Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಮೇಯರ್ ಕೆ. ಚಮನ್ ಸಾಬ್
ತಾಜಾ ಸುದ್ದಿ

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ 38ನೇ ವಾರ್ಡ್ ಮಾದರಿ: ಮೇಯರ್ ಕೆ. ಚಮನ್ ಸಾಬ್

Dinamaana Kannada News
Last updated: October 9, 2024 10:58 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere) : ನಗರದ ಎಂಸಿಸಿ ಬಿ ಬ್ಲಾಕ್ ನ ವಿವಿಧ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್ ಸಾಬ್, ಉಪಮೇಯರ್ ಸೋಗಿ ಶಾಂತಕುಮಾರ್, ಆಯುಕ್ತೆ ರೇಣುಕಾ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಾರ್ಡ್ ನ ಸ್ವಚ್ಛತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಕೆ. ಚಮನ್ ಸಾಬ್ ಅವರು, ಪಾಲಿಕೆಯ ಅಧಿಕಾರಿಗಳೊಂದಿಗೆ ಎಲ್ಲಾ ವಾರ್ಡ್ ಗಳಿಗೆ ಭೇಟಿ ನೀಡುತ್ತಿದ್ದೇವೆ. ವಾರ್ಡ್ ಗಳಲ್ಲಿನ ಸಮಸ್ಯೆಗಳನ್ನು ತಿಳಿಯುವ ಕೆಲಸ ಮಾಡಲಾಗುತ್ತಿದೆ. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ವಾರ್ಡ್ ಗಳಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಎಂಸಿಸಿ ಬಿ ಬ್ಲಾಕ್ ವಾರ್ಡ್ ನ ಪ್ರದೇಶಗಳಿಗೆ ಭೇಟಿ ನೀಡಿದ್ದು, ಇಲ್ಲಿನ ಸ್ವಚ್ಛತೆ ಮೆಚ್ಚುವಂಥದ್ದು. ಇದೊಂದು ಮಾದರಿ ವಾರ್ಡ್ ಎಂದರೂ ತಪ್ಪಾಗಲಾರದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವಾರ್ಡ್ ಜನರ ಕುಂದುಕೊರತೆ ಆಲಿಸುವ ಜೊತೆಗೆ ಸ್ವಚ್ಥತೆ, ಕಸ ನಿರ್ವಹಣೆ, ರಸ್ತೆಗಳಲ್ಲಿ ಗುಂಡಿ ಬೀಳದಂತೆ ಎಚ್ಚರ ವಹಿಸುವುದೂ ಸೇರಿದಂತೆ ಹೆಚ್ಚಿನ ಅನುದಾನ ತಂದು ಉತ್ತಮ ಕಾರ್ಯ ಮಾಡುತ್ತಿರುವ ಪಾಲಿಕೆ ಸದಸ್ಯರೂ ಆದ ಆಡಳಿತ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ಅವರ ಕಾರ್ಯವೈಖರಿ ಪ್ರಶಂಸನೀಯ. ಜನರೊಂದಿಗಿನ ಒಡನಾಟ, ಅಭಿವೃದ್ಧಿ ಕಾರ್ಯಗಳು, ಶುಚಿತ್ವಕ್ಕೆ ಜಾಸ್ತಿ ಆದ್ಯತೆ ನೀಡಲಾಗಿದೆ. ನಾವು ನೋಡಿದಾಗಲೇ ಇದು ಗೊತ್ತಾಗುತ್ತದೆ. ಮಾದರಿ ವಾರ್ಡ್ ಮಾತ್ರವಲ್ಲ, ಮಾದರಿ ಕಾರ್ಪೊರೇಟರ್ ಎಂಬ ಪ್ರಶಸ್ತಿ ನೀಡಬಹುದು. ಅಷ್ಟು ಶುದ್ಧವಾಗಿ ವಾರ್ಡ್ ಇದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಯ ಆಯುಕ್ತೆ ರೇಣುಕಾ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿನ ಕೆಲ ವಾರ್ಡ್ ಗಳಲ್ಲಿ ಶುಚಿತ್ವದ ಸಮಸ್ಯೆ ಇದೆ. ಕಸ ವಿಲೇವಾರಿಯ ತೊಂದರೆಯೂ ಆದೆ. ಆದ್ರೆ, ಎಂಸಿಸಿ ಬಿ ಬ್ಲಾಕ್ ನಲ್ಲಿ ಈ ರೀತಿಯ ಸಮಸ್ಯೆಗಳು ಇಲ್ಲ. ಕಸ ನಿರ್ವಹಣೆ ತುಂಬಾ ಚೆನ್ನಾಗಿ ಆಗುತ್ತಿದೆ. ಇದು ಹೀಗೆ ಮುಂದುವರಿಯಲಿ. ಮತ್ತಷ್ಟು ಒಳ್ಳೆಯ ಕೆಲಸ ಆಗಲಿ ಎಂದು ಹಾರೈಸಿದರು.

ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಅವರು ಮಾತನಾಡಿ, ವಾರ್ಡ್ ನಲ್ಲಿನ ಸ್ವಚ್ಛತೆಗೆ ಜನರು ನೀಡಿದ ಸಹಕಾರವೇ ಕಾರಣ. ಕಸ ವಿಲೇವಾರಿಯ ಯಾವುದೇ ಸಮಸ್ಯೆ ಇಲ್ಲ. ನಾಗರಿಕರು ನೀಡಿದ ಸೂಚನೆಯನ್ನು ಪಾಲಿಸುತ್ತಿದ್ದಾರೆ. ಇದರಿಂದಾಗಿಯೇ ವಾರ್ಡ್ ಇಷ್ಟೊಂದು ಶುಚಿತ್ವದಿಂದ ಇರಲು ಸಾಧ್ಯವಾಗಿದೆ.

Read also : Relationship | ಸಂಬಂಧಗಳೆಂದರೆ ಹೀಗೆಕೇ…?

ಏನೇ ಸಮಸ್ಯೆ ಇದ್ದರೂ ಕೂಡಲೇ ಸ್ಪಂದಿಸುವ ಕಾರ್ಯ ಮಾಡಲಾಗುತ್ತಿದೆ. ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಈಗಾಗಲೇ ವಾರ್ಡ್ ನ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಅನುದಾನ ನೀಡಲಿದ್ದಾರೆ. ಒಟ್ಟಾರೆ ವಾರ್ಡ್ ನ ಮತ್ತಷ್ಟು ಸರ್ವತೋಮುಖ ಅಭಿವೃದ್ಧಿಗೆ ಕಟಿಬದ್ಧನಾಗಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಸೂಪರಿಟೆಡೆಂಟ್ ಎಂಜಿನಿಯರ್, ಎಕ್ಸಿಕ್ಯೂಟೀವ್ ಇಂಜಿನಿಯರ್, ಎಇ, ಎಇಇ, ವಾಟರ್ ವಿಭಾಗದ ಸಿಬ್ಬಂದಿ, ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Relationship | ಸಂಬಂಧಗಳೆಂದರೆ ಹೀಗೆಕೇ…?
Next Article DAVANAGERE ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಜಾರಿಯಾಗಲಿ: ಜಿ. ಬಿ. ವಿನಯ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭವಿಷ್ಯದಲ್ಲಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಿ

ದಾವಣಗೆರೆ:  ಶಿಕ್ಷಣ ಪಡೆಯುವ ಜೊತೆಗೆ ಮಕ್ಕಳು ನಾಯಕತ್ವ ಗುಣ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಬೇಕೆಂದು ಮಹಾನಗರಪಾಲಿಕೆ ಮಾಜಿ ವಿಪಕ್ಷದ…

By Dinamaana Kannada News

Harihara | ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಶಾಹಿನಾ ದಾದಾಪೀರ್

ದಾವಣಗೆರೆ (Davanagere):ಹರಿಹರ ನಗರಸಭೆಯ ಮಾಜಿ ಅಧ್ಯಕ್ಷ್ಯೆ  ಶ್ರೀಮತಿ ಶಾಹಿನಾ ದಾದಾಪೀರ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದು,  ಜಿಲ್ಲಾ…

By Dinamaana Kannada News

ಭದ್ರಾ ಜಲಾಶಯದಲ್ಲಿ 175.6 ಅಡಿ ನೀರು  

Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Davanagere
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dr. Guruprasad
ಆರೋಗ್ಯ

ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?