Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮುಸ್ಲಿಂ ಒಕ್ಕೂಟದ ಸಂಚಾಲಕರಾಗಿ ವಕೀಲ ನಜೀರ್ ಅಹ್ಮದ್ ಆಯ್ಕೆ
ತಾಜಾ ಸುದ್ದಿ

ಮುಸ್ಲಿಂ ಒಕ್ಕೂಟದ ಸಂಚಾಲಕರಾಗಿ ವಕೀಲ ನಜೀರ್ ಅಹ್ಮದ್ ಆಯ್ಕೆ

Dinamaana Kannada News
Last updated: January 7, 2026 1:53 pm
Dinamaana Kannada News
Share
Davanagere
SHARE
ದಾವಣಗೆರೆ:ಮುಸ್ಲಿಂ ಒಕ್ಕೂಟದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಮುಸ್ಲಿಂ ಒಕ್ಕೂಟದ ಮಹತ್ವದ ಸಭೆಯಲ್ಲಿ ವಕೀಲ ನಜೀರ್ ಅಹ್ಮದ್ ಅವರನ್ನು ಒಕ್ಕೂಟದ ನೂತನ ಸಂಚಾಲಕರಾಗಿ ಏಕಮತದಿಂದ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಕಾರ್ಮಿಕ ಸಂಘಟನೆಗಳ ಪ್ರಮುಖ ನಾಯಕರು ಭಾಗವಹಿಸಿ, ಮುಸ್ಲಿಂ ಒಕ್ಕೂಟದ ಸಿದ್ಧಾಂತ, ಉದ್ದೇಶ ಹಾಗೂ ಸೇವಾ ಮನೋಭಾವದ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು. ನೂತನವಾಗಿ ಆಯ್ಕೆಯಾದ ಸಂಚಾಲಕ ವಕೀಲ ನಜೀರ್ ಅಹ್ಮದ್ ಅವರಿಗೆ ಒಕ್ಕೂಟದ ಮೂಲ ತತ್ವಗಳು ಹಾಗೂ ಸಮುದಾಯ ಸೇವೆಯ ಜವಾಬ್ದಾರಿಗಳನ್ನು ವಿವರಿಸಿ, ನಿಸ್ವಾರ್ಥ ಸೇವಾ ಮನೋಭಾವದೊಂದಿಗೆ ಸಂಘಟನೆಯನ್ನು ಮುನ್ನಡೆಸುವಂತೆ ಸಭೆಯು ಸಲಹೆ ನೀಡಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಉಲ್ಲಾ, ಎಐಎಂಐಎಂನ ಮಹಮ್ಮದ್ ಅಲಿ ಶೋಯಿಬ್, ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಜ್, ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿಲ್ ಖಾನ್, ಬಿಜೆಪಿ ಮುಖಂಡ ಸಿ.ಆರ್. ನಸೀರ್ ಅಹ್ಮದ್, ಡಬ್ಲ್ಯೂಪಿಐ ಜಿಲ್ಲಾ ಉಪಾಧ್ಯಕ್ಷ ಶಾಬಾಜ್ ಮಹಮ್ಮದ್ ಜಾಫರ್, ಕರ್ನಾಟಕ ಸೋಷಿಯಲಿಸ್ಟ್ ಸರ್ವೀಸ್ ಸಂಘದ ಹಯಾತ್ ಎನ್, ಎನ್‌ಎಸ್‌ವಿಐ ಮುಖಂಡ ನೂರು ಅಹ್ಮದ್, ಇಂಡಿಯನ್ ಹೆಲ್ತ್ ಪಿಂಗ್ ಹ್ಯಾಂಡ್ ಅಧ್ಯಕ್ಷ ರಹಮತ್ ವುಲ್ಲಾ ಮಸೀದಿಮಾಜಿ ಮುತುವಲ್ಲಿ ಮೊಹಮ್ಮದ್ ಫಾರೂಕ್, ಸ್ಕಾರ್ಪ್ ಮರ್ಚೆಂಟ್ ಯೂನಿಯನ್ ಮುಖಂಡ ಮುನೀರ್, ಜವಾಹರ್ ಲಾಲ್ ಮಂಚ್ ರಾಜ್ಯ ಸಂಚಾಲಕ ಅಮ್ಜದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Read also : 2028 ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ : ಸಚಿವ ಜಮ್ಮೀರ್ ಅಹಮ್ಮದ್ 
ಸಭೆಯಲ್ಲಿ ಭಾಗವಹಿಸಿದವರು ಮುಸ್ಲಿಂ ಒಕ್ಕೂಟವು ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಸದಾ ಬದ್ಧವಾಗಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮುದಾಯದ ಏಕತೆ, ಶಾಂತಿ ಮತ್ತು ಸೇವೆಯನ್ನು ಕೇಂದ್ರಬಿಂದುವಾಗಿ ಇಟ್ಟುಕೊಂಡು ಕಾರ್ಯನಿರ್ವಹಿಸುವಂತೆ ನೂತನ ಸಂಚಾಲಕರಿಗೆ ಶುಭಾಶಯ ಕೋರಲಾಯಿತು.
ನೂತನ ಸಂಚಾಲಕರಾಗಿ ಆಯ್ಕೆಯಾದ ವಕೀಲ ನಜೀರ್ ಅಹ್ಮದ್ ಮಾತನಾಡಿ, ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಕೃತಜ್ಞತೆ ಸಲ್ಲಿಸಿ, ಮುಸ್ಲಿಂ ಒಕ್ಕೂಟದ ಸಿದ್ಧಾಂತಗಳಿಗೆ ಅನುಗುಣವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಭರವಸೆ ನೀಡಿದರು.
TAGGED:Davanagere Newsdinamaana.comKannada NewsMuslim Unionಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ಮುಸ್ಲಿಂ ಒಕ್ಕೂಟ
Share This Article
Twitter Email Copy Link Print
Previous Article Davanagere 2028 ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ : ಸಚಿವ ಜಮ್ಮೀರ್ ಅಹಮ್ಮದ್ 
Next Article Court ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 ದಾವಣಗೆರೆ, ಸೆ.5  (davanagere) :  ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ.ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

