Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಾಲ್ಯವಿವಾಹ ಮುಕ್ತ ಜಿಲ್ಲೆಗೆ ಶ್ರಮಿಸಲು ನ್ಯಾ.ಮಹಾವೀರ ಮ.ಕರಣ್ಣವರ್ ಕರೆ
ತಾಜಾ ಸುದ್ದಿ

ಬಾಲ್ಯವಿವಾಹ ಮುಕ್ತ ಜಿಲ್ಲೆಗೆ ಶ್ರಮಿಸಲು ನ್ಯಾ.ಮಹಾವೀರ ಮ.ಕರಣ್ಣವರ್ ಕರೆ

Dinamaana Kannada News
Last updated: August 22, 2025 2:15 pm
Dinamaana Kannada News
Share
Davanagere
SHARE

ದಾವಣಗೆರೆ ಆ.22: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರಣ್ಣವರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸ್ಪೂರ್ತಿ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಒಂದು ದಿನದ ಬಾಲ್ಯವಿವಾಹ ನಿಷೇಧ ಕುರಿತು ಚಿಂತನಾ ಮಂಥನ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 6 ತಾಲ್ಲೂಕು ಹೊಂದಿದ್ದು, ಗ್ರಾಮೀಣ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ 2 ಸಾವಿರ ಬಾಲ್ಯವಿವಾಹ ನಿಷೇಧಾಧಿಕಾರಿಗಳಿದ್ದಾರೆ. ಆದರೆ ಬಾಲ್ಯ ವಿವಾಹ ಪ್ರಕರಣ ತಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಯಾವುದೇ ಗ್ರಾಮ ಅಥವಾ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ವಿವಾಹ ಸಿದ್ದತೆ, ಪೂರ್ವ ತಯಾರಿ ಕುರಿತು ಮಾಹಿತಿ ಲಭ್ಯವಿಲ್ಲದೇ ಇರುವುದಿಲ್ಲ. ಆದರೂ ಇಂತಹ ಪ್ರಕರಣಗಳು ಇಂದಿಗೂ ದಾಖಲಾಗುತ್ತಿರುವುದು ವಿಷಾಧನೀಯ. ಬಾಲ್ಯ ವಿವಾಹ ಮತ್ತು ಪೋಕ್ಸೋ ತಡೆದಲ್ಲಿ ಒಂದು ಮಗುವಿನ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗಬಹುದು. ದೇಶದ ಭವಿಷ್ಯ ಯುವ ಸಮುದಾಯದ ಮೇಲಿದೆ, ದೇಶ ಸುಭದ್ರತೆ ಮತ್ತು ಬಲಿಷ್ಠ, ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಆರೋಗ್ಯವಂತ ಯುವ ಪೀಳಿಗೆ ಬೆಳೆಯಬೇಕು ಎಂದ ಅವರು, ಪ್ರಸ್ತುತ ಮಾನವನ ಜೀವನ ಶೈಲಿ ಬದಲಾವಣೆಯಾಗಿದೆ. ಮಾನವೀಯ ಮೌಲ್ಯಗಳು ಕೂಡ ಕ್ಷೀಣಿಸುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ಸಾಮಾಜಿಕ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಎಂದರು.

ನಿಸರ್ಗವು ಯಾವ ಕಾಲಕ್ಕೆ, ಯಾವ ಸಂದರ್ಭಕ್ಕೆ ಹೂ ಬಳ್ಳಿ, ಹಣ್ಣು, ಕಾಯಿ ಕೊಡಬೇಕು ಎಂದು ನಿರ್ಧರಿಸಿ ಫಲ ಕೊಡುತ್ತಿದೆ. ಅದರಂತೆ ಏನು ಅರಿಯದ, ಜೀವನ ನಡೆಸುವ ಪದ್ಧತಿಯೇ ಗೊತ್ತಿಲ್ಲದ ಮಕ್ಕಳಿಗೆ ಬಡತನ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯ ಕಾರಣಗಳಿಂದ ಬಾಲ್ಯವಿವಾಹ ಎಂಬ ಸಂಕೋಲೆಗಳಿಗೆ ದೂಡುತ್ತಾರೆ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದಲ್ಲದೇ, ಶಿಶು ಮರಣ ಮತ್ತು ತಾಯಿ ಮರಣ ಪ್ರಕರಣಗಳು ಹೆಚ್ಚಾಗಲು ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಲ್ಲಿಬೇಕಾಗಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಗ್ರಾಮೀಣ ಮಟ್ಟದಿಂದ ಅನೇಕ ಸಮಿತಿಗಳನ್ನು ಅನುಷ್ಠಾನಗೊಳಿಸಿದೆ. ಆದರೆ ಅವುಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯವಹಿಸದೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಮತ್ತಷ್ಟು ಅರಿವು ಮೂಡಿಸುವ ಕೆಲಸ ಮಾಡಬೆಕು ಎಂದು ತಾಕೀತು ಮಾಡಿದರು.

ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ, ದೈಹಿಕ ದೌರ್ಜನ್ಯ, ಪೋಕ್ಸೋ ಕುರಿತು ಮಾಹಿತಿ ತಿಳಿದು ಬಂದಲ್ಲಿ ಸಂಬAಧಪಟ್ಟ ಇಲಾಖೆ, ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ 112ಗೆ ಸಂಪರ್ಕಿಸಿ ಮಾಹಿತಿ ನೀಡಿದಲ್ಲಿ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ಕುರಿತ ಕಾನೂನಾತ್ಮಕವಾಗಿ ಸಂಕ್ಷಿಪ್ತವಾಗಿ ಮಾಹಿತಿ ನೀಡಿ, ಅಧಿಕಾರಿಗಳ ಕೇಳಿದ ಪ್ರಶ್ನೆಗಳಿಗೆ ಹಾಗೂ ಅವರಲ್ಲಿನ ಗೊಂದಲ, ಸಮಸ್ಯೆಗಗಳಿಗೆ ಸೂಕ್ತ ಪರಿಹಾರ ನೀಡಿದರು.

Read also : ಪ.ಪಂಗಡಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಜಿ.ಪಂ ಸಿಇಓ ಗಿತ್ತೆ ಮಾಧವ ವಿಠಲ ರಾವ್ ಮಾತನಾಡಿ, ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳು ಕಸಿದುಕೊಂಡAತೆ ಆಗುತ್ತದೆ. ಅವರಿಗೆ ಸರಿಯಾದ ರೀತಿಯಲ್ಲಿ ಹಕ್ಕು ದೊರಕಿಸಿ ಕೊಡಬೇಕಾದರೆ, ಅಧಿಕಾರಿಗಳು ಕಾನೂನಾತ್ಮವಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಬಾಲ್ಯವಿವಾಹ ತಡೆದಲ್ಲಿ ಮಕ್ಕಳಿಗೆ ಸಮರ್ಪಕವಾಗಿ ಹಕ್ಕುಗಳನ್ನು ಒದಗಿಸಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ನ್ಯಾ. ಮಹಾವೀರ ಮ ಕರೆಣ್ಣವರ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಸಹಾಯವಾಣಿ ಸಂಖ್ಯೆ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿ ಪ್ರತಿಜ್ಞಾವಿಧಿ ಬೋಧಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್.ಕವಿತಾ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯ ಡಿ.ಶಂಕರಪ್ಪ ಉಪನ್ಯಾಸ ನೀಡಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಡಿಡಿಪಿಐ ಕೊಟ್ರೇಶ್, ಸ್ಪೂರ್ತಿ ಸಂಸ್ಥೆಯ ರೂಪನಾಯ್ಕ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಪ.ಪಂಗಡಗಳ ಅಭಿವೃದ್ದಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article Court ಲಾಭಾಂಶದ ಆಸೆ ತೋರಿಸಿ ಮೋಸ ಮಾಡಿದ ಆರೋಪಿ ದಂಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನಾಯಕತ್ವ ಗುಣವನ್ನು ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಡಾ.ದಳಪತಿ

ದಾವಣಗೆರೆ:  ಸಾಮಾಜಿಕ ಸಂಬಂಧಗಳ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಸೇವಾ ಯೋಜನೆಯು…

By Dinamaana Kannada News

ಚಿತ್ರಕಲಾ ಶಿಕ್ಷಕರಿಂದ 50 ಮೀಟರ್ ಬಟ್ಟೆಯಲ್ಲಿ ಮತದಾನ ಜಾಗೃತಿ

ದಾವಣಗೆರೆ.ಏ.26 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯಯಲ್ಲಿ ಮತದಾನ…

By Dinamaana Kannada News

ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ನವದೆಹಲಿ (Davanagere):  ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪಿ.ಎಂ ಪೋಶನ್ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?