Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

Dinamaana Kannada News
Last updated: July 28, 2025 11:27 am
Dinamaana Kannada News
Share
Dr. Basavaprabhu Swamiji
SHARE
ದಾವಣಗೆರೆ : ಹಬ್ಬಗಳನ್ನು ಆಚರಣೆ ಮಾಡೋಣ. ಆದರೆ ಅವುಗಳನ್ನು ವೈಚಾರಿಕವಾಗಿ, ವೈಜ್ಞಾನಿಕವಾಗಿ, ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.
ನಗರದ ದೊಡ್ಡಪೇಟೆಯ ವಿರಕ್ತಮಠದಲ್ಲಿ ಸೋಮವಾರ ಶಿವಯೋಗಾಶ್ರಮ, ವಿರಕ್ತಮಠದ ಸಹಯೋಗದಲ್ಲಿ ಹಾಲು ಕುಡಿಸುವ ಹಬ್ಬ-ಬಸವ ಪಂಚಮಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಶ್ರೀಗಳು ಮಾತನಾಡಿದರು.
ನಾಗರಪಂಚಮಿ ಹಬ್ಬದ ಹೆಸರಿನಲ್ಲಿ ಇಡೀ ದೇಶದಾದ್ಯಂತ ನಮ್ಮ ಪಾಲು, ಅಜ್ಜ-ಅಜ್ಜಿ, ಅಪ್ಪ-ಅಮ್ಮ ಪಾಲು, ಹಿರಿಯ ಪಾಲು ಎಂದು ಕಲ್ಲ ನಾಗರಕ್ಕೆ, ಹುತ್ತಕ್ಕೆ ಹಾಲನ್ನು ಎರೆದು ಕೊನೆಗೆ ಹಾಲನ್ನು ಮಣ್ಣು ಪಾಲು ಮಾಡುತ್ತಾರೆ. ದೇವರ, ಧರ್ಮದ ಹೆಸರಿನಲ್ಲಿ ನಾವು ಸ್ವೀಕಾರ ಮಾಡುವಂತಹ ಹಾಲು, ತುಪ್ಪ, ಮೊಸರು, ಎಳೆನೀರು, ಜೇನುತುಪ್ಪವನ್ನು ವ್ಯರ್ಥ ಮಾಡಬಾರದು. ಹಾಲನ್ನು ಎರೆಯುವುದರಿಂದ ದೇವರು ಸಂತೃಪ್ತರಾಗುವುದಿಲ್ಲ. ಅದೇ ಹಾಲನ್ನು ವ್ಯರ್ಥ ಮಾಡದೇ ಮಕ್ಕಳಿಗೆ, ರೋಗಿಗಳಿಗೆ, ಅನಾಥರಿಗೆ, ವಯೋವೃದ್ಧರಿಗೆ, ಬಡವರಿಗೆ ಅವರಿಗೆ ಹಾಲನ್ನು ಕೊಟ್ಟಿದ್ದೇ ಆದರೆ ದೇವರಿಗೆ ಸಂತೃಪ್ತಿಯಾಗುತ್ತದೆ ಎಂದರು.
ಬಸವಣ್ಣನವರ ವಚನದಂತೆ ಕಲ್ಲ ನಾಗರ ಕಂಡರೆ, ಹಾಲನೆರೆಯಂಬರು, ದಿಟದ ನಾಗರ ಕಂಡರೆ ಕೊಲ್ಲು, ಕೊಲ್ಲೆಂಬರು. ಅದೇ ಹಸಿವಾದವರು ಬಂದರೆ ಮುಂದಕ್ಕೆ ಹೋಗು ಎನ್ನುತ್ತಾರೆ. ಹಬ್ಬಗಳ ಆಚರಣೆ ಮಾಡುವುದು ತಪ್ಪಲ್ಲ, ಯಾರು ಹಸಿದಂತಹವರು ಇರುತ್ತಾರೆ ಅವರಿಗೆ ಅನ್ನವನ್ನು ಕೊಡಿ. ಉಣಲಾರದವರಿಗೆ ನೈವೇದ್ಯ ಮಾಡುವ ಬದಲು ಉಣ್ಣುವವರಿಗೆ ಕೊಡಿ ಎಂದು ಧರ್ಮದ ಸಂದೇಶವನ್ನು ಬಸವಣ್ಣನವರು ಕೊಟ್ಟಿದ್ದಾರೆ. ಹಾಲು ಪೌಷ್ಟಿಕಾಂಶಯುಕ್ತ ಆಹಾರ. ಮಕ್ಕಳು ಹಾಲನ್ನು ಕುಡಿಯುವುದರಿಂದ ದೈಹಿಕವಾಗಿ, ಸದೃಢರಾಗಿ ಬೆಳೆಯುತ್ತಾರೆ. ಮೂಳೆಗಳು ಗಟ್ಟಿಯಾಗುತ್ತವೆ. ದೇಹಕ್ಕೆ ಶಕ್ತಿ ಬರುತ್ತದೆ. ನಿತ್ಯ ಹಾಲನ್ನು ಸೇವಿಸುವುದರಿಂದ ಆರೋಗ್ಯವಂತರಾಗಿರುತ್ತೀರಿ. ನಮ್ಮ ದೇಶದಲ್ಲಿ ಬಹಳಷ್ಟು ಮೂಢನಂಬಿಕೆಗಳಿವೆ ಅವುಗಳೇ ನಮ್ಮ ಪ್ರಗತಿಗೆ ಶತ್ರುಗಳಾಗಿವೆ. ಮೌಡ್ಯಗಳನ್ನು ಬಿಟ್ಟು ಬಸವತತ್ವದ ಮೌಲ್ಯಗಳನ್ನು ಆಚರಣೆ ಮಾಡೋಣ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಗರ ಪಂಚಮಿ ಹಬ್ಬದ ಹೆಸರಿನಲ್ಲಿ ಅಮೃತಕ್ಕೆ ಸಮನಾದ ಹಾಲನ್ನು ಹುತ್ತಕ್ಕೆ ಹಾಕಿ ವ್ಯರ್ಥ ಮಾಡುವ ಬದಲು ನಿಮ್ಮಂತಹ ಮಕ್ಕಳಿಗೆ ಕೊಡುವಂತಹ ಕೆಲಸವನ್ನು ಬಸವ ಕೇಂದ್ರ ಇಂದು ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಇದು ಕೇವಲ ನಮಗೆ ಬರೀ ಹಬ್ಬವಾಗಿ ಇರಬಾರದು. ನಮಗೆ ಸಂಸ್ಕೃತಿ, ನಾಗರಿಕತೆ ಹೇಗೆ ಬಂದಿದೆ ಎಂಬುದನ್ನು ತಿಳಿದುಕೊಳ್ಳಬೇಕು. ನಾವು ಯಾವುದೇ ಒಂದು ವಿಷಯವನ್ನು ವೈಜ್ಞಾನಿಕವಾಗಿ ತಿಳಿದುಕೊಂಡಾಗ ಅದಕ್ಕೆ ಒಂದು ಅರ್ಥ ಇರುತ್ತದೆ. ಯಾವುದೇ ವಿಷಯವಾಗಿರಲಿ ಅರ್ಥ ಮಾಡಿಕೊಳ್ಳದೇ ಓದಬಾರದು. ಸುಮ್ಮನೆ ಅದನ್ನು ನಂಬಬಾರದು. ಗೊತ್ತಾಗದಿದ್ದರೆ ನಿಮ್ಮ ಶಿಕ್ಷಕರನ್ನು ಕೇಳಿ ತಿಳಿದುಕೊಳ್ಳಬೇಕು. ಇದರಿಂದ ಬರೀ ಶಿಕ್ಷಣ ಅಷ್ಟೇ ಸಿಗಲ್ಲ. ಇದರೊಂದಿಗೆ ಜೀವನದಲ್ಲಿ ಹೇಗೆ ಇರಬೇಕು ಎಂಬ ಬಗ್ಗೆ ನೈತಿಕ ಶಿಕ್ಷಣ ಸಹಾ ಸಿಗುತ್ತದೆ ಎಂದರು.
Read also : 22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ
ಇದು ನಿಮ್ಮ ಜೀವನ ಎಂಬ ಕಟ್ಟಡದ ಬುನಾದಿ(ಫೌಂಡೇಷನ್) ಇದ್ದಂತೆ. ನೀವು ಯಾವುದೇ ತರಗತಿಗಳಲ್ಲಿ ಇರಲಿ, ಅಲ್ಲಿ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಇದರಿಂದ ಮುಂದಿನ ತರಗತಿಗಳಿಗೆ ಹೋದಾಗ ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತವೆ. ಮಕ್ಕಳಲ್ಲಿ ದೊಡ್ಡ ದೊಡ್ಡ ಆಲೋಚನೆಗಳನ್ನು, ಮೌಲ್ಯಗಳನ್ನು ಬೆಳೆಸಿಕೊಳ್ಳುವಂತಹ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ಆಶಿಸಿದರು.
