Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news |ಕೊಡಗನೂರು ಕೆರೆ ಏರಿ ನಿರ್ಮಾಣಕ್ಕೆ 7 ಕೋಟಿ ರೂ. ಬಿಡುಗಡೆ
ತಾಜಾ ಸುದ್ದಿ

Davanagere news |ಕೊಡಗನೂರು ಕೆರೆ ಏರಿ ನಿರ್ಮಾಣಕ್ಕೆ 7 ಕೋಟಿ ರೂ. ಬಿಡುಗಡೆ

Dinamaana Kannada News
Last updated: September 7, 2024 4:17 am
Dinamaana Kannada News
Share
DAVANAGERE
ದಾವಣಗೆರೆ ತಾಲೂಕಿನ ಕೊಡಗನೂರು ಕೆರೆ ಏರಿಯನ್ನು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE
ದಾವಣಗೆರೆ (Davanagere) :  ತಾಲೂಕಿನ ಕೊಡಗನೂರು ಕೆರೆ ಏರಿಯ ಮೇಲೆ 60 ಮೀಟರ್ ಉದ್ದ ಕುಸಿದಿರುವ ಏರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ 7 ಕೋಟಿ ರೂ. ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು  ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೊಡಗನೂರು ಕೆರೆಗೆ  ಸಂಬಂದಪಟ್ಟ ಅಧಿಕಾರಿಗಳೊಂದಿಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಡಗನೂರು ಕೆರೆಯ ಏರಿ 140 ಮೀಟರ್ ಉದ್ದವಿದ್ದು ಈ ಕೆರೆ ಏರಿ ಮೇಲೆ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಪ್ರತಿನಿತ್ಯ ನೂರಾರು ವಾಹನಗಳು ಓಡಾಡುವುದರಿಂದ ಕೆರೆ ಏರಿ ಮಧ್ಯೆ 60 ಮೀಟರ್ ಉದ್ದದಲ್ಲಿ ಕೆರೆ ಏರಿ ಸಡಿಲಗೊಂಡು  ಕುಸಿಯುತ್ತಿದೆ. ಮಳೆಗಾಲ ಬಂದರೆ ಇನ್ನು ಹೆಚ್ಚು ಧಕ್ಕೆ ಆಗುತ್ತಿದೆ ಎಂದರು.
ಕೆರೆ ಏರಿ ಕುಸಿದಾಗ ಅಧಿಕಾರಿಗಳು ತಾತ್ಕಾಲಿಕವಾಗಿ ದುರಸ್ತಿ ಮಾಡುತ್ತಾರೆ. ವಾಹನಗಳ ದಟ್ಟಣೆಯಿಂದ ಮತ್ತೆ ಮತ್ತೆ ಕೆರೆ ಏರಿಗೆ ಧಕ್ಕೆ ಆಗುತ್ತಿದೆ. ಹೀಗಾಗಿ ಶಾಶ್ವತವಾಗಿ ಉಳಿಯುವ ಭದ್ರವಾದ ಕೆರೆ ಏರಿ ನಿರ್ಮಾಣದ ಹಿನ್ನೆಲೆಯಲ್ಲಿ ನಾನು ಸರ್ಕಾರದ ಮೇಲೆ ಒತ್ತಡ ಹಾಕಿ 7  ಕೋಟಿ ರೂ. ಹಣ ಬಿಡುಗಡೆ ಮಾಡಿಸಿದ್ದೇನೆ. ಈಗಾಗಲೇ ಅಧಿಕಾರಿಗಳು ನೀಲ ನಕ್ಷೆ ತಯಾರಿಸಿದ್ದು, ಶೀಘ್ರದಲ್ಲೇ ಟೆಂಡರ್ ಕರೆದು ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
Read also : Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್
60 ಮೀಟರ್ ಉದ್ದ ಹೊಸದಾಗಿ ಕೆರೆ ಏರಿ ನಿರ್ಮಿಸುತ್ತಿದ್ದು, ಮುಂದೆ ಯಾವುದೇ ರೀತಿ ಕೆರೆ ಏರಿಗೆ ಧಕ್ಕೆ ಆಗದಂತೆ ಬುನಾದಿಯಿಂದ ಭದ್ರವಾದ ಏರಿ ನಿರ್ಮಿಸಲಾಗುವುದು. ಜೊತೆಗೆ ಕೆರೆಯ ಬಸಿ ನೀರಿನಿಂದ ರೈತರ ಜಮೀನುಗಳು ಹಾನಿಯಾಗುತ್ತಿವೆ. ಹೀಗಾಗಿ ಕೆರೆಯ ಸುತ್ತ ಡ್ರೇನೆಜ್ ಮಾಡಿ ಬಸಿ ನೀರು ಹಳ್ಳಕ್ಕೆ ಹೋಗಿ ಕೆರೆಗೆ ಸೇರುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕೊಡಗನೂರು ಕೆರೆ ಸುಮಾರು ನೂರಾರು ಎಕರೆಯ ಪ್ರದೇಶ ಹೊಂದಿದೆ. 22 ಕೆರೆಗಳ ಏತ ನೀರಾವರಿ  ಯೋಜನೆಯ ವ್ಯಾಪ್ತಿಗೆ ಈ ಕೆರೆಯು ಸೇರಿದೆ. ಇದರಿಂದಾಗಿ  ಈ ಭಾಗದ ಸಾವಿರಾರು ಎಕರೆ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಕಾಪಾಡುವ ಜೊತೆಗೆ ಜನಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲವಾಗಿದೆ. ಹೀಗಾಗಿ ಕೆರೆ ಏರಿಗೆ ಯಾವುದೇ ರೀತಿ ಧಕ್ಕೆ ಆಗದಂತೆ ತಡೆಗಟ್ಟುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಕೆರೆಯ ಪಕ್ಕದಲ್ಲಿ  ರಾಜ್ಯ ಹೆದ್ದಾರಿ ನಿರ್ಮಾಣ ಮಾಡಿದರೆ ಕೆರೆ ಏರಿಗೆ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ರುದ್ರಮುನಿ , ಕೊಡಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಣ್ಣ, ಅಶೋಕ್,ಜಯಣ್ಣ ,ದೇವೇಂದ್ರಪ್ಪ .ಮೂರ್ತೆಪ್ಪ , ಬಕ್ಕಣ್ಣ, ಕುಬೇರಪ್ಪ, ಲಕ್ಷ್ಮಣ್ , ಶೇಕಣ್ಣ ಹಾಗೂ ಕಾಂಗ್ರೆಸ್  ಹಿರಿಯ ಮುಖಂಡರು ಹಾಜರಿದ್ದರು.
TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್
Next Article davanagere Davanagere news | ವಸತಿ ರಹಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದ್ವೇಷದ ವ್ಯಾಜ್ಯ ನೆಮ್ಮದಿ ಭಂಗ : ನ್ಯಾ. ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್

