Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ
ತಾಜಾ ಸುದ್ದಿ

ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಜನರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ

Dinamaana Kannada News
Last updated: August 4, 2025 3:18 pm
Dinamaana Kannada News
Share
Davangere
SHARE
ದಾವಣಗೆರೆ  : ಆ.  5 ರಿಂದ ಕೆಎಸ್ ಆರ್ ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಕರೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಶಾಲಾ-ಕಾಲೇಜು ಮಕ್ಕಳಿಗೆ ಸಂಚಾರದ ಪರ್ಯಾಯ ವ್ಯವಸ್ಥೆಗಾಗಿ ಖಾಸಗಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ತಿಳಿಸಿದರು.
ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ,  ವೇತನ ಪರಿಷ್ಕರಣೆ ಮತ್ತು ಇನ್ನಿತರೆ ಬೇಡಿಕೆಗಳನ್ನು ಈಡೇರಿಸಲು ಕೆಎಸ್‌ಆರ್‌ಟಿಸಿ ನೌಕರರು ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರದಿಂದ ಕರೆ ನೀಡಿರುವುದರಿಂದ ಜಿಲ್ಲೆಯಲ್ಲಿ ಸಂಚಾರಕ್ಕೆ ತೊಂದರೆಯುಂಟಾಗದಂತೆ ಖಾಸಗಿ ಬಸ್ ಮಾಲೀಕರೊಂದಿಗೆ ಜಂಟಿ ಮಾತುಕತೆ ನಡೆಸಿ ಸಾರ್ವಜನಿಕರಿಗೆ, ಮಹಿಳೆಯರಿಗೆ, ವೃದ್ಧರು, ಗರ್ಭಿಣಿ ಮಹಿಳೆಯರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಮಾರ್ಗಗಳಿಗೆ ಬಸ್ ಸಂಚಾರಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 126 ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದ್ದು, ಮುಷ್ಕರದ ವೇಳೆ ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದಂತೆ ಸ್ಥಳೀಯವಾಗಿ 56 ಸಂಚಾರಿ ಮಾರ್ಗಗಳಲ್ಲಿ ತೊಂದರೆ ಯುಂಟಾಗಬಹುದು ಎಂದು ಗುರುತಿಸಲಾಗಿದೆ. ಹಾಗಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ದಾವಣಗೆರೆಗೆ ಸಂಬಂಧಿಸಿದಂತೆ 30 ಖಾಸಗಿ ಬಸ್ ಅವಶ್ಯಕತೆ ಇದ್ದು, 261 ಬಾರಿ ಸಂಚಾರ ಬೇಡಿಕೆ ಇದೆ. ಜಗಳೂರು ತಾಲ್ಲೂಕಿಗೆ 5, ಹರಿಹರ -50 ಹಾಗೂ ಹೊನ್ನಾಳಿ ತಾಲ್ಲೂಕಿಗೆ 10 ಬಸ್‌ಗಳು ಸೇರಿ ಒಟ್ಟು 95 ಖಾಸಗಿ ಬಸ್‌ಗಳ ಅವಶ್ಯಕತೆ ಇದ್ದು, ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧಿಕಾರಿಗಳು ಖಾಸಗಿ ಬಸ್ ಮಾಲೀಕರೊಂದಿಗೆ ಮಾತುಕತೆ ನಡೆಸಿ ಒಪ್ಪಿಗೆ ಪಡೆದುಕೊಳ್ಳಲಾಗಿದೆ.
ಖಾಸಗಿ ಬಸ್ ಮಾಲೀಕರು ಸುಗಮ ಸಂಚಾರ ವ್ಯವಸ್ಥೆಗೆ ಸಹಕರಿಸುವುದಾಗಿ ಭರವಸೆ ನೀಡಿದ್ದು ಜಿಲ್ಲಿಯಲ್ಲಿ ಯಾವುದೇ ರೀತಿಯ ತೊಂದರೆಗಳಿಗೆ ಅವಕಾಶವಿಲ್ಲದಂತೆ ಅಗತ್ಯ ಕ್ರಮವಹಿಸಲಾಗಿದೆ ಎಂದ ಅವರು, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರತಿದಿನ ಸರಾಸರಿ 2.10 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಅದಕ್ಕೆ ಅನುಗುಣವಾಗಿ ಪ್ರಾಥಮಿಕವಾಗಿ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಸಮಸ್ಯೆ ಉದ್ಭವವಾಗದಂತೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಲ್ಲಿ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು ಎಂದರು.
Read also : ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಅಷ್ಟೇ ಅಲ್ಲದೇ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾದಲ್ಲಿ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ಸಹಾಯವಾಣಿ ಸಂಖ್ಯೆಯನ್ನು ಸಹ ಆರಂಭಿಸಲಾಗಿದೆ. ಕೆಎಸ್‌ಆರ್‌ಟಿಸಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 7022030175, ಪ್ರಾದೇಶಿಕ ಸಾರಿಗೆ ಕಚೇರಿ – 08192-259848, ಪೊಲೀಸ್ ಕಚೇರಿ ನಿಯತ್ರಣ ಕೊಠಡಿ – 9480803200 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ – 1077 ಗೆ ಸಂಪರ್ಕಿಸಬಹುದು ಎಂದರು.
ಟಿಕೆಟ್ ದರ ಹೆಚ್ಚು ವಸೂಲಿ ಮಾಡಿದಲ್ಲಿ ಕ್ರಮ:
ಖಾಸಗಿ ಬಸ್‌ಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಟಿಕೆಟ್ ದರ ವಸೂಲಾತಿ ಮಾಡಿದಲ್ಲಿ ಸಂಬAಧಪಟ್ಟ ಮಾಲೀಕರ ವಿರುದ್ದ ಸೂಕ್ತ ಕ್ರಮ ಅಥವಾ ಪರವಾನಗಿ ರದ್ದುಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ತಿಳಿಸಿದರು.
ಈ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಭಗವಾನ್ ದಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣ್ ಕುಮಾರ್ ಎಸ್ ಬಸಾಪುರ, ಕೆಎಸ್ ಆರ್ ಟಿಸಿ ಸಂಚಾರ ನಿಯಂತ್ರಕ ಫಕೃದ್ಧೀನ್ ಇದ್ದರು.
TAGGED:Davanagere districtKSRTCstrikeಕೆಎಸ್ ಆರ್ ಟಿಸಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ|ಕಂಪ್ಯೂಟರೈಸ್ಡ್ ಅಕೌಂಟಿಂಗ್‍ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
Next Article Applications invited ಉದ್ಯೋಗಾಧಾರಿತ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಅರ್ಜಿ ಅಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸಿಟಿ ಬಸ್ ಕಲ್ಪಿಸಲು ಕೋರಿ ಮನವಿ ಸಲ್ಲಿಕೆ 