ದಾವಣಗೆರೆ|ಒಳ ಮೀಸಲಾತಿಯಲ್ಲಿ ಅನ್ಯಾಯ : ಅ.2ಕ್ಕೆ ಅಲೆಮಾರಿಗಳ ದೆಹಲಿ ಚಲೋ  

ದಾವಣಗೆರೆ : ‘ರಾಜ್ಯ ಸರ್ಕಾರದ‌ ಒಳ ಮೀಸಲಾತಿ ಅಲೆಮಾರಿಗಳ ಭವಿಷ್ಯವನ್ನು ಆತಂಕಕ್ಕೆ ತಳ್ಳಿದ್ದು, ಸೂಕ್ತ ಮೀಸಲಾತಿಗಾಗಿ ಆಗ್ರಹಿಸಿ, ಅಲೆಮಾರಿಗಳ ಒಕ್ಕೂಟದಿಂದ…

By Dinamaana Kannada News

ದಾವಣಗೆರೆ : ಸಹಾಯಧನ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.13: ಗ್ರಾಮಾಂತರ ಕೈಗಾರಿಕಾ ಕೇಂದ್ರದಿAದ ಪ್ರಸಕ್ತ ಸಾಲಿಗೆ ಅನುಮೋದಿತ ಕಾರ್ಯಕ್ರಮಗಳ ಪೈಕಿ ಸುಧಾರಿತ ಉಪಕರಣಗಳ ವಿತರಣೆಯಲ್ಲಿ ಹೊಲಿಗೆಯಂತ್ರ ವಿತರಣೆ,…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?