Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು
ತಾಜಾ ಸುದ್ದಿ

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

Dinamaana Kannada News
Last updated: July 15, 2024 3:36 am
Dinamaana Kannada News
Share
davanagere
ಮಾದಿಗ ದಂಡೋರ ಜಿಲ್ಲಾ ಸಮಿತಿ ದಾವಣಗೆರೆ
SHARE

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ ಪ್ರತಿನಿಧಿಗಳು, ಪಾಲಿಕೆ, ಜಿಲ್ಲಾಡಳಿತದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಮಾದಿಗ ದಂಡೋರ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಎಚ್.ಸಿ.ಗುಡ್ಡಪ್ಪ ಎಚ್ಚರಿಸಿದರು.

ನಗರದ ಅಶೋಕ ರಸ್ತೆಯ ಮಾದಿಗ ದಂಡೋರ ಸಮಿತಿ ಜಿಲ್ಲಾ ಕಚೇರಿಯಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾ ಕೇಂದ್ರದಲ್ಲಿ ನೆನೆಗುದಿಗೆ ಬಿದ್ದಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಜಿಲ್ಲಾಡಳಿತ, ಪಾಲಿಕೆಗೆ ಒಂದು ವಾರದ ಗಡುವು ನೀಡಿದೆ.

ಸಭೆಯಲ್ಲಿ ಮಾತನಾಡಿದ ಎಚ್.ಸಿ.ಗುಡ್ಡಪ್ಪ, ನಗರದಲ್ಲಿ ಡಾ.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಳೆದ 2 ದಶಕಗಳಿಂದಲೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿ, ಸಾರ್ವಜನಿಕರು ಹೋರಾಟ ನಡೆಸಿಕೊಂಡು, ಜಿಲ್ಲಾಡಳಿತ, ಪಾಲಿಕೆ, ಜನ ಪ್ರತಿನಿಧಿಗಳಿಗೆ ಮನವಿ ಮಾಡುತ್ತಲೇ ಬಂದಿದ್ದರೂ ಅಂಬೇಡ್ಕರ್ ಭವನ ವಿಚಾರ ಮಾತ್ರ ಸಂಪೂರ್ಣ ನೆನೆಗುದಿಗೆ ಬಿದ್ದಿದೆ. ಅಂಬೇಡ್ಕರ್ ಭವನದ ಬಗ್ಗೆ ಜನ ಪ್ರತಿನಿಧಿಗಳು, ಅಧಿಕಾರಿಗಳಿಗೆ ಯಾಕಿಷ್ಟು ಅಸಡ್ಡೆ ಎಂದು ಪ್ರಶ್ನಿಸಿದರು.

ಇಡೀ ಜಗತ್ತೇ ಒಪ್ಪುವಂತಹ ಸಂವಿಧಾನ ಕೊಟ್ಟಂತಹ ವಿಶ್ವ ನಾಯಕ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮುದಾಯಗಳ ಬಡವರ ಪರ ಜೀವಿತಾವದಿಯುದ್ದಕ್ಕೂ ಹೋರಾಟ ನಡೆಸಿದ ಅಂಬೇಡ್ಕರ್ ಹೆಸರಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಒಂದು ಸಮುದಾಯ ಭವನ ಇಲ್ಲದಿರುವುದು ದುರಂತ. ವಿದ್ಯಾರ್ಥಿ, ಯುವಜನರು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿರ್ಲಕ್ಷ್ಯ ತೋರುತ್ತಿರುವುದನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ ತೀವ್ರ ಹೋರಾಟಕ್ಕೆ ತೀರ್ಮಾನಿಸಲಾಗಿದೆ. ಜು.31ರ ಒಳಗಾಗಿ ಅಂಬೇಡ್ಕರ್ ಭವನ ನಿರ್ಮಿಸಲು ಶಂಕು ಸ್ಥಾಪನೆ ನೆರವೇರಿಸದಿದ್ದರೆ, ಮಾದಿಗ ದಂಡೋರ ಸಮಿತಿಯು ಎಲ್ಲಾ ಸಂಘಟನೆಗಳು, ಸಮುದಾಯಗಳ ಮುಖಂಡರ ಜೊತೆಗೆ ಚರ್ಚಿಸಿ, ದಾವಣಗೆರೆ ಮಹಾ ನಗರ ಬಂದ್ ಸೇರಿದಂತೆ ವಿವಿಧ ಹಂತದ ಹೋರಾಟಕ್ಕೆ ನಿರ್ಧಾರ ಮಾಡಿದೆ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ ಮೊದಲ ಸಲ ಸಿಎಂ ಆಗಿದ್ದಾಗ ಆಗಿನ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಇಲ್ಲಿನ ಪಿಬಿ ರಸ್ತೆಯ ಉಪ ವಿಭಾಗಾಧಿಕಾರಿ ಕಚೇರಿ ಪಕ್ಕದ ಲೋಕೋಪಯೋಗಿ ಇಲಾಖೆ ಸ್ವಾಧೀನದ ನಿವೇಶನವನ್ನ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವಂತೆ, ಅಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಮುಂದಾಗಿದ್ದರು. ಆಗಿನ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅದು ಕಾರ್ಯ ರೂಪಕ್ಕೆ ಬರದಂತೆ ತಡೆದಿವೆ ಎಂದು ಅವರು ಆರೋಪಿಸಿದರು.

