Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉತ್ತಮ ಶಿಕ್ಷಣ, ಪಠ್ಯೇತರ ಸಾಧನೆಯಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ: ಯು. ಟಿ. ಖಾದರ್ ಅಭಿಮತ
ತಾಜಾ ಸುದ್ದಿ

ಉತ್ತಮ ಶಿಕ್ಷಣ, ಪಠ್ಯೇತರ ಸಾಧನೆಯಿಂದ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ: ಯು. ಟಿ. ಖಾದರ್ ಅಭಿಮತ

Dinamaana Kannada News
Last updated: February 27, 2025 11:38 am
Dinamaana Kannada News
Share
Millat Vidya and Welfare Institute davanagere
Millat Vidya and Welfare Institute davanagere
SHARE

ದಾವಣಗೆರೆ (Davanagere): ಮಕ್ಕಳು ಉತ್ತಮ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಯಶಸ್ಸು ಸಾಧಿಸಿದರೆ ಭಾರತ ದೇಶವು ಬಲಿಷ್ಠಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕಾದ ಅಗತ್ಯತೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅಭಿಪ್ರಾಯಪಟ್ಟರು.

ಬಾಷಾ ನಗರದ ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆ ಆಶ್ರಯದಲ್ಲಿ ನಡೆದ ಮಿಲ್ಲತ್ ಕನ್ನಡ, ಉರ್ದು ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಸಕರು, ಸಚಿವರು, ಸಂಸದರು ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತರೆ ದೇಶ ಬಲಿಷ್ಠಗೊಳ್ಳದು. ಅಧಿಕಾರಿಗಳು ಸಹ ಕಚೇರಿಯೊಳಗೆ ಇದ್ದು ಕಾರ್ಯನಿರ್ವಹಿಸಿದರೆ ಸಾಲದು. ಈಗಿನ ಮಕ್ಕಳ ವಿದ್ಯಾಭ್ಯಾಸ ಉತ್ಕೃಷ್ಟ ಗುಣಮಟ್ಟದ್ದಾದರೆ, ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಉನ್ನತ ಸಾಧನೆ ಮಾಡಿದಾಗ ಮಾತ್ರ ಭಾರತ ವಿಶ್ವಭೂಪಟದಲ್ಲಿ ಗುರುತಿಸುವಂತಾಗಲು ಸಾಧ್ಯ ಆಗುತ್ತದೆ ಎಂದು ತಿಳಿಸಿದರು.

ಮೈಕ್ ಮುಂದೆ ನಿಂತು ಮಾತನಾಡುವುದು, ಯಾರಿಗೋ ಅವಹೇಳನ ಮಾಡುವುದು ದೇಶ ಪ್ರೇಮ ಅಲ್ಲ. ಅದು ಸಮುದಾಯದ ಪ್ರೇಮವೂ ಅಲ್ಲ. ಸೈಯ್ಯದ್ ಸೈಫುಲ್ಲಅವರು ಶಿಕ್ಷಣ ಸಂಸ್ಥೆಯನ್ನು ಪ್ರಾರಂಭ ಮಾಡಿ ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವುದು ನಿಜವಾದ ದೇಶ ಪ್ರೇಮ ಎಂದು ಬಣ್ಣಿಸಿದರು.

ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಗಮನ ನೀಡಿ. ಬಡತನ, ಹಣ ಇಲ್ಲ ಎಂಬ ಕಾರಣಕ್ಕೆ ಶಾಲೆಯಿಂದ ಬಿಡಿಸಬೇಡಿ. ಬಡತನದಲ್ಲಿ ಹುಟ್ಟಿದವರು ಬಡತನದಲ್ಲಿಯೇ ಸಾಯಬೇಕೆಂದೆನಿಲ್ಲ. ಸಾಧನೆ ಮಾಡಿ ನೀವೂ ಶ್ರೀಮಂತರಾಗಬಹುದು. ಇದಕ್ಕೆ ಕಠಿಣ ಓದು, ಉತ್ತಮ ಶಿಕ್ಷಣ ಪಡೆದರೆ ಸಾಧನೆ ಕಷ್ಟವಾಗದು. ಸ್ವಾಭಿಮಾನದ ಜೀವನ ಸಾಗಿಸಬೇಕಾದರೆ ಶಿಕ್ಷಣ ಬೇಕೇ ಬೇಕು. ಮನೆಯಲ್ಲಿನ ಕಷ್ಟ ನಿಮ್ಮ ಓದಿಗೆ ಅಡ್ಡಿಯಾಗಬಾರದು. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಡಿ, ಓದಿನತ್ತ ಹೆಚ್ಚಿನ ಗಮನ ಹರಿಸಿ ಎಂದು ಸಲಹೆ ನೀಡಿದರು.

ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡುವ ಮೂಲಕ ಪ್ರಕಾಶಿಸುತ್ತಿದ್ದರೆ, ಭವಿಷ್ಯದಲ್ಲಿ ಮನೆಗೆ ಬೆಳಕಾಗುತ್ತಾರೆ. ಪೋಷಕರ ಕಷ್ಟಗಳನ್ನು ಪರಿಹರಿಸುತ್ತಾರೆ. ಮದುವೆ, ಗೃಹಪ್ರವೇಶದಂಥ ಸಮಾರಂಭಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆಗ ಮಾತ್ರ ಪ್ರತಿಯೊಬ್ಬರ ಜೀವನ ಹಸನಾಗಲು ಸಾಧ್ಯ ಎಂದು ತಿಳಿಸಿದರು.

ನಾನು ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಓದಿದ್ದೇನೆ. ಐದು ಬಾರಿ ಶಾಸಕನಾಗಿದ್ದೇನೆ. ಸಚಿವನಾಗಿಯೂ ಕೆಲಸ ನಿರ್ವಹಿಸಿದ್ದೇನೆ. ಈಗ ಸಭಾಪತಿ ಆಗಿದ್ದೇನೆ. ನನ್ನನ್ನು ಮೊದಲಿನಿಂದಲೂ ಸೈಯದ್ ಸೈಫುಲ್ಲಾ ಅವರು ಪ್ರೀತಿಯಿಂದ ಕಾಣುತ್ತಿದ್ದಾರೆ. ನನಗೂ ಅವರ ಬಗ್ಗೆ ವಿಶೇಷ ಗೌರವ, ಆತ್ಮೀಯತೆ ಇದೆ. ನನ್ನನ್ನು ಇಲ್ಲಿಗೆ ಕರೆಯಿಸಿ ನಿಮಗೆಲ್ಲಾ ಪ್ರೇರಣೆಯಾಗಿದ್ದಾರೆ. ಭವಿಷ್ಯದಲ್ಲಿ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳೆಲ್ಲರೂ ಉನ್ನತ ಸ್ಥಾನಕ್ಕೇರಲಿ. ಈ ಶಾಲೆ, ಪೋಷಕರು, ಶಿಕ್ಷಕರು, ದಾವಣಗೆರೆ ಕೀರ್ತಿ ಪತಾಕೆ ಹಾರಿಸುವಂಥ
ಸಾಧನೆ ಮಾಡಿ ಎಂದು ಕಿವಿಮಾತು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸೈಯದ್ ಸೈಫುಲ್ಲಾ ಅವರು, ಸ್ಪೀಕರ್ ಸ್ಥಾನದಲ್ಲಿದ್ದರೂ ಅಹಂ ಇಲ್ಲದೇ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಯು. ಟಿ. ಖಾದರ್ ಅವರ ವಿನಯತೆ, ಸರಳತೆ ಖುಷಿ ಕೊಟ್ಟಿದೆ. ವಿದ್ಯಾರ್ಥಿಗಳು ಓದಿನ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ. ಶಿಕ್ಷಕರು ಹೇಳಿಕೊಟ್ಟ ಪಾಠ ಸರಿಯಾಗಿ ಆಲಿಸಿ, ಮನೆಯಲ್ಲಿ ಮನನ ಮಾಡಿದರೆ ಭವಿಷ್ಯದಲ್ಲಿ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಶಾಸಕ ಕೆ. ಎಸ್. ಬಸವಂತಪ್ಪ, ಕಾಂಗ್ರೆಸ್ ಮುಖಂಡ ಕೆ. ಚಮನ್ ಸಾಬ್, ಅಯೂಬ್ ಪೈಲ್ವಾನ್, ನಸೀರ್ ಅಹ್ಮದ್, ಮನ್ಸೂರ್ ಅಲಿ, ಶಾಲೆಯ ಆಡಳಿತಾಧಿಕಾರಿ ಸೈಯದ್ ಅಲಿ, ಸಂಸ್ಥೆಯ ಶಿಕ್ಷಣ ಸಂಯೋಜಕ ಸಿದ್ಧಪ್ಪ ಸೇರಿದಂತೆ ಹಲವರು ಹಾಜರಿದ್ದರು.

Read also : ಅಪ್ರಾಪ್ತ ಬಾಲಕ ವಾಹನ ಚಾಲನೆ : ವಾಹನ ಮಾಲೀಕರಿಗೆ 25 ಸಾವಿರ ದಂಡ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davangere ಅಪ್ರಾಪ್ತ ಬಾಲಕ ವಾಹನ ಚಾಲನೆ : ವಾಹನ ಮಾಲೀಕರಿಗೆ 25 ಸಾವಿರ ದಂಡ
Next Article In memory of Chandrasekhara Azad ಕಾಂಗ್ರೆಸ್ ಪಕ್ಷದಿಂದ ಆಜಾದ್ ನಗರದಲ್ಲಿ ಚಂದ್ರಶೇಖರ್ ಆಜಾದ್ ಸ್ಮರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

Kannada News | Sanduru Stories | Dinamaana.com | 16-06-2024 ಲಾರಿ ಡೈವರಿಗೆ ದಿನಕ್ಕೆ ಐದು ಸಾವಿರ ದುಡಿಮೆ…

By Dinamaana Kannada News

kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!

ಕನಕಗಿರಿ : ಜನಸ್ಪಂದನ ಕಾರ್ಯಕ್ರಮದಲ್ಲಿ ಇವತ್ತು ಒಂದು ವಿಶಿಷ್ಟ ಘಟನೆ ನಡೆಯಿತು. ಹತ್ತು ವರ್ಷಗಳಿಂದ ಹುಡುಕಿದರೂ ಕನ್ಯೆ ಸಿಗುತ್ತಿಲ್ಲ ಆದಷ್ಟು…

By Dinamaana Kannada News

ದಣಿವರಿಯದ ಯುವ ನಾಯಕ ಲಿಯಾಖತ್ ಅಲಿ; ದಣಿವಿಲ್ಲದ ಸೇವೆ

ದಾವಣಗೆರೆ ದಣಿ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ತೋಟಗಾರಿಕೆ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?