Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಳೆಗೆ ಕುಸಿದ ಬಿದ್ದ ಮನೆಗಳು : ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ
ತಾಜಾ ಸುದ್ದಿ

Davanagere | ಮಳೆಗೆ ಕುಸಿದ ಬಿದ್ದ ಮನೆಗಳು : ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ

Dinamaana Kannada News
Last updated: October 27, 2024 12:09 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ತಾಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಕುಸಿದು ಬಿದ್ದಿರುವ ಮನೆಗಳನ್ನು ಪರಿಶೀಲನೆ ನಡೆಸಿದರು.

 

ಈಚೆಗೆ ಸುರಿದ ಮಳೆಗೆ ಕ್ಷೇತ್ರದ ಸಾಕಷ್ಟು ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾನಿಯಾಗಿವೆ. ಅಲ್ಲದೇ ಮೆಕ್ಕೆಜೋಳ ಸೇರಿದಂತೆ ಇನ್ನಿತರೆ ಬೆಳೆಗಳು ಕೂಡ ನಿರಂತರ ಮಳೆಗೆ ಕೊಳೆತು ಹೋಗಿವೆ. ಕೃಷಿ ಮತ್ತು ಕಂದಾಯ ಅಧಿಕಾರಿಗಳ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಕಳೆದುಕೊಂಡ ರೈತರಿಗೆ ಮತ್ತು ಮನೆ ಕಳೆದುಕೊಂಡ ನಿರಾಶ್ರಿತರಿಗೆ ಪರಿಹಾರ ನೀಡುವ ಜೊತೆಗೆ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಸಂಬಂಧಪಟ್ಟ ತಹಸೀಲ್ದಾರ್, ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಇದೇ ವೇಳೆ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಳಪೆ ಗುಣಮಟ್ಟದಿಂದ ಕೂಡಿದೆ. ನೀರು ಬರುವುದಿಲ್ಲ ಎಂದು ಗ್ರಾಮಸ್ಥರು ಶಾಸಕರ ಬಳಿ ಸಮಸ್ಯೆ ಬಿಚ್ಚಿಟ್ಟರು. ಕಾಮಗಾರಿ ಪರಿಶೀಲಿಸಿದ ಶಾಸಕರು, ಕಳಪೆ ಕಾಮಗಾರಿ ಕಂಡು ಗುತ್ತಿಗೆದಾರರ ವಿರುದ್ಧ ಕೆಂಡಾಮಂಡಲರಾದರು. ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸಿ ಗ್ರಾಮಸ್ಥರಿಗೆ ಸಮಪರ್ಕ ಕುಡಿಯುವ ನೀರು ಪೂರೈಸುವಂತೆ ಸೂಚನೆ ನೀಡಿದರು.

 

ಈ ಸಂದರ್ಭದಲ್ಲಿ ಪರಶುರಾಮ್, ಗಣೇಶಪ್ಪ, ಹೊನ್ನೂರಪ್ಪ, ಬಸಣ್ಣ, ಶ್ರೀಕಾಂತ್, ಕೆಂಚಪ್ಪ ಹಾಗೂ ಗ್ರಾಮಸ್ಥರು ಇದ್ದರು.

 

ವಾಲ್ಮೀಕಿ ಜಯಂತಿ: ದಿಂಡದಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಕೆ.ಎಸ್.ಬಸವಂತಪ್ಪ, ಮಹರ್ಷ ವಾಲ್ಮೀಕಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿ ಉತ್ತಮ ಸತ್ಪçಜೆಗಳನ್ನಾಗಿ ಮಾಡಬೇಕೆಂದು ಕಿವಿಮಾತು ಹೇಳಿದರು.

Read also : ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ

 

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್, ನಾಗರಾಜ್, ಗಣೇಶ್, ಪರಶುರಾಮ್, ಬಸಣ್ಣ ಹಾಗೂ ಸಮಾಜ ಬಾಂಧವರು ಭಾಗವಹಿಸಿದ್ದರು.

 

ನಿರಾಶ್ರಿತರಲ್ಲಿ ಆತಂಕ ಬೇಡ..
ನಿರಂತರ ಮಳೆ ಸುರಿದು ಕುಸಿದು ಬಿದ್ದಿರುವ ಮನೆಗಳಿಗೆ ಪರಿಹಾರ ಕೊಟ್ಟರೆ, ಮನೆ ಮಂಜೂರು ಆಗುವುದಿಲ್ಲ. ಮನೆ ಬೇಕೋ ಅಥವಾ ಪರಿಹಾರ ಬೇಕೋ ಎಂದು ಅಧಿಕಾರಿಗಳು ಹೇಳುತ್ತಾರೆ ನಿರಾಶ್ರಿತರು ಶಾಸಕರ ಬಳಿ ಪರಿಹಾರ ಮತ್ತು ಮನೆ ಮಂಜೂರು ಮಾಡಿಸುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ, ಮಳೆಯಿಂದ ಮನೆಗಳು ಹಾನಿಗೊಳಗಾದ ನಿರಾಶ್ರಿತರಿಗೆ ಸರ್ಕಾರ ಪರಿಹಾರನೂ ಕೊಡುತ್ತದೆ. ಮನೆನೂ ಮಂಜೂರು ಮಾಡುತ್ತದೆ. ಯಾವುದೇ ಕಾರಣಕ್ಕೆ ನಿರಾಶ್ರಿತರು ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Bengalaru ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ
Next Article DAVANAGERE Davanagere | ಯೋಗಗುರು ಡಾ.ಎನ್.ಪರಶುರಾಮಪ್ಪಗೆ `ಕರ್ನಾಟಕ ಮುಕುಟಮಣಿ’ ಪ್ರಶಸ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕಿಗೆ 22.40 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿ ಬಂಧನ 1.90 ಲಕ್ಷ ರೂ. ವಶಕ್ಕೆ

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಶಿಕ್ಷಕಿಯೊಬ್ಬರಿಗೆ 22.40 ಲಕ್ಷ ರೂ. ವಂಚಿಸಿದ ಪ್ರಕರಣವನ್ನು ಭೇದಿಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವ ಯಶಸ್ವಿಯಾಗಿದ್ದಾರೆ.…

By Dinamaana Kannada News

ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ

Kannada News | Dinamaana.com | 21-05-2024 ದಾವಣಗೆರೆ : ಶ್ರೀ ಸಾಮಾನ್ಯನ ಕೈಯಲ್ಲಿ ಮೊಬೈಲ್  ಪೋನ್ ಬರಲು ದಿವಂಗತ…

By Dinamaana Kannada News

1500 ಐಎಎಸ್ ಅಧಿಕಾರಿಗಳ ಕೊಟ್ಟ ನನ್ನ ಸಣ್ಣ ಸಾಧನೆಗೆ ಕಕ್ಕರಗೊಳ್ಳದ ಜನರು, ಶಿಕ್ಷಕರು ಕಾರಣ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಕಳೆದ ಒಂದು ದಶಕದಲ್ಲಿ ದೇಶಕ್ಕೆ 1500 ಐಎಎಸ್ ಅಧಿಕಾರಿಗಳನ್ನು ನೀಡಿದ ಹೆಗ್ಗಳಿಕೆ ಇನ್ ಸೈಟ್ಸ್ ಐಎಎಸ್ ಕೋಚಿಂಗ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?