ದಶಕಗಳ ಬೇಡಿಕೆಯಾದ ಅಂಬೇಡ್ಕರ್ ಭವನಕ್ಕೆ ಇಂದಿಗೂ ಸ್ಥಳ ನಿಗದಿಯಾಗಿಲ್ಲ, ಜಾಗ ಗುರುತಿಸಿಲ್ಲ. ಬರೀ ಆಶ್ವಾಸನೆಗಳನ್ನು ನೀಡುತ್ತಲೇ ಇಡೀ ದಲಿತ ಸಮುದಾಯವನ್ನು ಅವಮಾನಿಸುತ್ತಾ ಬಂದ ಜಿಲ್ಲಾಡಳಿತ, ಪಾಲಿಕೆ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ. ಅಂಬೇಡ್ಕರ್ ಭವನಕ್ಕಾಗಿ ಮಾದಿಗ ದಂಡೋರ ಸಮಿತಿ ಯಾವುದೇ ಹಂತದ ಹೋರಾಟಕ್ಕೂ ಸಿದ್ಧವಾಗಿದೆ. ಜು.31ರ ಒಳಗಾಗಿ ಅಂಬೇಡ್ಕರ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ರೆ ತೀವ್ರ ಹೋರಾಟ ಮಾತ್ರ ನಿಶ್ಚಿತ ಎಂದು ಎಚ್.ಸಿ.ಗುಡ್ಡಪ್ಪ ಎಚ್ಚರಿಸಿದರು.

ಸಮಿತಿ ಉಪಾಧ್ಯಕ್ಷ ಎಚ್.ಚಿದಾನಂದಪ್ಪ ಮಾತನಾಡಿ, ಮಾದಿಗ ಸಮುದಾಯದ ರಮೇಶ ಜಿಗಜಿಣಗಿ 7 ಸಲ ಸಂಸದರಾದರೂ ಕೇಂದ್ರ ಸಚಿವ ಸ್ಥಾನ ನೀಡದೇ ಬಿಜೆಪಿ ಸರ್ಕಾರ ಅವಮಾನಿಸಿದೆ. ತಕ್ಷಣವೇ ಬಿಜೆಪಿ ವರಿಷ್ಟರು ರಮೇಶ ಜಿಗಜಿಣಗಿಯವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಮಿತಿ ಪದಾಧಿಕಾರಿಗಳಾದ ಬಿ.ಮಲ್ಲೇಶಪ್ಪ, ಎಂ.ಡಿ.ಶಿವಕುಮಾರ, ಹುಚ್ಚವನಹಳ್ಳಿ ಚಂದ್ರಪ್ಪ, ಕಳವೂರು ರಂಗಪ್ಪ ಇತರರು ಇದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article dinamaana movie ಅಪ್ಪು ಕಪ್ ಸೀಸನ್ 2″ ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ  
Next Article Davanagere ಸಿ.ಪಿ.ಸತೀಶ ಕುಮಾರ್‌ ಅವರಿಗೆ ಮಾತೃ ವಿಯೋಗ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕನ್ನಡದ ಕಂಪು ಗ್ರಾಮೀಣದಲ್ಲಿ ಉಳಿದಿದೆ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ 

ಹರಿಹರ: ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕನ್ನಡದ ಕಂಪು ಉಳಿದಿದೆ ಎಂದು ಬೆಂಗಳೂರು ಸಂಸ್ಕøತ ವಿವಿ ಮಾಜಿ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್…

By Dinamaana Kannada News

Davanagere | ಡಯಾಲಿಸಿಸ್‌ ರೋಗಿಗಳಿಗೆ ಉಚಿತ ವಾಹನ ಸೇವೆಗೆ ಚಾಲನೆ

ದಾವಣಗೆರೆ (Davangere District): ಇಲ್ಲಿನ ಎಸ್.ಎಸ್‌.ನಾರಾಯಣ ಹೆಲ್ತ್‌ ಆಸ್ಪತ್ರೆ ವತಿಯಿಂದ ಡಯಾಲಿಸಿಸ್‌ ರೋಗಿಗಳಿಗೆ ಉಚಿತ ವಾಹನ ಸೇವೆಗೆ ಗುರುವಾರ ಸಂಸದೆ…

By Dinamaana Kannada News

DAVANAGERE Electrical variation : ವಿದ್ಯುತ್ ವ್ಯತ್ಯಯ

ದಾವಣಗೆರೆ.ಆ.02  (Davangere district )   :   ಜಲಸಿರಿ  (Jalsiri) ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?