ದಾವಣಗೆರೆ (Davanagere): ಇಸ್ಫೀಟ್ ಜೂಜಾಟ ಮೇಲೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿದ್ದು 1,04,110 ರೂ ಹಣ ವಶಕ್ಕೆ ಪಡೆದಿದ್ದಾರೆ.
ನಗರದ ಲಾಯರ್ ರಸ್ತೆಯ ಮುತ್ತೂಟ್ ಗೋಲ್ಡ್ ಪಾಯಿಂಟ್ ನ ಮೇಲ್ಭಾಗದ ಮಹಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ಎಸ್ಪಿ ಉಮಾ ಪ್ರಶಾಂತ ಹಾಗೂ ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ, ಜಿ ಮಂಜುನಾಥ, ನಗರ ಡಿವೈಎಸ್ಪಿ ಶರಣಬಸವೇಶ್ವರ. ಬಿ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ ಹೆಚ್ ಎಸ್ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ.
ಜೂಜಾಟದಲ್ಲಿ ತೊಡಗಿದ್ದ 21 ಜನರನ್ನು ವಶಕ್ಕೆ ಪಡೆದು ಆರೋಪಿತರಿಂದ ಇಸ್ಪೀಟ್ ಜೂಜಾಟ ಆಡಲು ತೊಡಗಿಸಿದ್ದ 1.04.110 ರೂ ನಗದು ಹಣ ಮತ್ತು ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪಿತರು ಮತ್ತು ಮನೆಯನ್ನು ಬಾಡಿಗೆ ನೀಡಿ ಅಕ್ರಮ ಚಟುವಟಿಕೆ ನಡೆಸಲು ಅವಕಾಶ ಮಾಡಿಕೊಟ್ಟ ಮನೆಯ ಮಾಲೀಕರ ವಿರುದ್ದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read also : ಕೊಟ್ಟ ಮಾತಿನಂತೆ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿದ ಶಿಕ್ಷಕ ಮೇಘರಾಜ್!