Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅಭಿವೃದ್ಧಿ ಕೆಲಸಗಳು ಮಾತನಾಡಲಿ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಅಭಿವೃದ್ಧಿ ಕೆಲಸಗಳು ಮಾತನಾಡಲಿ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: October 31, 2024 12:28 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ  (Davanagere) : ಕಟ್ಟಡ ಎಷ್ಟು ಚದುರ ಅಡಿ ಇದೆ ಎಂಬುದು ಗೊತ್ತಿಲ್ಲ. ಕಟ್ಟಡದೊಳಗೆ ಏನೇನು ಮೂಲಭೂತ ಸೌಲಭ್ಯ ಕಲ್ಪಿಸಿದ್ದಾರೆ ಎಂಬ ಮಾಹಿತಿ ಇಲ್ಲ. ಆಗಿದ್ದರೆ ಈ ಕಟ್ಟಡ ಎಷ್ಟು ವರ್ಷ ಬಾಳಿಕೆ ಬರುತ್ತದೆ ಎಂಬುದು ಆ ದೇವರೇ ಬಲ್ಲ.!

ಇದು, ಆರೋಗ್ಯ ಉಪ ಕೇಂದ್ರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಗುತ್ತಿಗೆದಾರ ಮತ್ತು ಇಂಜಿನಿಯರ್ ತರಾಟೆಗೆ ತೆಗೆದುಕೊಂಡ ಸಂದರ್ಭ.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹರಲೀಪುರ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಿಂದ 18.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ನೂತನ ಆರೋಗ್ಯ ಉಪ ಕೇಂದ್ರವನ್ನು ಶಾಸಕ ಕೆ.ಎಸ್.ಬಸವಂತಪ್ಪ, ಮಾಜಿ ಶಾಸಕ ಪ್ರೋ. ಲಿಂಗಣ್ಣ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕೆ.ಎಸ್.ಬಸವಂತಪ್ಪ, ಹಳ್ಳಿ ಜನರಿಗೆ ಇರುವ ಸಾಮಾನ್ಯ ಜ್ಞಾನ ಅಧಿಕಾರಿಗಳಿಗೆ ಇಲ್ಲ. ಇಲ್ಲಿರುವ ಯಾರನ್ನೇ ಕೇಳಿದರೂ ಈ ಕಟ್ಟಡ ಎಷ್ಟು ಚದುರ ಅಡಿ ಇದೆ, ಈ ಕಟ್ಟಡಕ್ಕೆ ಎಷ್ಟೇಷ್ಟು ಪ್ರಮಾಣದಲ್ಲಿ ಕಟ್ಟಡ ಸಾಮಗ್ರಿ ಬಳಕೆ ಮಾಡಿದ್ದಾರೆ, ಕಟ್ಟಡದ ಅಂದಾಜು ವೆಚ್ಚ ಕೇಳಿದರೆ ಕಣ್ಣು ಮುಚ್ಚಿಕೊಂಡು ಹೇಳುತ್ತಾರೆ. ಆದರೆ ಅದೇ ಗುತ್ತಿಗೆದಾರ ಮತ್ತು ಅಧಿಕಾರಿಗಳನ್ನು ಕೇಳಿದರೆ ತಡವರಿಸುತ್ತಾರೆ. ನೋಡಿ ಶಿಕ್ಷಣ ಇಲ್ಲದ ಹಳ್ಳಿ ಜನರಿಗೂ, ಪದವಿ ಪಡೆದ ಅಧಿಕಾರಿಗಳು ಎಷ್ಟು ವ್ಯತ್ಯಾಸ ಇದೆ ಎಂದು ಗೊತ್ತಾಗುತ್ತದೆ ಎಂದು ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಗರಂ ಆದರು.

ಈ ಹಿಂದೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಕಳಪೆ ಕಾಮಗಾರಿ ಕಂಡು ಬಂದಿತ್ತು. ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರ ಮತ್ತು ಸಂಬಂಧಪಟ್ಟ ಇಂಜಿನಿಯರ್ ಗೆ ತಾಕೀತು ಮಾಡಿದ್ದೆ. ಆದರೂ ಈ ಕಟ್ಟಡ ನೋಡಿದರೆ ಮೂಲ ಸೌಲಭ್ಯ ಕಲ್ಪಿಸದಿರುವುದು ಗ್ರಾಮಸ್ಥರಲ್ಲಿ ಸಂಶಯ ಮೂಡಿದೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಹೇಳುವವರೂ, ಕೇಳುವವರೂ ಯಾರು ಇಲ್ಲದಂತೆ, ಕೆಲವೊಬ್ಬರ ಕೈಗೊಂಬೆಯಾಗಿ ವರ್ತನೆ ಮಾಡುತ್ತಾರೆ. ಇವರಿಗೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಸರಿಯಾದ ಪಾಠ ಕಲಿಸುತ್ತೇನೆ ಎಂದು ವೇದಿಕೆಯಲ್ಲೇ ಎಚ್ಚರಿಕೆ ನೀಡಿದರು.

