Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಐತಿಹಾಸಿಕ ಕಾದಂಬರಿಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ : ಡಾ.ಪ್ರಭಾ ಮಲ್ಲಿಕಾರ್ಜುನ್ 
ತಾಜಾ ಸುದ್ದಿ

Davanagere | ಐತಿಹಾಸಿಕ ಕಾದಂಬರಿಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ : ಡಾ.ಪ್ರಭಾ ಮಲ್ಲಿಕಾರ್ಜುನ್ 

Dinamaana Kannada News
Last updated: October 26, 2024 11:36 am
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere):  ಸೂಳೆಕೆರೆ ನಮ್ಮ ಜಿಲ್ಲೆಯ ಐತಿಹಾಸಿಕ ಹೆಮ್ಮೆ. ಈ ಕೆರೆ ಕುರಿತು ಒಂದು ಸಂಶೋಧನಾತ್ಮಕ ಕೃತಿ ಬೇಕಿತ್ತು. ಇದುವರೆಗೂ ಇಂತಹ ಪ್ರಯತ್ನ ನಡೆದಿಲ್ಲ. ಇದೀಗ ದಾವಣಗೆರೆಯ ಪ್ರತಿಭಾನ್ವಿತ ಸಾಹಿತಿ, ಯುವ ಪೀಳಿಗೆಯ ಬರಹಗಾರ ಶಾಂತಾದೇವಿ ಕಾದಂಬರಿ ಪರಿಪೂರ್ಣವಾಗಿ ಕಟ್ಟಿಕೊಡಲಿದ್ದಾರೆ ಎಂದು ದಾವಣಗೆರೆ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಪಾಪುಗುರು ರಚನೆಯ ಉಷಾ ಪ್ರಕಾಶನದಿಂದ ಹೊರ ಬರುತ್ತಿರುವ ಸೂಳೆಕೆರೆಯ ಐತಿಹಾಸಿಕ ಕಾದಂಬರಿ ಶಾಂತಾದೇವಿ ಮುಖಪುಟವನ್ನು ಅನಾವರಣಗೊಳಿಸಿ ರವರು ಮಾತನಾಡಿದರು.

ಸೂಳೆಕೆರೆ ಈ ಭಾಗದ ರೈತರಿಗೆ ನೀರಿನ ಜೊತೆಗೆ ನಮ್ಮೆಲ್ಲರ ಸಾಂಸ್ಕೃತಿಕ ಪ್ರತಿಷ್ಠೆಯೂ ಹೌದು. ಇದು ಮಾನವ ನಿರ್ಮಿತ ಕೆರೆಯಾಗಿದ್ದು ಈ ಕೆರೆಯ ಬಗ್ಗೆ ಅನೇಕ ಐತಿಹ್ಯ ಕಥೆಗಳಿವೆ. ಆದರೆ, ಸೂಳೆಕೆರೆಯ ಐತಿಹಾಸಿಕ ಕಾದಂಬರಿ ಶಾಂತಾದೇವಿ ಇದು ಐತಿಹಾಸಿಕವಾಗಿ ಮಹತ್ವವನ್ನು ಪಡೆಯಲಿದೆ. ಜೊತೆಗೆ ಒಂದು ಆಕರ ಗ್ರಂಥವಾಗಿಯೂ ಉಳಿಯಲಿದೆ ಎಂದರು.

ಹಿರಿಯ ಸಾಹಿತಿಗಳು ಹಾಗೂ ಪತ್ರಕರ್ತರಾದ ಬಿ ಎನ್ ಮಲ್ಲೇಶ್ ಮಾತನಾಡಿ, ಸಾಹಿತ್ಯದ ಪ್ರಕಾರದಲ್ಲಿ ಕಾದಂಬರಿಯ ರಚನೆಯೂ ಸುದೀರ್ಘ ಕೆಲಸವಾಗಿದ್ದು ಅದರಲ್ಲೂ ಐತಿಹಾಸಿಕ ಕಾದಂಬರಿಗಳು ಆ ಪ್ರದೇಶದ ನೆಲ ಜಲ, ಆರ್ಥಿಕತೆ, ಆಮದು, ರಫ್ತು, ಉತ್ಪಾದನೆ ಈ ಎಲ್ಲಾ ಮೂಲಗಳನ್ನು ಕಟ್ಟಿಕೊಡುವ ಮೂಲಕ ಆ ಪ್ರದೇಶದ ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಕೆಲಸಗಳನ್ನು ಮಾಡುತ್ತವೆ ಎಂದರು.

