Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ : ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ SEP 2 ರಂದು ಪಾದಯಾತ್ರೆ
ತಾಜಾ ಸುದ್ದಿ

ಹರಿಹರ : ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ SEP 2 ರಂದು ಪಾದಯಾತ್ರೆ

Dinamaana Kannada News
Last updated: August 31, 2025 3:35 pm
Dinamaana Kannada News
Share
DSS Harihara
SHARE
ಹರಿಹರ: ತಾಲ್ಲೂಕಿನ ಕಡ್ಲೆಗೊಂದಿ ಗ್ರಾಮದ ವಸತಿ ರಹಿತರಿಗೆ ವಸತಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಮಂಗಳವಾರದಂದು ಬೆಳಿಗ್ಗೆ 10ಕ್ಕೆ ಹೊರವಲಯದ ಪ್ರೊ.ಬಿ.ಕೃಷ್ಣಪ್ಪರ ಸಮಾಧಿ ಸ್ಥಳದಿಂದ ತಾಲ್ಲೂಕು ಕಚೇರಿವರೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳುವ ಕುರಿತು ಗ್ರಾಮದಲ್ಲಿ ಭಾನುವಾರ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ತಿಳಿಸಿದ್ದಾರೆ.
ಬೇಡಿಕೆ ಈಡೇರಿಕೆಗಾಗಿ ಈ ಹಿಂದೆ ಪ್ರೊ.ಬಿ.ಕೃಷ್ಣಪ್ಪರ ಸಮಾಧಿ ಸ್ಥಳದಿಂದ ತಾಲ್ಲೂಕು ಕಚೇರಿವರೆಗೆ ತಮಟೆ ಚಳವಳಿ, ತಾಲ್ಲೂಕು ಕಚೇರಿ ಎದುರು ಸತತವಾಗಿ 60 ದಿನಗಳ ಕಾಲ ಧರಣ  ಸತ್ಯಾಗ್ರಹ ಹಾಗೂ ಬೆಂಗಳೂರಿನಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಇವರಿಗೆ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಒ ರಿಗೆ ಮನವಿ ನೀಡಲಾಗಿದ್ದರೂ ಈವರೆಗೆ ಯಾವುದೆ ಪ್ರಯೋಜನವಾಗಿಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಮೂಡಿ ಬಂದಿದೆ.
ಗ್ರಾಮದಲ್ಲಿ ಸರ್ವೆ ನಂ.37/2 ರಲ್ಲಿ ಲಭ್ಯವಿರುವ ಸರ್ಕಾರದ ಜಮೀನಿನಲ್ಲಿ ವಸತಿ ಯೋಜನೆ ಜಾರಿಗೊಳಿಸಲು ಸಂಘಟನೆಯ ಹೋರಾಟದ ಫಲವಾಗಿ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ 73 ಜನ ಫಲಾನುಭವಿಗಳ ಪಟ್ಟಿಯನ್ನು ಗ್ರಾಮ ಪಂಚಾಯ್ತಿಯಿಂದ 9 ತಿಂಗಳ ಹಿಂದೆಯೆ ಸಿದ್ಧಪಡಿಸಲಾಗಿದೆ. ಪಟ್ಟಿ ಸಿದ್ಧಪಡಿಸಿದ ನಂತರವೂ ನಿವೇಶನಗಳ ಹಂಚಿಕೆ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನೆಗೆ ತಾಲ್ಲೂಕು ಮಟ್ಟದಲ್ಲಿ ಭೂ ನ್ಯಾಯ ಮಂಡಳಿ ರಚನೆಯಾಗಬೇಕಿದೆ ಎಂದು ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರತಿಕ್ರಿಯಿಸಿದ್ದರು.
ಇತ್ತೀಚಿಗೆ ಭೂ ನ್ಯಾಯ ಮಂಡಳಿಯೂ ರಚನೆಯಾಗಿದೆ. ಈಗಲೂ ಕೂಡ ಯಾವುದೆ ಕಾರಣಗಳನ್ನು ಹೇಳದೆ ಆಷ್ಟು ಬೇಗನೆ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಆದಷ್ಟು ಶೀಘ್ರ ನಡೆಸುವಂತೆ ಆಗ್ರಹಿಸಲು ಪಾದಯಾತ್ರೆ ಹೋರಾಟವನ್ನು ಹಮ್ಮಿಕೊಳ್ಳುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತೆಂದು ತಿಳಿಸಿದರು.
Read also : ದಾವಣಗೆರೆ|ಮನೆ ಕಳ್ಳತನ ಪ್ರಕರಣ : ಆರೋಪಿಗಳ ಬಂಧನ
ಸಭೆಯಲ್ಲಿ ಕಡ್ಲೆಗೊಂದಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮಾತೆಂಗೆಮ್ಮ ತಿಮ್ಮಣ್ಣ ಮಾತನಾಡಿ, ತಾಲ್ಲೂಕು ಮತ್ತು ಜಿಲ್ಲಾಡಳಿತದ ಗಮನ ಸೆಳೆಯಲು ಎಲ್ಲಾ ಫಲಾನುಭವಿಗಳು ಕುಟುಂಬ ಸಮೇತ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.
ವಿಜಯ್ ಕೆ.ಬೇವಿನಹಳ್ಳಿ, ಹನುಮಂತಪ್ಪ ಕೆ.ಎಚ್., ರಂಗಪ್ಪ, ಶೀಲಾ ರಾಜಪ್ಪ, ಶಿವಣ್ಣ, ಹನುಮಂತ, ಸಣ್ಣ ನಿಂಗಪ್ಪ, ಶೈಲೂ ಅಣ್ಣಪ್ಪ, ಮೈಲಮ್ಮ, ದುರ್ಗಜ್ಜ, ಲೋಕೇಶ್, ರುಕ್ಮಿಣ , ನಾಗಮ್ಮ, ನಿಂಗರಾಜ್, ಕೊಟ್ರಪ್ಪ, ದುರ್ಗಮ್ಮ, ಮೊಹಮ್ಮದ್ ಅಲಿ, ರತ್ನಕ್ಕ, ಬಸವರಾಜ್, ಮೈಲಮ್ಮ, ಪ್ರಭು., ಸಂಜೀವ್ ಭಾಗವಹಿಸಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ|ಮನೆ ಕಳ್ಳತನ ಪ್ರಕರಣ : ಆರೋಪಿಗಳ ಬಂಧನ
Next Article Political analysis Political analysis|ಕಂಪ್ಲೇಂಟು ಪಟ್ಟಿ ರೆಡಿ ಮಾಡಿದ್ರು ರಾಜಣ್ಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere  : ಮಹಿಳಾ ಸ್ವಸಹಾಯ ಗುಂಪುಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; Davanagere ಆ.13 :  ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ  ಮಹಿಳಾ ಸ್ವ-ಸಹಾಯ ಗುಂಪುಗಳಿಗೆ…

By Dinamaana Kannada News

ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ ಸಾಮಾನ್ಯ ನಿಧಿಯ 24.10%, 7.25% ಹಾಗೂ 5% ರ ಯೋಜನೆಯ ವೈಯಕ್ತಿಕ…

By Dinamaana Kannada News

ಭದ್ರಾ ಜಲಾಶಯದಲ್ಲಿ 175 ಅಡಿ ನೀರು : ಭರ್ತಿಗೆ 11 ಅಡಿ ಬಾಕಿ

Bhadra dam water level today : ಚಿಕ್ಕಮಂಗಳೂರು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿರುವ ಹಿನ್ನಲೆಯಲ್ಲಿ ಮಲೆನಾಡು ಮತ್ತು ಬಯಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?