ಪ್ರವಚನಕಾರರಾದ ಬಿ.ಎಂ.ಪಂಚಾಕ್ಷರಿ ಶಾಸ್ತ್ರೀಗಳು , ಶಿವಯೋಗಾಶ್ರಮ ಟ್ರಸ್ಟಿನ ಸಹ ಕಾರ್ಯದರ್ಶಿ ಎಸ್.ಓಂಕಾರಪ್ಪ, ಮುರುಘರಾಜೇಂದ್ರ ಬ್ಯಾಂಕಿನ ಉಪಾಧ್ಯಕ್ಷ ಎಚ್.ವಿ.ಮಂಜುನಾಥ  ಸ್ವಾಮಿ,  ಲಂಬಿ ಮುರುಗೇಶ,  ಹಾಸಬಾವಿ ಕರಿಬಸಪ್ಪ, ಕಣಕುಪ್ಪಿ ಮುರುಗೇಶ, ಟಿ.ಎಂ.ವೀರೇಂದ್ರ, ಚಿಗಟೇರಿ ಜಯದೇವ, ನಸೀರ್ ಅಹಮದ್, ಮಹಿಳಾ ಬಸವ ಕೇಂದ್ರದ ಮಹಾ ದೇವಮ್ಮ, ಕುಂಟೋಜಿ ಚನ್ನಪ್ಪ, ಕೆ.ಸಿ.ಉಮೇಶ, ಚನ್ನಬಸವ ಶೀಲವಂತ್, ಬೆಳ್ಳೂಡಿ ಮಂಜುನಾಥ ಶ್ರೀಮಠದ ಭಕ್ತರು, ಶಾಲಾ ಶಿಕ್ಷಕರು, ಮಕ್ಕಳು ಇದ್ದರು.
TAGGED:Davanagere NewsDinamana.comDr. Basavaprabhu SwamijiShivayoga Ashramvirkathamataಡಾ.ಬಸವಪ್ರಭು ಸ್ವಾಮೀಜಿವಿರಕ್ತಮಠಶಿವಯೋಗಾಶ್ರಮ
Share This Article
Twitter Email Copy Link Print
Previous Article 22 Lake Lift Irrigation Project 22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ
Next Article Davanagere ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

ದಾವಣಗೆರೆ (Davanagere) : ಹಳೇಬೇರು, ಹೊಸಚಿಗರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

By Dinamaana Kannada News

ವರ್ಲ್ಡ್ ಬ್ಯಾಂಕ್ ಸಿಎಸ್ ಪಿಎಫ್ ಚುನಾವಣೆ ಕಣದಲ್ಲಿ ದಾವಣಗೆರೆಯ ಡಾ.ಎಲ್.ರಾಕೇಶ್

ದಾವಣಗೆರೆ (Davanagere): ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆಯುತ್ತಿರುವ ವಿಶ್ವಬ್ಯಾಂಕ್ ಸಿವಿಲ್‌ ಸೊಸೈಟಿ ಪಾಲಿಸಿ ಫೋರಂ (ಸಿಎಸ್‌ಪಿಎಫ್) 2024-2026 ಅಧಿಕಾರಾವಧಿ ವರ್ಕಿಂಗ್ ಗ್ರೂಪ್…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

You Might Also Like

Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
22 Lake Lift Irrigation Project
ತಾಜಾ ಸುದ್ದಿ

22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?