Read also : Davanagere | ಕನ್ನಡ ಜ್ಯೋತಿ ರಥ ಯಾತ್ರೆಗೆ ಕುರ್ಕಿ ಗ್ರಾಮದಲ್ಲಿ ಅದ್ದೂರಿ ಸ್ವಾಗತ

ಲೇಖಕ ಪಾಪುಗುರು ಮಾತನಾಡಿ, ಈ ಕಾದಂಬರಿಯ ನಿರ್ಮಾಣಕ್ಕೆ, ಸ್ಥಳಪುರಾಣ, ಜಾಗನ್ವೇಷಣೆ, ಜನಸಂಪರ್ಕ ಮಾಡಿ ಸುದೀರ್ಘ ಸಮಯ ವ್ಯಯ ಮಾಡಿ ಕೃತಿ ರಚನೆಗೆ ಕೈ ಹಾಕಿದ್ದೇನೆ. ಸಾಕಷ್ಟು ಅಧ್ಯಯನದ ನಂತರ ಹೊರ ಬರುತ್ತಿರುವ ಈ ಕಾದಂಬರಿ ಸೂಳೆಕೆರೆ ನಿರ್ಮಾಣದ ಬಗ್ಗೆ ಒಂದು ಸಂಪೂರ್ಣ ಚಿತ್ರಣವನ್ನು ಓದುಗರಿಗೆ ಕಟ್ಟಿಕೊಡಲಿದೆ ಎಂದರು.

ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ್ ಬಡದಾಳ, ಸಾಹಿತಿಗಳಾದ ಸಂತೆಬೆನ್ನೂರು ಫೈಜ್ನಟ್ರಾಜ್, ಸುಬ್ರಹ್ಮಣ್ಯ ಭದ್ರಾವತಿ, ಸನಾವುಲ್ಲಾ ನವಿಲೇಹಾಳ್, ಫಕೀರೇಶ ಆದಾಪುರ, ಹಾಗೂ ಮೊಹಮ್ಮದ್ ರಫಿ ಹಾಜರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Kurki Village for Kannada Jyoti Ratha Yatra Davanagere | ಕನ್ನಡ ಜ್ಯೋತಿ ರಥ ಯಾತ್ರೆಗೆ ಕುರ್ಕಿ ಗ್ರಾಮದಲ್ಲಿ ಅದ್ದೂರಿ ಸ್ವಾಗತ
Next Article davanagere Davanagere | ಕರಾಟೆ ಸ್ಪರ್ಧೆ : ನಿಧಿ ಬೇತೂರ್, ಸಮರ್ಥ್ ಬೇತೂರ್‌ಗೆ ಚಿನ್ನದ ಪದಕಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಾಲ ನ್ಯಾಯ ಮಂಡಳಿ:ಜಿ.ಎಂ.ರೂಪ,ಲಕ್ಷ್ಮೀ ನೇಮಕ

ದಾವಣಗೆರೆ.ಡಿ.3 : ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯರನ್ನಾಗಿ ಸಾಮಾಜಿಕ ಕಾರ್ಯಕರ್ತೆ ಹರಿಹರದ ಶ್ರೀಮತಿ ಜಿ.ಎಂ.ರೂಪ ಮತ್ತು ದಾವಣಗೆರೆಯ ವಕೀಲರಾದ…

By Dinamaana Kannada News

Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್

ದಾವಣಗೆರೆ ಸೆ.17  (Davanagere): ನಮ್ಮ ದೇಹವನ್ನು ಹೇಗೆ ಶುದ್ಧೀಕರಣ ಮಾಡಿಕೊಳ್ಳುತ್ತೀವೋ ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರ,ಮನೆ ಹಾಗೂ ನಮ್ಮೂರ ಸ್ವಚ್ಛತೆ…

By Dinamaana Kannada News

ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ

ದಾವಣಗೆರೆ: ‘ಶಾಲೆಯ ಸುತ್ತಲೂ ಕಪ್ಪು ಹೋಗೆ ಸೂಸುವ ವಿಷಪೂರಿತ ಮಂಡಕ್ಕಿ ಭಟ್ಟಿಗಳು, ಕಸ, ಧೂಳುನಿಂದ ಕೂಡಿದ ಗಾಳಿ ವಾತಾವರಣ, ಇಂತಹ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?