Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸ್ವಾಭಿಮಾನಕ್ಕೆ ಬಡತನ ಇರಬಾರದು, ಶ್ರೀಮಂತಿಕೆ ಇರಬೇಕು: ಜಿ. ಬಿ. ವಿನಯ್ ಕುಮಾರ್ ಸಲಹೆ
ತಾಜಾ ಸುದ್ದಿ

ಸ್ವಾಭಿಮಾನಕ್ಕೆ ಬಡತನ ಇರಬಾರದು, ಶ್ರೀಮಂತಿಕೆ ಇರಬೇಕು: ಜಿ. ಬಿ. ವಿನಯ್ ಕುಮಾರ್ ಸಲಹೆ

Dinamaana Kannada News
Last updated: January 31, 2025 1:20 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಸಂಪಾದಿಸಿಕೊಳ್ಳಿ. ಜ್ಞಾನ ಮತ್ತು ಒಳ್ಳೆಯ ಶಿಕ್ಷಣ ಪಡೆಯುವ ಮೂಲಕ ಸ್ವತಂತ್ರ ಮತ್ತು ಧೈರ್ಯದಿಂದ ಸ್ವಾವಲಂಬಿಗಳಾಗಿ ಬದುಕಬೇಕು. ಯಾರ ಮುಂದೆಯೂ ಕೈಚಾಚಬೇಡಿ. ಇಂದಿನ ಪ್ರಪಂಚದಲ್ಲಿ ಜ್ಞಾನ, ಶಿಕ್ಷಣ, ತಂತ್ರಜ್ಞಾನ ಸೇರಿದಂತೆ ಎಲ್ಲವೂ ಲಭ್ಯವಿದೆ. ಬೇಕಾಗಿರುವುದು ಗಟ್ಟಿ ಮನಸ್ಸು. ಸ್ವಾಭಿಮಾನಕ್ಕೆ ಬಡತನ ಇರಬಾರದು, ಶ್ರೀಮಂತಿಕೆ ಇರಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್ ಸಲಹೆ ನೀಡಿದರು.

ಜಗಳೂರು ಪಟ್ಟಣದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಸಮಾನ ಮನಸ್ಕರ ಬಳಗದ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ, ರಾಷ್ಟ್ರೀಯ ಯುವಕರ ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ದೊಡ್ಡ ಕನಸು ಕಾಣಬೇಕು. ನಾನು ದಾವಣಗೆರೆಯ ಕಕ್ಕರಗೊಳ್ಳದವನು. ಪುಟ್ಟ ಹಳ್ಳಿಯಿಂದ ಬಂದವನು. ಕಷ್ಟದಲ್ಲಿಯೇ ಓದಿ ಇನ್ ಸೈಟ್ಸ್ ಸಂಸ್ಥೆ ಸ್ಥಾಪನೆ ಮಾಡಿದ್ದು. ಇಂದು ದೇಶಾದ್ಯಂತ ದೊಡ್ಡದಾಗಿ  ಬೆಳೆದಿದೆ. ದೇಶದ 65 ಜಿಲ್ಲೆಗಳಲ್ಲಿ ನನ್ನ ವಿದ್ಯಾರ್ಥಿಗಳು ಡಿಸಿಗಳಾಗಿದ್ದಾರೆ, ಜಿಲ್ಲಾ ಪಂಚಾಯಿತಿ ಸಿಇಒಗಳಾಗಿದ್ದಾರೆ. ಸುಮಾರು 50 ಜಿಲ್ಲೆಗಳಲ್ಲಿ ಎಸ್ಪಿಗಳಾಗಿದ್ದಾರೆ. ಒಟ್ಟು 500ರಿಂದ 550 ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ಇದೆಲ್ಲಾ ಸಾಧ್ಯವಾಗಿದ್ದು ಮನಸ್ಸಿದ್ದರೆ ಮಾರ್ಗ ಎಂಬ ನಾಣ್ಣುಡಿಯಂತೆ ಕಷ್ಟಪಟ್ಟಿದ್ದು, ಪುಸ್ತಕಗಳ ಜ್ಞಾನದಿಂದ ಎಂದು ತಿಳಿಸಿದರು.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ಸಂಭವಿಸಿ ಸಾವು ಸಂಭವಿಸಿದೆ. ಮಹಾಕುಂಭ ಮೇಳವು ವಿಶ್ವದ ಗಮನ ಸೆಳೆದಿದೆ. ಪ್ರಯಾಗ್ ರಾಜ್ ನ ಪಕ್ಕದ ಜಿಲ್ಲೆಯ ಅಯೋಧ್ಯೆಯಲ್ಲಿ ಸಿಇಒ ಆಗಿರುವುದು ಜಯದೇವ್ ಅವರು ನನ್ನ ಸಂಸ್ಥೆಯ  ವಿದ್ಯಾರ್ಥಿ. ಹಾಗಾಗಿ, ಬಡತನ ಇದ್ದರೂ ದೊಡ್ಡ ಕನಸು ಕಾಣುವುದನ್ನು ರೂಢಿಸಿಕೊಳ್ಳಿ. ಯಾವುದೇ ಕಾರಣಕ್ಕೂ ಸ್ವಾಭಿಮಾನ ಬಿಡಬೇಡಿ ಎಂದು ಸಲಹೆ ನೀಡಿದರು.