ದಾವಣಗೆರೆ (Davanagere): ದಾವಣಗೆರೆಯ ಕೆಟಿಜೆ ನಗರ, ಭಗತ್ ಸಿಂಗ್ ನಗರ ಹಾಗೂ ಲೆನಿನ್ ನಗರಕ್ಕೆ ಸಿಟಿ ಬಸ್ ಕಲ್ಪಿಸಲು ಕೋರಿ…

By Dinamaana Kannada News

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ(JOB NEWS): ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್-ಸಿ ಮತ್ತು ಡಿ.ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 26…

By Dinamaana Kannada News

ಪತ್ರಕರ್ತರಿಲ್ಲದೇ ಸಮಾಜ ಮುನ್ನಡೆಸುವುದು ಕಷ್ಟ : ಸಚಿವ ಶಿವಾನಂದ ಪಾಟೀಲ

ಹಾವೇರಿ:  ದೇಶದ ಅಭಿವೃದ್ಧಿಯಲ್ಲಿ, ವಿವಿಧ ಕ್ಷೇತ್ರಗಳ ಮುಂಚೂಣಿಗೆ ಸಾಗುವಲ್ಲಿ ಪತ್ರಕರ್ತರ ಕೊಡುಗೆ ಬಹುದೊಡ್ಡದು. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟಕರ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?