ಹರಿಹರ:  ದುಡುಕು, ದುರಾಸೆ ಮತ್ತು ದ್ವೇಷದ ಕಾರಣದಿಂದ ದಾಖಲಾಗಿರುವ ದಾವೆಗಳನ್ನು ಮುಕ್ತಾಯಗೊಳಿಸಲು ಪಕ್ಷಗಾರರು ಕೂಡಲೇ ಮುಂದಾಗಬೇಕು ಎಂದು 1ನೇ ಹೆಚ್ಚುವರಿ…

By Dinamaana Kannada News

Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ

ದಾವಣಗೆರೆ  (Davanagere ) : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ೩೦ ಲಕ್ಷ…

By Dinamaana Kannada News

ಅಪ್ರಾಪ್ತ ಬಾಲಕನಿಂದ ಆಟೋ ರೀಕ್ಷಾ ಚಾಲನೆ : ಮಾಲೀಕನಿಗೆ 26 ಸಾವಿರ ರೂ ದಂಡ

ದಾವಣಗೆರೆ :  ಸಾರ್ವಜನಿಕ ರಸ್ತೆ ಮೇಲೆ ಬಾಲಕನಿಗೆ ಆಟೋರಿಕ್ಷಾ ಚಾಲಾಯಿಸಲು ನೀಡಿದ ಆಟೋ ರೀಕ್ಷಾ ಮಾಲೀಕನಿಗೆ ಟ್ರಾಫೀಕ್ ಪೊಲೀಸರು ಇಂಡಿಯನ್…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?