ಡಾ. ಬಿ. ಆರ್. ಅಂಬೇಡ್ಕರ್ ರವರ ಬರವಣಿಗೆಯಲ್ಲಿ ಸ್ವಾಭಿಮಾನ ಮತ್ತು ಘನತೆ ಪದಗಳು ಪದೇ ಪದೇ ಪುನರಾವರ್ತನೆ ಆಗಿವೆ. ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯ ಘನತೆ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ಬರಬಾರದು ಎಂಬುದೇ ಸಂವಿಧಾನದ ಮೂಲ ಉದ್ದೇಶ. ಇಂಥ ವ್ಯವಸ್ಥೆ ಸೃಷ್ಟಿಯಾಗಬೇಕು. ಅಸಮಾನತೆ ತೊಲಗಬೇಕು ಎಂದು ಪ್ರತಿಪಾದಿಸಿದರು.

ಅಸಮಾನತೆ ಹೋಗಬೇಕಾದರೆ ಜ್ಞಾನ, ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಚಿಕ್ಕ ವಯಸ್ಸಿನಿಂದಲೇ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ಬರುತ್ತದೆ. ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಕ್ಕರೆ ಉನ್ನತ ಹುದ್ದೆ ಅರಸಿ ಬರುತ್ತವೆ ಎಂದು ತಿಳಿಸಿದರು.

1891ರಲ್ಲಿ ಅಂಬೇಡ್ಕರ್ ಅವರು ಜನಿಸಿದಾಗ ಅವರ ತಂದೆ ತಾಯಿಗೆ 14ನೇ ಮಗು. ಆಗಿನ ಸಾಮಾಜಿಕ ಪರಿಸ್ಥಿತಿ ಊಹಿಸಿಕೊಳ್ಳಲು ಆಗದು. ಯಾಕೆಂದರೆ ಆಗ ಪ್ರತಿಯೊಬ್ಬರೂ ಸಾಮಾಜಿಕ, ಶೈಕ್ಷಣಿಕವಾಗಿ ಕೆಳವರ್ಗದವರಿಗೆ ಸಿಗದಂತೆ ಮಾಡಲಾಗಿತ್ತು. ಇದನ್ನು ಮೆಟ್ಟಿ ನಿಂತು ಬೆಳೆದಿದ್ದು ಅಂಬೇಡ್ಕರ್ ಅವರು. ಅಂಬೇಡ್ಕರ್ ಅವರು ನಿಧನ ಹೊಂದಿದಾಗ ಅವರ ಬಳಿ ಇದ್ದದ್ದು 50 ಸಾವಿರ ಪುಸ್ತಕಗಳು. ಪುಸ್ತಕ ಓದುವ ಹವ್ಯಾಸವೇ ಅಂಬೇಡ್ಕರ್ ಅವರ ಜ್ಞಾನ ಭಂಡಾರ ಹೆಚ್ಚಾಗಲು ಕಾರಣ. ಪದವಿ ಪೂರ್ಣಗೊಳಿಸುವುದರೊಳಗೆ 100ರಿಂದ 200 ಪುಸ್ತಕ ಖರೀದಿಸಿ ಓದಿ. ಕಡುಬಡತನ ಇದ್ದರೂ ಪ್ರತಿಭೆ ಜ್ಞಾನ ಗುರುತಿಸುವಂತಾಗುತ್ತದೆ ಎಂದು ಸಲಹೆ ನೀಡಿದರು.