READ ALSO : ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಸತತವಾಗಿ ಸುರಿದ ಮಳೆಯಿಂದಾಗಿ ನನ್ನ ಕ್ಷೇತ್ರದ ಬಹುತೇಕ ರಸ್ತೆಗಳಲ್ಲಿ ವಾಹನಗಳು ಸಂಚರಿಸದಂತಹ ರೀತಿಯಲ್ಲಿ ಹಾಳಾಗಿವೆ. ಹೀಗಾಗಿ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ. ನೀವು ಮಾಡುವ ಅಭಿವೃದ್ಧಿ ಕೆಲಸಗಳು ಶಾಶ್ವತವಾಗಿ ಉಳಿದು ಜನರು ಮಾತನಾಡುವಂತಿರಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ ಶಾಸಕರು, ಮಾಜಿ ಶಾಸಕ  ಪ್ರೋ.ಲಿಂಗಣ್ಣ  ಅವರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ನಾನು ಕೂಡ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟದಿಂದ ವಿದ್ಯಾರ್ಥಿಗಳು, ಮಹಿಳೆಯರು, ಯುವಕರು ಕುಡಿತದ ದಾಸರಾಗಿ ಬಡ ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂಬ ದೂರುಗಳು ಸರ್ವೇ ಸಾಮಾನ್ಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಆಯಾ ಗ್ರಾಮಗಳಲ್ಲಿ ಮದ್ಯಪಾನ ಮುಕ್ತ ಗ್ರಾಮಕ್ಕೆ ಗ್ರಾಮದ ಮುಖಂಡರು ಶಪತ ಮಾಡಬೇಕೆಂದು ಹರಲೀಪುರ ಗ್ರಾಮದ ಮುಖಂಡರಿಗೆ ವಾಗ್ದಾನ ಮಾಡಿಸಿದರು.
ಮಾಜಿ ಶಾಸಕ ಪೆÇ್ರ.ಲಿಂಗಣ್ಣ ಮಾತನಾಡಿ, ನನ್ನ ಅಧಿಕಾರದ ಅವಧಿಯಲ್ಲಿ ಆಯುಷ್ಮಾನ್‌ ಆರೋಗ್ಯ ಮಂದಿರದ ಉಪಕೇಂದ್ರ ಮಂಜೂರು ಮಾಡಿಸಿದ್ದೆ. ಜತೆಗೆ ಸಾಕಷ್ಟು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ. ಇನ್ನು ಹೆಚ್ಚಿನ ಅನುದಾನ ತರುವ ಮೂಲಕ ಈಗಿನ ಶಾಸಕರು ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾಕ್ಷಿ ರವಿಕುಮಾರ್, ತಾಲೂಕು ಪಂಚಾಯಿತಿ ಸದಸ್ಯರಾದ ಸತೀಶ್ ಪಟೇಲ್, ಬೆಳಲಗೆರೆ ಹನುಮಂತಪ್ಪ ,ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಮೂರ್ತಿ ,ಧಮೇರ್ಂದ್ರ , ತಾಲೂಕು ಆರೋಗ್ಯ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Chief Minister Siddaramaiah ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ
Next Article Davangere District Congress Intech Division Davanagere | ದೇಶದಲ್ಲಿ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದವರು ಇಂದಿರಾಗಾಂಧಿ : ಡಿ. ಬಸವರಾಜ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Silent dolls… | ಮೌನವಾದ ಗೊಂಬೆಗಳು …

Kannada News | Dinamaana.com | 11-10-2024 ದೊಡ್ಡವರೆಲ್ಲ ನೆನಪಿಸಿಕೊಳ್ಳಿ , ನಾವು ಚಿಕ್ಕವರಿದ್ದಾಗ ಎಲ್ಲರ ಬಳಿ ಆಟ ಆಡಲು…

By Dinamaana Kannada News

ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ

ಬೆಂಗಳೂರು ಅ 27:  ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡ್ತೀನಿ. ಹಳ್ಳಿಕಾರ ಸಮುದಾಯವನ್ನು ಪ್ರವರ್ಗ…

By Dinamaana Kannada News

Davanagere | ಬೈಕ್‌ ಕಳ್ಳತನ ಪ್ರಕರಣ : ಕಾನೂನು ಸಂಘರ್ಷಕ್ಕೋಳಗಾದ ಇಬ್ಬರು ಬಾಲಕರು ವಶಕ್ಕೆ

ದಾವಣಗೆರೆ  (Davanagere): ವಿವಿಧಡೆ  ಬೈಕ್‌ ಕಳುವು ಮಾಡಿದ್ದ ಇಬ್ಬರು ಕಾನೂನು ಸಂಘರ್ಷಕ್ಕೋಳಗಾದ ಬಾಲಕರನ್ನು  ಕೆಟಿಜೆ ನಗರ ಪೊಲೀಸರು ವಶಕ್ಕೆ ಪಡೆದು,…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?