಕೆಯನ್ನು ಮುಂದಿಟ್ಟುಕೊಂಡು 1886 ಇಸವಿಯ…

By Dinamaana Kannada News

Davanagere | ಮನೆಗಳನ್ನು ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಮೀನುಗಾರಿಕೆ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಸರ್ಕಾರದ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?