ಸಮಾನ ಮನಸ್ಕರ ಬಳಗದ ಅಧ್ಯಕ್ಷ ಬಿಸ್ತುವಳ್ಳಿ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ. ಟಿ. ಜಿ. ರವಿಕುಮಾರ್, ಪ್ರದೀಪ್ ಕುಮಾರ್, ಶೌಖತ್ ಆಲಿ, ಕೀರ್ತಿ ದೇವೇಂದ್ರಪ್ಪ, ಮಹಾಲಿಂಗಪ್ಪ, ಬರ್ಕತ್ ಆಲಿ, ಸತೀಶ್ ಮತ್ತಿತರರು ಹಾಜರಿದ್ದರು.

Read also : ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದ ಖದೀಮರು| ಹೊಯ್ಸಳ ಕ್ಷಿಪ್ರ ಕಾರ್ಯಚರಣೆ | ಮುಂದೆ ಆಗಿದ್ದೇನು?

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದ ಖದೀಮರು| ಹೊಯ್ಸಳ ಕ್ಷಿಪ್ರ ಕಾರ್ಯಚರಣೆ | ಮುಂದೆ ಆಗಿದ್ದೇನು?
Next Article Basavanthappa ಮಾಯಕೊಂಡ ಕ್ಷೇತ್ರಕ್ಕೆ 750 ಮನೆ ಮಂಜೂರು : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಂಸ್ಕೃತಿ, ಸಾಂಸ್ಕೃತಿಕ ಜಿಲ್ಲೆ ದಾವಣಗೆರೆ : ಸಾಹಿತಿ ನಾಗಲೇಖ

ದಾವಣಗೆರೆ : ರಾಜ್ಯದ 31 ಜಿಲ್ಲೆಗಲ್ಲಿ 30 ಜಿಲ್ಲೆಗಳು ತಿರುಗಿ ನೋಡುವಂತಹ ಸಂಸ್ಕೃತಿ, ಸಾಂಸ್ಕೃತಿಕ ಲೋಕವನ್ನು ಹೊಂದಿರುವಂತಹ ಜಿಲ್ಲೆ ಅಂದರೆ…

By Dinamaana Kannada News

DAVANAGERE : ದಾವಣಗೆರೆಯಲ್ಲಿ ಐಟಿ ಕೇಂದ್ರ (IT Center) ಸ್ಥಾಪನೆಗೆ ಪ್ರಭಾ ಮಲ್ಲಿಕಾರ್ಜುನ್ ಮನವಿ

ದಾವಣಗೆರೆ (Davangere Distric) :  ದಾವಣಗೆರೆ ನಗರದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರ ಸ್ಥಾಪನೆ ಮಾಡುವಂತೆ ದಾವಣಗೆರೆ ನೂತನ ಸಂಸದರಾದ ಡಾ||…

By Dinamaana Kannada News

Davanagere | ಡಾ.ಬಿ.ಆರ್. ಅಂಬೇಡ್ಕರ್ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಸೆ.10 (Davanagere) ಡಾ.ಬಿ.ಆರ್. ಅಂಬೇಡ್ಕರ್ ನಿಗಮಗಳ ವ್ಯಾಪ್ತಿಗೆ ಬರುವ ಜನಾಂಗದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಯೋಜನೆ, ಐ.ಎಸ್.ಬಿ.ಯೋಜನೆ, ಸ್ವಾವಲಂಬಿ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?